HomeಮುಖಪುಟExplainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

- Advertisement -
- Advertisement -

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನಿಂದಾದ ಮುಖಭಂಗದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಚುನಾವಣೆ ನಂತರ ಬಂಗಾಳದಲ್ಲಿ ನಡೆದಿದೆ ಎನ್ನಲಾದ ‘ಹಿಂಸಾಚಾರದ’ ಹೆಸರಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದರ ಬಗ್ಗೆಗಿನ ಚರ್ಚೆಯನ್ನು ಬಿಜೆಪಿ ಮುನ್ನಲೆಗೆ ತಂದಿತ್ತು. ಇಷ್ಟೇ ಅಲ್ಲದೆ ರಾಜ್ಯದ ಮುಖ್ಯ ಕಾರ್ಯದರ್ಶಿಯ ವಿಚಾರದಲ್ಲೂ ಬಿಜೆಪಿ ಮತ್ತು ಟಿಎಂಸಿ ನಡುವೆ ರಾಜಕೀಯ ಸಂಘರ್ಷ ಮುಂದುವರೆಸಿತ್ತು. ಅದರೊಂದಿಗೆ ಬಂಗಾಳದ ಸಚಿವರು, ಶಾಸಕರನ್ನು ತನಿಖಾ ಸಂಸ್ಥೆಗಳು ಬಂಧಿಸಿದ್ದು ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.

ಇದೆಲ್ಲಾ ಏಕೆ ಹೇಳಬೇಕಾಯಿತು ಎಂದರೆ ಬಿಜೆಪಿಯ ಎಲ್ಲಾ ಪ್ರಯತ್ನಗಳಿಗೆ ಟಿಎಂಸಿ ದೊಡ್ಡ ಪ್ರತಿರೋಧ ಒಡ್ಡುತ್ತಿದೆ. ಕೆಲವೊಮ್ಮೆ ಮಮತಾ ಬ್ಯಾನರ್ಜಿ ಎದುರು ಬಿಜೆಪಿಯ ಘಟಾನುಘಟಿಗಳು ಮಂಡಿಯೂರಿದ ಪರಿಸ್ಥಿತಿ ಬಂದಿದೆ. ಈ ಅವಮಾನದಿಂದ ಹೊರಬರಲು ಬಿಜೆಪಿ ಮತ್ತೆ, ಮತ್ತೆ ಮಮತಾ ಬ್ಯಾನರ್ಜಿಯ ಬೆನ್ನು ಬಿದ್ದಿದೆ. ಇದೀಗ ಉತ್ತರಾಖಂಡದ ಮುಖ್ಯಮಂತ್ರಿಯನ್ನು ಬದಲಿಸುವ ಮೂಲಕ ಒಕ್ಕೂಟ ಸರ್ಕಾರವು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಮತ್ತೊಂದು ದಾಳ ಉರುಳಿಸಿದೆ.

ಉತ್ತರಾಖಂಡ ಸಿಎಂ ರಾಜೀನಾಮೆ

ಉತ್ತರಾಖಂಡದಲ್ಲಿ ಬಿಜೆಪಿ ಆಡಳಿತವಿದ್ದು, ಕರ್ನಾಟಕದಂತೆ ಅಲ್ಲಿ ಕೂಡಾ 2016 ರಲ್ಲಿ ಕಾಂಗ್ರೆಸ್‌ನಿಂದ ಶಾಸಕರನ್ನು ಆಪರೇಷನ್ ಮೂಲಕ ಬಿಜೆಪಿಗೆ ತರಲಾಗಿತ್ತು. ನಂತರ ನಡೆದ 2017ರ ಚುನಾವಣೆಯಲ್ಲಿ ಅಧಿಕಾರ ಹಿಡಿದ ಬಿಜೆಪಿಯಿಂದ ತ್ರಿವೇಂದ್ರ ಸಿಂಗ್ ರಾವತ್‌ ಅಧಿಕಾರಕ್ಕೆ ಏರಿದ್ದರು. ಆದರೆ ಈ ನಡುವೆ ವಲಸೆ ಬಿಜೆಪಿಗರು ಮತ್ತು ಮೂಲ ಬಿಜೆಪಿಗರ ನಡುವೆ ಕಚ್ಚಾಟಗಳು ಪ್ರಾರಂಭವಾಗಿ, ಭ್ರಷ್ಟಾಚಾರದ ಆರೋಪ ಹೊತ್ತಿದ್ದ ತ್ರಿವೇಂದ್ರ ಸಿಂಗ್ ರಾವತ್‌ ಅಧಿಕಾರ ಹಿಡಿದ ನಾಲ್ಕು ವರ್ಷಗಳ ಒಳಗೆ ರಾಜೀನಾಮೆ ನೀಡುವಂತಾಗಿತ್ತು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ಮುಂದಿನ ಒಂದು ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಬಿಜೆಪಿಯ ದೆಹಲಿ ನಾಯಕತ್ವ ಎರಡು ಬಣಗಳನ್ನು ಎದುರು ಹಾಕಿಕೊಳ್ಳಲು ತಯಾರಿರಲಿಲ್ಲ. ಹಾಗಾಗಿ ರಾಜ್ಯ ಬಿಜೆಪಿಯ ಎರಡು ಬಣಗಳಿಗೂ ಸೇರದ, ಅಷ್ಟೇನೂ ಪ್ರಭಾವ ಇಲ್ಲದ ತಿರಥ್‌ ಸಿಂಗ್ ರಾವತ್‌ ಅವರನ್ನು ಮುಖ್ಯಮಂತ್ರಿಯಾಗಿ ಕಳೆದ ಮಾರ್ಚ್‌ನಲ್ಲಿ ನೇಮಕ ಮಾಡಿತ್ತು. ಸಂಸದರಾಗಿರುವ ಅವರು ಮುಂದಿನ ಆರು ತಿಂಗಳ ಒಳಗೆ ಶಾಸಕರಾಗಿ ನೇಮಕವಾದರೆ ಮಾತ್ರ ಸಿಎಂ ಆಗಿ ಒಂದು ವರ್ಷದ ತನ್ನ ಅಧಿಕಾರಾವಧಿಯನ್ನು ಮುಗಿಸಬಹುದಾಗಿತ್ತು.

ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ
ತಿರಥ್‌‌ ಸಿಂಗ್ ರಾವತ್‌‌

ಆದರೆ ಅಧಿಕಾರಕ್ಕೆ ಏರಿದ ದಿನದಿಂದಲೂ ತಿರಥ್‌ ಸಿಂಗ್‌ ಸದಾ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಲೆ ಬಂದಿದ್ದಾರೆ. ಹರಿದ ಜೀನ್ಸ್ ಧರಿಸಿದ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿದ್ದು, 200 ವರ್ಷಗಳ ಕಾಲ ಭಾರತವನ್ನು ಆಳಿದ್ದು ಬ್ರಿಟನ್ ಅಲ್ಲ, ಅಮೆರಿಕ ಎಂದು ಹೇಳಿಕೆ ನೀಡಿದ್ದು, ತನ್ನ ಈ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದು, ಬಿಜೆಪಿಯನ್ನು ತೀವ್ರ ಮುಜುಗರಕ್ಕೀಡಾಗಿಸಿತ್ತು. ಇದರ ವಿರುದ್ದ ಉತ್ತರಾಖಂಡದ ಬಿಜೆಪಿ ನಾಯಕರು ದೆಹಲಿ ನಾಯಕತ್ವಕ್ಕೆ ದೂರು ನೀಡಿದ್ದರು.

ಇಷ್ಟೇ ಅಲ್ಲದೆ, ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಕುಂಭಮೇಳವನ್ನು ಅವರು ನಿಭಾಯಿಸಿದ ರೀತಿ ಹಾಗೂ ಕೊರೊನಾಗೆ ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ ಎಂಬ ಅವರ ಅಭಿಪ್ರಾಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಎರಡು ಭಾರಿ ಅವರ ಹೇಳಿಕೆಯನ್ನು ಖಂಡಿಸಿದ್ದರು. ಈ ನಡುವೆ ಜುಲೈ 2 ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಸಂಸದರಾಗಿದ್ದ ಪುಷ್ಕರ್‌ ಸಿಂಗ್ ಧಾಮಿ ಅವರು ಆಯ್ಕೆಯಾಗಿದ್ದಾರೆ. ಕಳೆದ ಆರು ತಿಂಗಳಲ್ಲಿ ರಾಜ್ಯವು ಒಟ್ಟು ಮೂರು ಮುಖ್ಯಮಂತ್ರಿಯನ್ನು ಕಂಡಂತಾಗಿದೆ.

ರಾಜೀನಾಮೆಗೆ ಕಾರಣವೇನು? ಚುನಾವಣ ಆಯೋಗದ ಪಾತ್ರವೇನು?

ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾದರೂ, ಅದು ಒಕ್ಕೂಟ ಸರ್ಕಾರದ ಅಣತಿಯಂತೆ ನಡೆಯುತ್ತದೆ ಎಂಬ ಆರೋಪವಿದೆ. ಅದನ್ನು ಕಳೆದ ಪಂಚರಾಜ್ಯ ಚುನಾವಣೆಯಲ್ಲಿ ಹಲವಾರು ವಿರೋಧ ಪಕ್ಷಗಳು ಇದನ್ನು ಆರೋಪಿಸಿದ್ದವು.

ಚುನಾವಣಾ ಆಯೋಗವು ಪಂಚರಾಜ್ಯ ಚುನಾವಣೆಗಳನ್ನು ನಿರ್ವಹಣೆ ಮಾಡಿದ್ದ ರೀತಿಗೆ ದೇಶದಾದ್ಯಂತ ಕೊರೊನಾ ಹರಡಲು ಕಾರಣವಾಗಿದೆ ಎಂಬ ಆರೋಪ ಮಾಡಲಾಗಿತ್ತು. ನ್ಯಾಯಾಲಯ ಕೂಡಾ ಆಯೋಗದ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿತ್ತು. ಹಾಗಾಗಿ ಉಪ ಚುನಾವಣೆಗಳನ್ನು ಘೋಷಿಸಲು ಚುನಾವಣಾ ಆಯೋಗವು ನಿರಾಸಕ್ತಿ ತೋರುತ್ತಿದೆ ಎನ್ನಲಾಗಿದೆ. ಹಾಲಿ ಉತ್ತರಾಖಂಡ ಸಿಎಂ ಸಂಸದರಾಗಿದ್ದು, ಅವರು ಸಿಎಂ ಆಗಿ ಮುಂದುವರೆಯಬೇಕಾದರೆ ಸಂವಿಧಾನದ ಆರ್ಟಿಕಲ್‌ 164(4) ರ ಪ್ರಕಾರ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಬೇಕಿದೆ.

ಉತ್ತರಖಂಡದಲ್ಲಿ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲದ ಕಾರಣ ಅವರು ನೇರ ಚುನಾವಣೆ ಎದುರಿಸಬೇಕಾಗಿರುವುದು ಅನಿವಾರ್ಯವಾಗಿದೆ. ಆದರೆ ಚುನಾವಣಾ ಆಯೋಗ ಉಪಚುನಾವಣೆ ನಡೆಸಲು ಹಿಂದೇಟು ಹಾಕುತ್ತಿರುವುದು ಮತ್ತು ಒಂದು ವೇಲೆ ಚುನಾವಣೆ ಘೋಷಣೆಯಾದರೆ ಅವರು ಗೆಲ್ಲುವುದು ಕಷ್ಟ ಹಾಗಾಗಿ ಅವರ ರಾಜೀನಾಮೆ ಪಡೆಯಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಬಿಜೆಪಿಯ ರಾಷ್ಟ್ರೀಯ ನಾಯಕತ್ವದ ಸಮ್ಮತಿಯಿದ್ದರೆ ಚುನಾವಣಾ ಆಯೋಗ ಉತ್ತರಾಖಂಡದಲ್ಲಿ ಉಪಚುನಾವಣೆ ನಡೆಸುತ್ತಿತ್ತು. ಆದರೆ ಅವರಿಗೆ ಉತ್ತರಾಖಂಡದ ವಿಷಯಕ್ಕಿಂತ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಮುಖಭಂಗ ಉಂಟು ಮಾಡುವುದು ಮುಖ್ಯವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಗಿಂತಲೂ ಭಾರೀ ಗಳಿಸಿದ್ದರೂ ಮಮತಾ ಬ್ಯಾನರ್ಜಿಯವರು ನಂದಿಗ್ರಾಮದಲ್ಲಿ ಕೂದಲೆಳೆ ಅಂತರದಲ್ಲಿ ಸೋಲನ್ನು ಅನುಭವಿಸಿದ್ದರು. ಈಗ ಅವರು ಸಿಎಂ ಆಗಿದ್ದು, ಆ ಸ್ಥಾನದಲ್ಲಿ ಮುಂದುವರೆಯಲು ಆರು ತಿಂಗಳೊಳಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಬೇಕಿದೆ. ವಿ‍ಶೇಷವೆಂದರೆ ಬಂಗಾಳದಲ್ಲಿಯೂ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲ. ಅಂದರೆ ಅವರು ನೇರ ಚುನಾವಣೆ ಎದುರಿಸಬೇಕಿದೆ.

ಆದರೆ ಇದೀಗ ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಅವರು ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಲಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ.

ಇದಕ್ಕೆ ಸಾಕ್ಷಿಯಾಗಿ “ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ತಿರಥ್ ಸಿಂಗ್ ರಾಜೀನಾಮೆ ನೀಡಿದ್ದು, ಮಮತಾ ಅವರನ್ನು ಮಣಿಸಲು ಉದ್ದೇಶಪೂರ್ವಕವಾಗಿ ಬಿಜೆಪಿ ಉರುಳಿಸಿದ ನೈತಿಕತೆಯ ದಾಳ” ಎಂದು ಕಾಂಗ್ರೆಸ್‌ನ ಕರಣ್‌ ಮಹರಾ ಹೇಳಿಕೆ ನೀಡಿದ್ದರು.

ಬಂಗಾಳ: ‘ಬಿಜೆಪಿ ಸೆಂಚುರಿ ಹೊಡೆದಿದೆ; ಮಮತಾ ಕ್ಲೀನ್ ಬೌಲ್ಡ್‌’ - ನರೇಂದ್ರ ಮೋದಿ

ಉತ್ತರಾಖಂಡ, ಪಶ್ಚಿಮ ಬಂಗಾಳದಲ್ಲಿ ವಿಧಾನ ಪರಿಷತ್‌ ವ್ಯವಸ್ಥೆಯಿಲ್ಲ. ಈ ವ್ಯವಸ್ಥೆಯಿದ್ದೆರೆ ಅಲ್ಲಿನ ರಾಜ್ಯಪಾಲರ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಮುಖ್ಯಮಂತ್ರಿ ಆಗಿ ಮುಂದುವರೆಯುವ ‌ಅವಕಾಶ ಇರುತ್ತದೆ. ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ ಬಿಟ್ಟರೆ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ಈ ವ್ಯವಸ್ಥೆಯಿದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಇದನ್ನೂ ಓದಿ: ಬೆಲೆ ಕಟ್ಟಲಾಗದ ಗೃಹಿಣಿಯರ ಮನೆ ಕೆಲಸಕ್ಕೆ ಇನ್ನಾದರೂ ಸಿಗಬಹುದೇ ಮನ್ನಣೆ?

1951 ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 151 ‘ಎ’ ಪ್ರಕಾರ ಖಾಲಿ ಉಳಿದಿರುವ ಸಂಸತ್‌ ಅಥವಾ ವಿಧಾನಸಭೆಗಳ ಸ್ಥಾನಗಳನ್ನು 6 ತಿಂಗಳ ಒಳಗೆ ಉಪಚುನಾವಣೆ ಮಾಡಿ ಭರ್ತಿ ಮಾಡಬೇಕಾಗುತ್ತದೆ. ಆದರೆ ಕೊರೊನಾ ಕಾರಣ ಕೊಟ್ಟು ಚುನಾವಣಾ ಆಯೋಗ ಉಪಚುನಾವಣೆಯನ್ನು ಮುಂದೂಡಿದರೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಆದರೆ ಒಕ್ಕೂಟ ಸರ್ಕಾರದ ನಿರಂತರ ಬೆದರಿಕೆಗಳನ್ನು ಎದುರಿಸುತ್ತಲೆ ಬಂದಿರುವ ಟಿಎಂಸಿ ಈ ಸಮಸ್ಯೆಗೂ ದಾರಿಯನ್ನು ಹುಡುಕಿಕೊಂಡಿದೆ. ರಾಜ್ಯದಲ್ಲಿ ಇದೀಗ ಒಟ್ಟು ಏಳು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಸಬೇಕಿದೆ. “ಒಂದು ವೇಳೆ ಉಪಚುನಾವಣೆ ನಡೆಯದಿದ್ದರೆ ಆರು ತಿಂಗಳ ಅವಧಿ ಮುಕ್ತಾಯಗೊಳ್ಳುವ ಎರಡು ದಿನಗಳ ಮೊದಲು ಮುಖ್ಯಮಂತ್ರಿ ಹುದ್ದೆಗೆ ಮಮತಾ ರಾಜೀನಾಮೆ ನೀಡಲಿದ್ದಾರೆ. ಎರಡು ದಿನಗಳ ಬಳಿಕ ಮತ್ತೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ” ಎಂದು ಟಿಎಂಸಿ ಸಂಸದರೊಬ್ಬರು ಹೇಳಿಕೆ ನೀಡಿದ್ದಾರೆ. ಅಲ್ಲಿಂದ ಆರು ತಿಂಗಳೊಳಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಂದಿನ ವರ್ಷ ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಬಿಜೆಪಿಗೆ ತಿಳಿದಿದ್ದರೂ ಕೂಡಾ, ಪಶ್ಚಿಮ ಬಂಗಾಳದಲ್ಲಿ ಆಗಿರುವ ಮುಖಭಂಗಕ್ಕೆ ಪ್ರತ್ಯುತ್ತರ ನೀಡಲು ಉತ್ತರಾಖಂಡದ ಮುಖ್ಯಮಂತ್ರಿಯನ್ನು ಬದಲಾಯಿಸಿದೆ. ಈ ಬದಲಾವಣೆ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಹಾನಿಯುಂಟು ಮಾಡಿದರೂ ಬಿಜೆಪಿ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದರೆ ಅದಕ್ಕೂ ಜಗ್ಗದಿರಲು ಟಿಎಂಸಿ ನಿರ್ಧರಿಸಿದೆ. ಮುಂದೇನಾಗಲಿದೆ ಎಂದು ಕಾಡು ನೋಡಬೇಕಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಅಧಿಕಾರ ವಹಿಸಿದ ಕೆಲವೇ ತಿಂಗಳಲ್ಲಿ ರಾಜೀನಾಮೆಗೆ ಮುಂದಾದ ಉತ್ತರಾಖಂಡ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...