HomeಮುಖಪುಟExplainer | ಒಂದು ದೇಶ, ಒಂದು ಚುನಾವಣೆ : ಕೇಂದ್ರದ ಮಸೂದೆಯಲ್ಲಿ ಏನಿದೆ?

Explainer | ಒಂದು ದೇಶ, ಒಂದು ಚುನಾವಣೆ : ಕೇಂದ್ರದ ಮಸೂದೆಯಲ್ಲಿ ಏನಿದೆ?

- Advertisement -
- Advertisement -

ದೇಶದಲ್ಲಿ ಪ್ರಸ್ತುತ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಪ್ರತಿಪಕ್ಷಗಳು ಮತ್ತು ದೇಶದ ಬಹುಪಾಲು ಜನರ ತೀವ್ರ ವಿರೋಧದ ನಡುವೆಯೂ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಮಂಗಳವಾರ (ಡಿ.17) ವಿವಾದಿತ ಮಸೂದೆಗಳನ್ನು ಮಂಡಿಸಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಗೆ ಸಂಬಂಧಿಸಿದಂತೆ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಈ ಪೈಕಿ ಒಂದು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ‘ಸಂವಿಧಾನ ಮಸೂದೆ-2024 ಅಥವಾ ಸಂವಿಧಾನದ 129ನೇ ತಿದ್ದುಪಡಿ ಮಸೂದೆ‘. ಇನ್ನೊಂದು ಸಂವಿಧಾನ ಮಸೂದೆಗೆ ಪೂರಕವಾಗಿ ‘ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆಗಳ (ತಿದ್ದುಪಡಿ) ಮಸೂದೆ-2024‘.

ಸಂವಿಧಾನ ಮಸೂದೆ-2024 ಅಥವಾ ಸಂವಿಧಾನದ 129ನೇ ತಿದ್ದುಪಡಿ ಮಸೂದೆಯು ಪ್ರತಿ ಜನಗಣತಿಯ ನಂತರ ಸಂಸತ್ತಿನ ಸ್ಥಾನಗಳ ಮರು ವಿಂಗಡನೆಯ ಕುರಿತು ವಿವರಿಸುವ ಸಂವಿಧಾನದ 82ನೇ ವಿಧಿಯ ನಂತರ ’82ಎ’ ಎಂಬ ಹೊಸ ವಿಧಿಯನ್ನು ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸುತ್ತದೆ.

ಇದರ ಜೊತೆಗೆ ಸಂಸತ್ತಿನ ಸದನಗಳ ಅವಧಿಯ ಕುರಿತು ವಿವರಿಸುವ ಸಂವಿಧಾನದ 83ನೇ ವಿಧಿಯ ಪರಿಚ್ಚೇದ (2) ರ ನಂತರ ಹೊಸದಾಗಿ ಐದು ಪರಿಚ್ಚೇದಗಳನ್ನು (ಪರಿಚ್ಚೇದ (3), (4), (5), (6) ಮತ್ತು ( 7) ಸೇರಿಸುವ ಬಗ್ಗೆ ಪ್ರಸ್ತಾಪಿಸುತ್ತದೆ.

ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್‌ಗಳ ಅವಧಿಯ ಕುರಿತು ವಿವರಿಸುವ ಸಂವಿಧಾನ 172ನೇ ವಿಧಿಯ ಪರಿಚ್ಚೇದ (1) ನಂತರ ಹೊಸದಾಗಿ ಪರಿಚ್ಛೇದ (1ಎ) ಮತ್ತು ಪರಿಚ್ಛೇದ (2) ರ ನಂತರ ಹೊಸದಾಗಿ ಮೂರು ಪರಿಚ್ಛೇದಗಳನ್ನು (ಪರಿಚ್ಚೇದ (3), (4) ಮತ್ತು (5) ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸುತ್ತದೆ.

ಶಾಸಕಾಂಗದ ಚುನಾವಣೆಗೆ ಸಂಬಂಧಿಸಿದಂತೆ ನಿಬಂಧನೆಗಳನ್ನು ಮಾಡಲು ಸಂಸತ್ತಿನ ಅಧಿಕಾರ ಕುರಿತು ವಿವರಿಸುವ ಸಂವಿಧಾನ 327ನೇ ವಿಧಿಗೆ ಸಣ್ಣ ತಿದ್ದುಪಡಿ ತಂದು ‘ಕ್ಷೇತ್ರಗಳ ಪುನರ್‌ವಿಂಗಡನೆ ಎಂಬ ಪದಗಳ ನಂತರ ಏಕಕಾಲಕ್ಕೆ ಚುನಾವಣೆ ನಡೆಸುವುದು’ ಎಂಬ ಪದಗಳನ್ನು ಸೇರಿಸುವ ಬಗ್ಗೆ ಪ್ರಸ್ತಾಪಿಸುತ್ತದೆ.

ಕೇಂದ್ರ ಸರ್ಕಾರ ಮಂಡಿಸಿರುವ ಮಸೂದೆಯಲ್ಲಿ ಪ್ರಸ್ತಾಪಿಸಿರುವ ಹೊಸ ವಿಧಿಗಳು ಮತ್ತು ಪರಿಚ್ಛೇದಗಳು ಏನು ಹೇಳುತ್ತದೆ ಎಂದು ವಿವರವಾಗಿ ನೋಡೋಣ…

ವಿಧಿ 82ಎ : ಈ ವಿಧಿಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ವಿವರಿಸುತ್ತದೆ. ಇದು ಏಳು ಪರಿಚ್ಛೇದಗಳನ್ನು ಒಳಗೊಂಡಿದೆ.

ಪರಿಚ್ಛೇದ (1) : ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಯ ಮೊದಲ ಅಧಿವೇಶನದ ಆರಂಭದ ದಿನ ರಾಷ್ಟ್ರಪತಿ ಸಾರ್ವಜನಿಕ ಅಧಿಸೂಚನೆ ಹೊರಡಿಸುತ್ತಾರೆ. ಅಂದಿನಿಂದ ಈ ವಿಧಿಯ ನಿಯಮಗಳು ಜಾರಿಗೆ ಬರುತ್ತದೆ. ಅಧಿಸೂಚನೆ ಹೊರಡಿಸಿದ ದಿನವನ್ನು ‘ಅನುಷ್ಠಾನ ದಿನ’ ಎಂದು ಕರೆಯಲಾಗುತ್ತದೆ.

ಪರಿಚ್ಛೇದ (2) : ಅನುಷ್ಠಾನ ದಿನದ ನಂತರ ಮತ್ತು ಲೋಕಸಭೆಯ ಅವಧಿ ಪೂರ್ಣಗೊಳ್ಳುವುದಕ್ಕೂ ಮುನ್ನ ನಡೆದ ಚುನಾವಣೆಯ ಮೂಲಕ ಅಸ್ತಿತ್ವಕ್ಕೆ ಬಂದ ಎಲ್ಲಾ ವಿಧಾನಸಭೆಗಳ ಅವಧಿಯು ಲೋಕಸಭೆಯ ಅವಧಿ ಪೂರ್ಣಗೊಳ್ಳುವಾಗ ಕೊನೆಯಾಗಲಿದೆ.

ಪರಿಚ್ಛೇದ (3) : ಲೋಕಸಭೆಯ ಅವಧಿ ಮುಕ್ತಾಯಗೊಳ್ಳುವ ಮೊದಲು ಭಾರತೀಯ ಚುನಾವಣಾ ಆಯೋಗ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 15ನೇ (XV) ಅಧ್ಯಾಯವನ್ನು ಈ ಚುನಾವಣೆಗೆ ಅನ್ವಯಿಸಬೇಕು. ಏನಾದರು ಬದಲಾವಣೆಗಳು ಅಗತ್ಯವಿದ್ದರೆ, ಆಯೋಗವು ನಿರ್ದಿಷ್ಟ ಆದೇಶವನ್ನು ಹೊರಡಿಸಬೇಕು.

ಪರಿಚ್ಛೇದ (4) : ವಿಧಿಯಲ್ಲಿ ಬರುವ ‘ಏಕಕಾಲಕ್ಕೆ ಚುನಾವಣೆ’ ಎಂದರೆ ಲೋಕಸಭೆ ಮತ್ತು ಎಲ್ಲಾ ವಿಧಾನಸಭೆಗಳ ರಚನೆಗಾಗಿ ನಡೆಯುವ ‘ಸಾರ್ವತ್ರಿಕ ಚುನಾವಣೆ’ ಎಂದರ್ಥ.

ಪರಿಚ್ಛೇದ (5) : ಲೋಕಸಭೆಯ ಸಾರ್ವತ್ರಿಕ ಚುನಾವಣೆಯ ವೇಳೆ ಯಾವುದಾದರು ವಿಧಾನಸಭೆಗೆ ಚುನಾವಣೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಕಂಡು ಬಂದರೆ, ಆ ವಿಧಾನಸಭೆಗೆ ಬೇರೊಂದು ದಿನ ಚುನಾವಣೆ ನಡೆಸುವ ಸಂಬಂಧ ಆದೇಶ ಹೊರಡಿಸುವಂತೆ ರಾಷ್ಟ್ರಪತಿಗೆ ಚುನಾವಣಾ ಆಯೋಗ ಶಿಫಾರಸು ಮಾಡಬಹುದು.

ಪರಿಚ್ಛೇದ (6) : ಪರಿಚ್ಛೇದ (5) ರ ಅಡಿಯಲ್ಲಿ ವಿಧಾನಸಭೆ ಚುನಾವಣೆ ಮುಂದೂಡಿಕೆಯಾಗಿ ನಂತರ ಅಲ್ಲಿ ಅಸ್ತಿತ್ವಕ್ಕೆ ಬರುವ ಹೊಸ ವಿಧಾನಸಭೆಯ ಅವಧಿಯು ಸಾರ್ವತ್ರಿಕ ಚುನಾವಣೆಯ ನಂತರ ರಚನೆಯಾದ ಲೋಕಸಭೆಯ ಅವಧಿ ಪೂರ್ಣಗೊಂಡ ದಿನದಂದೇ ಕೊನೆಗೊಳ್ಳುತ್ತದೆ.

ಪರಿಚ್ಛೇದ (7) : ಚುನಾವಣಾ ಆಯೋಗವು ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಿಸುವಾಗಲೇ ಅದರ ಅವಧಿ ಯಾವಾಗ ಮುಕ್ತಾಯವಾಗುತ್ತದೆ ಎಂದು ಘೋಷಿಸಬೇಕು.

83ನೇ ವಿಧಿಗೆ ತಿದ್ದುಪಡಿ : ಕೇಂದ್ರ ಸರ್ಕಾರದ ಮಸೂದೆಯಲ್ಲಿ ಸಂವಿಧಾನದ 83ನೇ ವಿಧಿಯ ಪರಿಚ್ಛೇದ 2ರ ನಂತರ ನಾಲ್ಕು ಹೊಸ ಪರಿಚ್ಛೇದಗಳ ಸೇರ್ಪಡೆ ಬಗ್ಗೆ ಪ್ರಸ್ತಾಪಿಸಲಾಗಿದೆ. ಅವುಗಳ ಬಗ್ಗೆ ನೋಡೋಣ…

ಪರಿಚ್ಚೇದ (3) : ಸಾರ್ವತ್ರಿಕ ಚುನಾವಣೆಯ ನಂತರ ಅಸ್ತಿತ್ವಕ್ಕೆ ಬಂದ ಲೋಕಸಭೆಯ ಮೊದಲ ಅಧಿವೇಶನದ ಮೊದಲ ದಿನದಿಂದ ಮುಂದಿನ ಐದು ವರ್ಷಗಳವರೆಗಿನ ಅವಧಿಯನ್ನು ಲೋಕಸಭೆಯ ‘ಪೂರ್ಣ ಅವಧಿ’ ಎಂದು ಪರಿಗಣಿಸಬೇಕು.

ಪರಿಚ್ಛೇದ (4) : ಪೂರ್ಣಾವಧಿಗೂ ಮೊದಲೇ ಲೋಕಸಭೆ ವಿಸರ್ಜನೆಯಾದರೆ, ವಿಸರ್ಜನೆಯಾದ ದಿನದಿಂದ ಲೋಕಸಭೆಯ ಕೊನೆಯ ದಿನದವರೆಗಿನ ಅವಧಿಯನ್ನು ಆ ಲೋಕಸಭೆಯ ‘ಬಾಕಿ ಉಳಿದಿರುವ’ ಅವಧಿ ಎಂದು ಕರೆಯಬೇಕು.

ಪರಿಚ್ಛೇದ (5) : ಲೋಕಸಭೆಯನ್ನು ಅವಧಿಗೂ ಮುನ್ನ ವಿಸರ್ಜನೆ ಮಾಡಿದ ಸಂದರ್ಭದಲ್ಲಿ ಚುನಾವಣೆಯ ಮೂಲಕ ಅಸ್ತಿತ್ವಕ್ಕೆ ಬರಲಿರುವ ಹೊಸ ಲೋಕಸಭೆಯು ಹಿಂದಿನ ಲೋಕಸಭೆಯ ಬಾಕಿ ಉಳಿದಿರುವ ಕಾರ್ಯನಿರ್ವಹಿಸುತ್ತದೆ. ಈ ಅವಧಿ ಮುಕ್ತಾಯವಾದರೆ ಸದನವು ವಿಸರ್ಜನೆಯಾದಂತೆ.

ಪರಿಚ್ಛೇದ (6) : ಪರಿಚ್ಛೇದ (5) ಅಡಿ ರಚನೆಯಾದ ಲೋಕಸಭೆಯ ಹಿಂದಿನ ಲೋಕಸಭೆಯ ಮುಂದುವರಿಕೆಯಲ್ಲ. ಪರಿಚ್ಛೇದ (4) ರಲ್ಲಿ ವಿವರಿಸಲಾದ ಸದನ ವಿಸರ್ಜನೆಗೆ ಸಂಬಂಧಿಸಿದ ಪ್ರಕ್ರಿಯೆಗೆ ಅನ್ವಯಿಸುತ್ತದೆ.

ಪರಿಚ್ಛೇದ (7) : ಬಾಕಿ ಉಳಿದಿರುವ ಅವಧಿಗಾಗಿ ಲೋಕಸಭೆ ರಚಿಸಲು ನಡೆಸಲಾಗುವ ಚುನಾವಣೆಯನ್ನು ‘ಮಧ್ಯಂತರ ಚುನಾವಣೆ’ ಎಂದು ಕರೆಯಬೇಕು. ಪೂರ್ಣಾವಧಿ ಕೊನೆಗೊಂಡ ನಂತರ ನಡೆಸುವ ಚುನಾವಣೆಯನ್ನು ‘ಸಾರ್ವತ್ರಿಕ ಚುನಾವಣೆ’ ಎಂದು ಕರೆಯಬೇಕು.

172ನೇ ವಿಧಿಯ ತಿದ್ದುಪಡಿ : ಕೇಂದ್ರದ ಮಸೂದೆಯು ಸಂವಿಧಾನ ವಿಧಿ 172ರ ಪರಿಚ್ಛೇದ (1) ನಂತರ (1ಎ) ಮತ್ತು ಪರಿಚ್ಛೇದ (2) ರ ನಂತರ ಮೂರು ಹೊಸ ಪರಿಚ್ಛೇದಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾಪಿಸುತ್ತದೆ.

ಪರಿಚ್ಛೇದ (1ಎ) : ರಾಜ್ಯ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದಿಂದ ಮುಂದಿನ ಐದು ವರ್ಷಗಳನ್ನು ರಾಜ್ಯ ವಿಧಾನಸಭೆಯ ಪೂರ್ಣಾವಧಿ ಎಂದು ಕರೆಯಲಾಗುತ್ತದೆ.

ಪರಿಚ್ಛೇದ (3) : ಪೂರ್ಣಾವಧಿಗೂ ಮುನ್ನ ರಾಜ್ಯ ವಿಧಾನಸಭೆ ವಿಸರ್ಜನೆಯಾದರೆ, ವಿಸರ್ಜನೆಯಾದ ದಿನದಿಂದ ಆ ವಿಧಾನಸಭೆಯ ಕೊನೆಯ ದಿನದವರೆಗಿನ ಅವಧಿಯನ್ನು ‘ಬಾಕಿ ಉಳಿದಿರುವ ಅವಧಿ’ ಎಂದು ಕರೆಯಬೇಕು.

ಪರಿಚ್ಛೇದ (4): ವಿಧಾನಸಭೆಯನ್ನು ಅವಧಿಗೂ ಮುನ್ನ ವಿಸರ್ಜನೆ ಮಾಡಿದ ಸಂದರ್ಭದಲ್ಲಿ, ಚುನಾವಣೆಯ ಮೂಲಕ ಅಸ್ತಿತ್ವಕ್ಕೆ ಬರಲಿರುವ ಹೊಸ ವಿಧಾನಸಭೆಯು ಹಿಂದಿನ ವಿಧಾನಸಭೆಯ ಬಾಕಿ ಉಳಿದಿರುವ ಅವಧಿಗೆ ಕಾರ್ಯನಿರ್ವಹಿಸುತ್ತದೆ. ಈ ಅವಧಿಯು ಮುಕ್ತಾಯವಾದಾಗ ಹೊಸ ವಿಧಾನಸಭೆಯು ವಿಸರ್ಜನೆಯಾಯಿತು ಎಂದು ಪರಿಗಣಿಸಬೇಕು.

ಪರಿಚ್ಛೇದ (5) : ಪರಿಚ್ಛೇದ (4) ರ ಅಡಿ ರಚನೆಯಾದ ರಾಜ್ಯ ವಿಧಾನಸಭೆಯು ಹಿಂದಿನ ರಾಜ್ಯ ವಿಧಾನಸಭೆಯ ಮುಂದುವರಿಕೆಯಲ್ಲ. ಪರಿಚ್ಛೇದ (3)ರಲ್ಲಿ ಉಲ್ಲೇಖಿಸಲಾಗಿರುವ ಸದನದ ವಿಸರ್ಜನೆಗೆ ಸಂಬಂಧಿಸಿದ ಎಲ್ಲಾ ವಿವರಗಳು ಈ ವಿಧಾನಸಭೆಗೆ ಅನ್ವಯಿಸುತ್ತದೆ.

ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆಗಳ (ತಿದ್ದುಪಡಿ) ಮಸೂದೆ-2024

ಸಂವಿಧಾನ ತಿದ್ದುಪಡಿ ಮಸೂದೆಗೆ ಪೂರಕವಾಗಿ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆಗಳ (ತಿದ್ದುಪಡಿ) ಮಸೂದೆ-2024 ಅನ್ನು ಕೇಂದ್ರ ಸರ್ಕಾರ ಮಂಗಳವಾರ (ಡಿ.17) ಮಂಡಿಸಿದೆ.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಈ ಮಸೂದೆಯು 1963ರ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಕಾಯ್ದೆ, ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶಗಳ ಸರ್ಕಾರ ಕಾಯ್ದೆ-1991 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ ಕಾಯ್ದೆ-2019ಕ್ಕೆ ತಿದ್ದುಪಡಿ ತರಲು ಪ್ರಸ್ತಾಪಿಸುತ್ತದೆ.

ಮಸೂದೆ ಮಂಡನೆ ಆಯ್ತು ಮುಂದೇನು?

ಲೋಕಸಭೆಯಲ್ಲಿ ಮಂಗಳವಾರ (ಡಿ.17) ಮಸೂದೆಗಳ ಮಂಡನೆ ಬಳಿಕ, ಅದಕ್ಕೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ನಡೆದ ಮತ ಚಲಾವಣೆ ಪ್ರಕ್ರಿಯೆಯಲ್ಲಿ 269 ಸದಸ್ಯರು ಮಸೂದೆಯ ಪರವಾಗಿ ಹಾಗೂ 198 ಸದಸ್ಯರು ವಿರೋಧವಾಗಿ ಮತ ಹಾಕಿದ್ದಾರೆ.

ಮಸೂದೆಗಳ ಮಂಡನೆಯ ನಂತರ, ಅವುಗಳ ಕುರಿತು ವಿಸ್ಕೃತ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲು ಕೇಂದ್ರ ಸರ್ಕಾರ ಸ್ಪೀಕರ್‌ಗೆ ಮನವಿ ಮಾಡಿದೆ.

ಲೋಕಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಜೆಪಿಸಿ ರಚನೆಯ ಬಗ್ಗೆ ಪ್ರಕಟಿಸಲಿದ್ದಾರೆ. ನಿಯಮಗಳ ಪ್ರಕಾರ, ಸಂಸತ್ತಿನ ಉಭಯ ಸದನಗಳ ಸದಸ್ಯರು ಸೇರಿ ಜೆಪಿಸಿಯಲ್ಲಿ ಗರಿಷ್ಠ 31 ಜನರು ಇರುತ್ತಾರೆ. ಈ ಪೈಕಿ ಲೋಕಸಭೆಯ 21 ಮತ್ತು ರಾಜ್ಯಸಭೆಯ 10 ಸದಸ್ಯರು ಇರಲಿದ್ದಾರೆ.

ಸಂವಿಧಾನ ತಿದ್ದುಪಡಿ ಮಸೂದೆಯ ಜೆಪಿಸಿಯ ಅಧ್ಯಕ್ಷ ಸ್ಥಾನ ಬಿಜೆಪಿಗೆ ಸಿಗುವ ಸಾಧ್ಯತೆ ಇದೆ. ಬಹುಮತದ ಆಧಾರದ ಮೇಲೆ ಬಿಜೆಪಿಗೆ ಜೆಪಿಸಿಯಲ್ಲಿ ಹೆಚ್ಚಿನ ಸ್ಥಾನವೂ ಸಿಗಲಿದೆ.

ಮಸೂದೆಯು ಜೆಪಿಸಿಗೆ ಹೋದ ಬಳಿಕ, ಅಲ್ಲಿ ವಿಸ್ಕೃತ ಚರ್ಚೆ ನಡೆಯಲಿದೆ. ಅಲ್ಲದೆ, ದೇಶದ ರಾಜಕೀಯ ಪಕ್ಷಗಳ ಸದಸ್ಯರು, ಮಾಜಿ ನ್ಯಾಯಾಧೀಶರು, ಹಿರಿಯ ವಕೀಲರು, ಮಾಜಿ ಅಥವಾ ಪ್ರಸ್ತುತ ಚುನಾವಣಾ ಆಯುಕ್ತರು, ರಾಜ್ಯ ವಿಧಾನಸಭೆಗಳ ಸ್ಪೀಕರ್‌ಗಳು, ರಾಜ್ಯ ಚುನಾವಣಾ ಆಯುಕ್ತರು ಮತ್ತು ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ.

ಜೆಪಿಸಿಯಲ್ಲಿ ವಿಸ್ಕೃತ ಚರ್ಚೆಯ ನಂತರ ಮಸೂದೆಗೆ ತಿದ್ದುಪಡಿಗಳನ್ನು ಮಾಡಿ, ಅದನ್ನು ಲೋಕಸಭೆಯ ಸ್ಪೀಕರ್‌ಗೆ ಸಲ್ಲಿಸಲಿದ್ದಾರೆ. ಬಳಿಕ ಅದನ್ನು ಸಂಸತ್ತಿನಲ್ಲಿ ಮಂಡಿಸಲು ಸಮಯ ನಿಗದಿ ಮಾಡಲಾಗುತ್ತದೆ. ನಿಯಮದ ಪ್ರಕಾರ, ಲೋಕಸಭೆ ಸ್ಪೀಕರ್ ಜೆಪಿಸಿ ತನ್ನ ವರದಿಯನ್ನು ಸಲ್ಲಿಸಲು ಕನಿಷ್ಠ ಆರು ತಿಂಗಳ ಕಾಲಮಿತಿಯನ್ನು ನಿಗದಿಪಡಿಸಬಹುದು.

ಕೇಂದ್ರ ಸರ್ಕಾರ ಮಂಡಿಸಿರುವ ಸಂವಿಧಾನ (129ನೇ ತಿದ್ದುಪಡಿ) ಮಸೂದೆ-2024ರ ಪ್ರತಿಯನ್ನು ಲೋಕಸಭೆಯ ಎಲ್ಲಾಸಂಸದರಿಗೆ ನೀಡಲಾಗಿದೆ. ಸಾಂವಿಧಾನಿಕ ನಿಬಂಧನೆಗಳ ಪ್ರಕಾರ, ಮಸೂದೆಯಲ್ಲಿ ಪ್ರಸ್ತಾಪಿಸಿರುವ ಐದು ತಿದ್ದುಪಡಿಗಳ ಅನುಮೋದನೆಗೆ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ.

ಕೃಪೆ : ಪ್ರಜಾವಾಣಿ, indiatoday.in

ಇದನ್ನೂ ಓದಿ : Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...