Homeಕರೋನಾ ತಲ್ಲಣExplainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

- Advertisement -
- Advertisement -

ನಿನ್ನೆ ಶುಕ್ರವಾರದ ಮುಂಜಾನೆವರೆಗೆ, 18-45 ವಯೋಮಾನದ ಸುಮಾರು ಎರಡು ಕೋಟಿ ಯುವಜನರು ಕೋ-ವಿನ್ ಪ್ಲಾಟ್‌ಫಾರ್ಮಿನಲ್ಲಿ ಲಸಿಕೆ ಪಡೆಯಲು ನೋಂದಣಿ ಮಾಡಿಸಲು ಯತ್ನಿಸಿದ್ದಾರೆ. ಆದರೆ ಕರ್ನಾಟಕ ಸೇರಿದಂತೆ ಹತ್ತು ಹಲವು ರಾಜ್ಯಗಳು ಇವತ್ತಿನಿಂದ 3ನೇ ಹಂತದ ಲಸಿಕೆ ಅಭಿಯಾನ ಆರಂಭಿಸಿಲ್ಲ.

ಇದು ದೇಶದ ಲಸಿಕಾ ನೀತಿಯಲ್ಲಿನ ಅಸಂಬದ್ಧತೆ, ದೂರದರ್ಶಿತ್ವದ ಕೊರತೆ ಮತ್ತು ಜನರಿಗಿಂತ ಕಾರ್ಪೋರೇಟ್‌ಗಳು ಮೇಲು ಎನ್ನುವ ಪ್ರಭುತ್ವದ ಸಿದ್ದಾಂತಕ್ಕೆ ಅನುಗುಣವಾಗಿಯೇ ನಡೆದಿದ್ದು, ಭಾರತದಲ್ಲಿ ಮೊದಲ ಸಲ ಒಂದು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಳ್ಳ ಹಿಡಿಯುತ್ತಿರುವ ಸೂಚನೆಗಳನ್ನು ನೀಡುತ್ತಿದೆ. ಕಡೆಗೂ ಇವತ್ತು ಶನಿವಾರ ಮುಂಜಾನೆ ಎಚ್ಚೆತ್ತುಕೊಂಡ ಕೇಂದ್ರ ಆರೋಗ್ಯ ಇಲಾಖೆ ಲಸಿಕೆಗಳ ಬಗ್ಗೆ ಮಾತನಾಡಿದೆ.

ಆರೋಗ್ಯ ಇಲಾಖೆ ಹೇಳಿದ್ದೇನು?

79 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಳಿದಿವೆ. ಮುಂದಿನ ಮೂರು ದಿನಗಳಲ್ಲಿ 17 ಲಕ್ಷಕ್ಕೂ ಹೆಚ್ಚಿನ ಡೋಸ್‌ಗಳನ್ನು ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
17+79= 96 ಲಕ್ಷ ಡೋಸ್‌ಗಳು ಇನ್ನು ಮೂರು ದಿನದಲ್ಲಿ ದೇಶದ ಎಲ್ಲ ರಾಜ್ಯ ಸರ್ಕಾರಗಳು ಮತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇರಲಿವೆ. ಅದೇನೋ ಅರೆಕಾಸಿನ ಮಜ್ಜಿಗೆ ಅಂತಾರಲ್ಲ ಆ ಲೆಕ್ಕವಿದು. ಮಾತೆತ್ತಿದರೆ, ‘ಇಂತಹ ದೊಡ್ಡ ಜನಸಂಖ್ಯೆಯ ದೇಶದಲ್ಲಿ ಕೊರೊನಾ ನಿಯಂತ್ರಣ ಕಷ್ಟ ಎನ್ನುವ ಬಿಜೆಪಿ ಬೆಂಬಲಿಗರ ಸೋಗಲಾಡಿತನ ಇಲ್ಲೇ ಬೆತ್ತಲಾಗುವುದು. 96 ಲಕ್ಷ ಲಸಿಕೆ ಡೊಸ್ ಇಟ್ಟುಕೊಂಡು ದೇಶಾದ್ಯಂತ 3ನೆ ಹಂತದ ಲಸಿಕಾ ಅಭಿಯಾನ ಸಾಧ್ಯವೇ? ಅದೂ ಮೂರು ದಿನದ ಬಳಿಕವಂತೆ! ಆರೋಗ್ಯ ಇಲಾಖೆ ಏಪ್ರಿಲ್ 28ರಂದು 18-44 ವಯಸ್ಸಿನವರಿಗೆ ನೋಂದಣಿಗೆ ಕರೆ ನೀಡುವಾಗ ಈ ವಾಸ್ತವ ಅದಕ್ಕೆ ಗೊತ್ತು ಇರಲಿಲ್ಲವೇ? ಎಲ್ಲ ಗೊತ್ತು ಇರುತ್ತದೆ. ಆ ಕ್ಷಣದ, ಆ ದಿನದ ಜನರ ಆಕ್ರೋಶ, ರಾಜ್ಯ ಸರ್ಕಾರಗಳ ಅಸಮಾಧಾನ ಮತ್ತು ಕೋರ್ಟುಗಳ ಚಾಟಿ ಏಟುಗಳನ್ನು ತಪ್ಪಿಸಿಕೊಳ್ಳಲು ಹಾಗೆ ಮಾಡುತ್ತದೆ. ಇಡೀ ಕೋವಿಡ್ ನಿಯಂತ್ರಣದಲ್ಲಿ ಈ ಬೇಜವಾಬ್ದಾರಿಯೇ ಕೋವಿಡ್‌ ವಿರುದ್ಧದ ಹೋರಾಟದಲ್ಲಿನ ಹಿನ್ನಡೆಗೆ ಕಾರಣವಾಗಿದೆ ಅಲ್ಲವೇ?

ಕೇಂದ್ರವು ಈವರೆಗೆ ಸುಮಾರು 16.37 ಕೋಟಿ ಲಸಿಕೆ ಡೋಸ್‌ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದೆ. ಇದರಲ್ಲಿ, ನಾಶವಾದ ಲಸಿಕೆ ಸೇರಿದಂತೆ ಒಟ್ಟು ಬಳಕೆ 15,58,48,782 ಪ್ರಮಾಣಗಳಾಗಿವೆ ಎಂದು ಸರ್ಕಾರ ಮುಂಜಾನೆ ಹೇಳಿದೆ. (ನಾಶವಾಗಿದ್ದನ್ನು ಒಟ್ಟು ಬಳಕೆಯಾದ ಪ್ರಮಾಣಕ್ಕೆ ಸೇರಿಸಿಕೊಳ್ಳುವ ಕುತಂತ್ರ!)

ಮುಂದಿನ 3 ದಿನಗಳಲ್ಲಿ ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಿಗಲಿರುವುದು ಕೇವಲ 17,31,110 ಲಸಿಕೆಗಳು ಮಾತ್ರ! ಅದೂ ಗ್ಯಾರಂಟಿಯಿಲ್ಲವಂತೆ!

ಲಸಿಕಾ ಅಭಿಯಾನದ ಸುತ್ತ….

ಲಡಾಖ್‌ನ ಕೇಂದ್ರಾಡಳಿತ ಪ್ರದೇಶವು ತನ್ನ ಜನಸಂಖ್ಯೆಗಿಂತಲೂ ಹೆಚ್ಚಿನ ಪ್ರಮಾಣದ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ನೀಡಿದೆ. ಆದರೆ ಉತ್ತರ ಪ್ರದೇಶವು ಅತಿದೊಡ್ಡ ಪ್ರಮಾಣದಲ್ಲಿ ಕೇಂದ್ರದಿಂದ ಲಸಿಕೆಗಳನ್ನು ಪಡೆದಿದ್ದರೂ ಸಹ ಅದರ ಜನಸಂಖ್ಯೆಯ ಶೇಕಡಾ ಒಂದು ಭಾಗಕ್ಕೂ ಸಂಪೂರ್ಣವಾಗಿ ಲಸಿಕೆ ನೀಡಿಲ್ಲ.

ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಒಂದಾದ ಗುಜರಾತ್ ಲಸಿಕೆ ನೀಡುವಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಲಕ್ಷದ್ವೀಪ ಮತ್ತು ತಮಿಳುನಾಡು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ವ್ಯರ್ಥ ಮಾಡಿವೆ.

ಜನವರಿ 16 ರಂದು ಪ್ರಾರಂಭವಾದ ಲಸಿಕೆ ಚಾಲನೆಯ ಮೊದಲ ಹಂತದಲ್ಲಿ, ಲಸಿಕೆಗಳನ್ನು ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಕಾಯ್ದಿರಿಸಲಾಗಿತ್ತು. ಮಾರ್ಚ್ 1 ರಿಂದ, 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಲಕ್ಷಣ ಹೊಂದಿದ ಜನರು ಲಸಿಕೆ ಪಡೆಯಲು ಅರ್ಹರಾದರು. ಏಪ್ರಿಲ್ 1 ರಿಂದ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರು ಕೋವಿಡ್ ಲಸಿಕೆಗಳಿಗೆ ಅರ್ಹರಾದರು.

ಈಗ, ಇವತ್ತು ಮೇ 1 ರಿಂದ ಭಾರತವು ತನ್ನ ಕೋವಿಡ್ ವ್ಯಾಕ್ಸಿನೇಷನ್ ಅನ್ನು 18 ದಾಟಿದ ಎಲ್ಲಾ ವಯಸ್ಕರಿಗೆ ಮುಕ್ತಗೊಳಿಸಿದೆ. ಆದರೆ ತಯಾರಿ ಇರದ ಪರಿಣಾಮ ಮತ್ತು ಕೇಂದ್ರವು ಲಸಿಕಾ ಕಂಪನಿಗಳ ಮೇಲೆ ಯಾವುದೇ ನಿಯಂತ್ರಣ ಹೊಂದದ ಪರಿಣಾಮ ಇದು ಮುಗ್ಗರಿಸಿದೆ.

ಭಾರತದಲ್ಲಿ ಈವರೆಗೆ ಒಟ್ಟು 15,22,45,179 ( 15 ಕೋಟಿ 22 ಲಕ್ಷ 45,719) ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. 12,54,86,929 ಜನರಿಗೆ ಲಸಿಕೆಯ ಮೊದಲ ಡೋಸ್ ಸಿಕ್ಕಿದ್ದರೆ, 2,67,58,250 ಜನರು ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಒಟ್ಟಾರೆಯಾಗಿ, ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಲಸಿಕಾ ಅಭಿಯಾನದಲ್ಲ್ಲಿ ಉತ್ತಮ ಸಾಧನೆ ತೋರಿವೆ, ಕಳೆದ ವರ್ಷವಷ್ಟೇ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಉನ್ನತ ಸಾಧನೆ ಮಾಡಿದೆ. ತನ್ನ ಜನಸಂಖ್ಯೆಯ ಶೇಕಡಾ 11 ರಷ್ಟು ಜನರಿಗೆ ಲಸಿಕೆಯನ್ನು ಸಂಪೂರ್ಣವಾಗಿ ನೀಡಿದೆ, ಜನಸಂಖ್ಯೆಯ ಕಾಲು ಭಾಗದಷ್ಟು ಜನರು ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ, ಗುಜರಾತ್ ಮತ್ತು ರಾಜಸ್ಥಾನಗಳು ಉನ್ನತ ಪ್ರದರ್ಶನ ನೀಡಿವೆ. ಗುಜರಾತ್ ರಾಜ್ಯವು ಜನಸಂಖ್ಯೆಯ ಶೇಕಡಾ 3.42 ರಷ್ಟು ಜನರಿಗೆ ಸಂಪೂರ್ಣವಾಗಿ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದರೆ, ಶೇಕಡಾ 14.2 ರಷ್ಟು ಜನರು ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ.

ಅಂತೆಯೇ, ರಾಜಸ್ಥಾನದಲ್ಲಿ, ಶೇಕಡಾ 13.6 ರಷ್ಟು ಜನಸಂಖ್ಯೆಯು ಕನಿಷ್ಠ ಮೊದಲ ಡೋಸ್ ಪಡೆದಿದೆ. 2.77 ರಷ್ಟು ಜನಸಂಖ್ಯೆಯು ಎರಡೂ ಡೋಸ್ ಸ್ವೀಕರಿಸಿದೆ.
ಲಡಾಖ್, ಸಿಕ್ಕಿಂ ಮತ್ತು ತ್ರಿಪುರವನ್ನು ಹೊರತುಪಡಿಸಿ, ಇತರ ಎಲ್ಲ ರಾಜ್ಯಗಳು ಜನಸಂಖ್ಯೆಯ ಶೇಕಡಾ 20 ಕ್ಕಿಂತ ಕಡಿಮೆ ಜನಸಂಖ್ಯೆಗೆ ಕನಿಷ್ಠ ಒಂದು ಡೋಸ್‌ನೊಂದಿಗೆ ಲಸಿಕೆ ನೀಡಿದರೆ, ಶೇಕಡಾ 5 ಕ್ಕಿಂತ ಕಡಿಮೆ ಜನರು ಎರಡೂ ಪ್ರಮಾಣಗಳನ್ನು ಪಡೆದಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಶೇಕಡಾ 1.97 ಜನರಿಗೆ ಸಂಪೂರ್ಣ ಲಸಿಕೆ (ಎರಡೂ ಡೋಸ್) ಸಿಕ್ಕಿದ್ದ್ದರೆ, ಶೇ. 9.24 ಜನರು ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ. ಪರಿಸ್ಥಿತಿ ಹೀಗಿರುವಾಗ ವಿದೇಶಗಳಿಗೆ ಲಸಿಕೆ ರಫ್ತು ಮಾಡಿದ್ದು ಏಕೆ ಎಂದು ಪ್ರಶ್ನೆ ಕೇಳಿಬಂದಿದೆ.

ಲಸಿಕೆ ಪೋಲು

ಲಕ್ಷದ್ವೀಪ ಮತ್ತು ತಮಿಳುನಾಡು ಹೆಚ್ಚು ಲಸಿಕೆ ಪೋಲು ಮಾಡಿದ ರಾಜ್ಯಗಳಾಗಿವೆ. ಲಕ್ಷದ್ವೀಪ ತನ್ನ ಶೇಕಡಾ 9.76 ಪ್ರಮಾಣವನ್ನು ವ್ಯರ್ಥ ಮಾಡಿದರೆ, ತಮಿಳುನಾಡು ತನ್ನ ಲಸಿಕೆಗಳಲ್ಲಿ ಶೇ. 8.83 ರಷ್ಟನ್ನು ಪೋಲು ಮಾಡಿದೆ. (ಸಮಯಕ್ಕೆ ಸರಿಯಾಗಿ ಲಸಿಕೆ ನೀಡದಿದ್ದಲ್ಲಿ ಅದರ ಅವಧಿ ಮುಗಿದಾಗ ಅದು ವ್ಯರ್ಥವಾಗುತ್ತದೆ.)

ತಮಿಳುನಾಡಿನಲ್ಲಿ ಶೇಕಡಾ 8.83 ರಷ್ಟು ವ್ಯರ್ಥವಾಗುವುದು ಅಂದರೆ 5,16,191 ಡೋಸ್ ವ್ಯರ್ಥವಾದಂತೆ. ಇದು ಲಡಾಖ್‌ನಂತಹ ಸಣ್ಣ ಪ್ರದೇಶದ ಸಂಪೂರ್ಣ ಜನಸಂಖ್ಯೆಯನ್ನು ಸಂಪೂರ್ಣವಾಗಿ ಲಸಿಕೆ ಮಾಡಲು ಸಾಕು.

ಹೆಚ್ಚುವರಿ ಲಸಿಕೆ

ಆರೋಗ್ಯ ಸಚಿವಾಲಯದ ಪ್ರಕಾರ, ಭಾರತವು ಇನ್ನೂ 79 ಲಕ್ಷ ಡೋಸ್‌ಗಳು ರಾಜ್ಯಗಳ ಬಳಿ ಇವೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು 11,80,659 ಲಸಿಕೆಗಳು ಇದ್ದು, ನಂತರದ ಸ್ಥಾನದಲ್ಲಿ ಬಿಹಾರ (8,36,283) ಇದೆ. ಈ ಎರಡೂ ರಾಜ್ಯಗಳು ಲಸಿಕಾ ಅಭಿಯಾನದಲ್ಲಿ ಕಳಪೆ ಸಾಧನೆ ಮಾಡಿವೆ.

ಮೊದಲ ಡೋಸ್ ಮತ್ತು ಎರಡನೇ ಡೋಸ್

ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28-56 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿರುವುದರಿಂದ, ಎರಡನೇ ಡೋಸ್‌ನ ಗ್ರಾಫ್ ಮೊದಲನೆಯದಕ್ಕೆ ಸಮಾನಾಂತರವಾಗಿ ಚಲಿಸಬೇಕು. ಆದರೆ ಹಾಗೆ ಆಗುತ್ತಿಲ್ಲ!

ಕೃಪೆ: ದಿ ಪ್ರಿಂಟ್

ಎರಡು ಪ್ಲಾಟ್‌ಗಳ ನಡುವೆ ಹೆಚ್ಚುತ್ತಿರುವ ಅಂತರವು ಅನೇಕ ಜನರು ತಮ್ಮ ಎರಡನೇ ಡೋಸ್ ಅನ್ನು ವಿಳಂಬಗೊಳಿಸುತ್ತಿದ್ದಾರೆ ಎಂದು ಸೂಚಿಸುತ್ತದೆ. ಲಸಿಕೆಗಳು ಲಭ್ಯವಿಲ್ಲದಿರುವುದು ಅಥವಾ ಪ್ರಕರಣಗಳ ಹೆಚ್ಚಳದಿಂದಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಲು ಹಿಂಜರಿಯುವುದು ಇದಕ್ಕೆ ಕಾರಣವಾಗಿರಬಹುದು.

ಕೋವಿಶೀಲ್ಡ್ ಮತ್ತು ಕೊವಾಕ್ಸಿನ್

ಇಲ್ಲಿಯವರೆಗೆ ನೀಡಲಾದ ಒಟ್ಟು ಲಸಿಕೆಗಳಲ್ಲಿ ಭಾರತ್ ಬಯೊಟೆಕ್‌ನ ಶೇ.9ರಷ್ಟು ಕೋವ್ಯಾಕ್ಸಿನ್ ಲಸಿಕೆಗಳಿವೆ. ಈವರೆಗೆ ಶೇಕಡಾ 90 ಕ್ಕೂ ಹೆಚ್ಚು ಭಾರತೀಯರು ಸೀರಂನ ಕೋವಿಶೀಲ್ಡ್ ಲಸಿಕೆ ಪಡೆದಿದ್ದಾರೆ. ಕೇಂದ್ರದಿಂದ 1,500 ಕೋಟಿ ರೂ, ಹಣ ಪಡೆದ ಭಾರತ್ ಬಯೋಟೆಕ್ ಸಾಧನೆ ಗಮನಿಸಿ!

ಲಿಂಗವಾರು ವಿತರಣೆ

ಇಲ್ಲಿಯವರೆಗೆ, ಲಸಿಕೆ ಪಡೆದವರಲ್ಲಿ ಶೇಕಡಾ 52.18 ರಷ್ಟು ಪುರುಷರು, ಶೇ. 47.8 ರಷ್ಟು ಮಹಿಳೆಯರು ಇದ್ದಾರೆ. ಶೇಕಡಾ 0.01 ರಷ್ಟು ಲಸಿಕೆಗಳನ್ನು ತೃತೀಯ ಲಿಂಗಿಗಳಿಗೆ ನೀಡಲಾಗಿದೆ.

* ಪಿ.ಕೆ. ಮಲ್ಲನಗೌಡರ್

(ಮಾಹಿತಿ: ಕೇಂದ್ರ ಆರೋಗ್ಯ ಇಲಾಖೆ, ದಿ ಪ್ರಿಂಟ್ ಮತ್ತು ಇತರ ಮೂಲಗಳು)

ಚಿತ್ರಗಳು: ದಿ ಪ್ರಿಂಟ್


ಇದನ್ನೂ ಓದಿ:ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯೋಗ್ಯರು, ಅಪ್ರಾಮಾಣಿಕರು ಹಾಗೂ ಅದಕ್ಶರ ಕೈಗೆ ಅಧಿಕಾರ ಸಿಕ್ಕಿರುವುದರ ಪರಿಣಾಮವನ್ನು ನಾವಿಂದು ಅನುಬವಿಸುತ್ತಿದ್ದೇವೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...