Homeಅಂತರಾಷ್ಟ್ರೀಯExplainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

ಯುಎಸ್‌ಎಯು ಹಳೆಯ ಕಾಲದ ನೇರ ಚುನಾವಣಾ ಪದ್ಧತಿಯನ್ನು ಪರೋಕ್ಷ ಮಾಡಿದುದು ಹೇಗೆ? ಯುಎಸ್‌ಎಯ ಪ್ರಜಾಪ್ರಭುತ್ವದ ಮಾದರಿ ಹೇಗೆ ಕೆಲಸ ಮಾಡುತ್ತದೆ? ಈ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಅದರ ಮೂಲವನ್ನು ನೆನಪಿಸಿಕೊಳ್ಳುವುದು ಅತ್ಯಂತ ಅಗತ್ಯ.

- Advertisement -
- Advertisement -

ಉತ್ತರ ಅಮೇರಿಕಾ ಖಂಡದ 13 ಮೂಲ ಬ್ರಿಟಿಷ್ ವಸಾಸತುಗಳು 1776ರಲ್ಲಿ ಬಂಡೆದ್ದು ಪ್ರತ್ಯೇಕವಾದಾಗ ಅಮೇರಿಕಾ ಸಂಯುಕ್ತ ಸಂಸ್ಥಾನದ ಆರಂಭವಾಯಿತು. ಅಮೇರಿಕಾ ಸಂಯುಕ್ತ ಸಂಸ್ಥಾನಗಳು ಎಂಬ ಹೆಸರೇ ಇವು ಪ್ರತ್ಯೇಕ ರಾಜ್ಯಗಳು ಜೊತೆ ಸೇರಿ ಒಂದು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ ಎಂಬುದನ್ನು ಸೂಚಿಸುತ್ತದೆ. ಅಂದರೆ, ಈ ರಾಜ್ಯಗಳು ತಮ್ಮ ಸ್ವಾಯತ್ತತೆಯನ್ನು ಉಳಿಸಿಕೊಂಡಿರುತ್ತವೆ ಮತ್ತು ಹೊಸ ದೇಶದ ಪ್ರಜೆಗಳು ಅವಳಿ ಪೌರತ್ವ ಹೊದಿರುತ್ತಾರೆ. ಅವೆಂದರೆ ರಾಜ್ಯದ ಪೌರತ್ವ ಮತ್ತು ದೇಶದ ಪೌರತ್ವ.

ಆ ಹೊಸ ದೇಶದ ಮೂಲಾಧಾರ ಎಂದರೆ ಹಲವಾರು ಸೈದ್ಧಾಂತಿಕ ಮತ್ತು ಆರ್ಥಿಕ ವಿಷಯಗಳ ಒಂದು ಕಲಸುಮೇಲೋಗರ ಸಮಾಗಮವಾಗಿತ್ತು. ಕ್ವೇಕರ್ಸ್‌ನಂತಹ (ಬ್ಯಾಪ್ಟಿಸ್ಟ್‌ಗಳಂತೆ ಒಂದು ಧಾರ್ಮಿಕ ಗುಂಪು) ಸಮುದಾಯಗಳು ಹೊಸ ನೆಲದಲ್ಲಿ ತಮ್ಮ ಹೊಸ ಅಸ್ತಿತ್ವವನ್ನು ಕಂಡುಕೊಳ್ಳಲು ಬಯಸಿದ್ದವು. ಕೆಲವು ಸಂದರ್ಭಗಳಲ್ಲಿ ಅವು ಗುಲಾಮಿ ಪದ್ಧತಿಯನ್ನು ಅನುಸರಿಸುತ್ತಿದ್ದವು. ಈ ವಸಾಹತುಗಳು ಆರ್ಥಿಕವಾಗಿ ಬ್ರಿಟನ್‌ನಿಂದ ಸ್ವತಂತ್ರಗೊಂಡು ಅವುಗಳಿಗೆ ಅದರ ರಾಜಕೀಯ ಅಥವಾ ಮಿಲಿಟರಿ ಅಸ್ತಿತ್ವ ಬೇಕಾಗಿರಲಿಲ್ಲ.

ಕೆಲವರು ಅಮೇರಿಕಾದ ಮೂಲನಿವಾಸಿಗಳ (ಇಂಡಿಯನ್ಸ್) ಸಮುದಾಯಗಳ ಜೊತೆ ಬ್ರಿಟಿಷ್ ಸಾಮ್ರಾಜ್ಯವು ಮಾಡಿಕೊಂಡಿದ್ದ ಒಪ್ಪಂದಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಪಶ್ಚಿಮದ ಭಾಗಗಳನ್ನು ವಶಪಡಿಸಿಕೊಳ್ಳಲು ಬಯಸಿದ್ದವು. ಇದರ ಜೊತೆಗೇ ಕೆಲವು ವಸಾಹತುಗಳು ಉದಾತ್ತವಾದ ಉದಾರವಾದಿ ಚಿಂತನೆಗಳನ್ನು ಸಾಂಪ್ರದಾಯಿಕವಾದ ಶ್ರೀಮಂತ ಸಮುದಾಯ ಇಲ್ಲದೇ ಇದ್ದಂತಹ ಒಂದು ಹೊಸ ದೇಶದಲ್ಲಿ ಪರೀಕ್ಷೆಗೆ ಒಡ್ಡಲು ಬಯಸಿದ್ದವು.

ಈ ರೀತಿಯಾಗಿ ಬೇರೆಬೇರೆ ಹಿತಾಸಕ್ತಿಗಳು ಮತ್ತು ಚಿಂತನೆಗಳಿದ್ದ ಬೇರೆಬೇರೆ ವಸಾಹತುಗಳು ಜೊತೆಗೆ ಬಂದಾಗ ಬೇರೆಬೇರೆ ರೀತಿಯ ಆಡಳಿತ ಪದ್ಧತಿಗಳು ಜೊತೆಗೆ ಸೇರುವುದು ಅನಿವಾರ್ಯವಾಯಿತು. ಇವುಗಳ ಏಕತೆ ಅಥವಾ ಒಗ್ಗಟ್ಟು ಬಹಳ ಸೂಕ್ಷ್ಮವಾಗಿತ್ತು. ಆದುದರಿಂದ ಹಲವಾರು ರಾಜಿ ಮತ್ತು ಹೊಂದಾಣಿಕೆಗಳನ್ನು ಮಾಡಲಾಯಿತು. ಸ್ಥಳೀಯವಾಗಿ ವಸಾಹತುಗಳ ರಾಜಕೀಯ ವ್ಯವಸ್ಥೆಗಳು ಉಳಿದುಕೊಳ್ಳುತ್ತವೆ. ಇದು ಸ್ಥಳೀಯ ಇರೋಕಿಗಳಂತಹ ಮೂಲನಿವಾಸಿ ಸಮುದಾಯಗಳು ಸಾಂಪ್ರದಾಯಿಕವಾಗಿ ಅಭಿವೃದ್ಧಿಪಡಿಸಿದ್ದ ಆಡಳಿತ ಪದ್ಧತಿಗಳಿಂದ ಕಲಿತುಕೊಂಡದ್ದು ಮತ್ತು ಆ ಕಾಲದ ಐರೋಪ್ಯ ರಾಜಕೀಯ ವ್ಯವಸ್ಥೆಗಳ ಮಿಶ್ರಣವಾಗಿತ್ತು.

ಈ ವಸಾಹತುಗಳು ಹೊಸ ದೇಶವನ್ನು ಸೇರುವ ಮೊದಲು ಪ್ರತಿಯೊಂದು ವಸಾಹತಿಗೆ ಸ್ವಾಯತ್ತತೆ ಬೇಕೆಂದು ಒತ್ತಾಯಿಸಿದ್ದವು. ಈ ರಾಜ್ಯಗಳು ಕೇಂದ್ರ ಸರಕಾರವೊಂದರ ಅಡಿಯಲ್ಲಿ ಏಕೀಕೃತ (ಸಂಯುಕ್ತ)ವಾಗುವುದೆಂದು ನಿರ್ಧಾರವಾಯಿತು. ರಾಜಧಾನಿ ವಾಷಿಂಗ್ಟನ್ ಡಿ.ಸಿ. ಆ ಕಾಲದಲ್ಲಿ ದೇಶದ ಮಧ್ಯ ಭಾಗದಲ್ಲಿ ಇದ್ದು, ಅದು ಯಾವುದೇ ರಾಜ್ಯದ ಭಾಗವಾಗಿರಲಿಲ್ಲ. ಕಾರಣವೆಂದರೆ ಅದು ಎಲ್ಲಾ ರಾಜ್ಯಗಳ ಕುರಿತು ಆಲಿಪ್ತ ಅಥವಾ ನಿರ್ಲಿಪ್ತವಾಗಿರಬೇಕು ಎಂಬ ಚಿಂತನೆಯಾಗಿತ್ತು. ಕೇಂದ್ರ ಸರಕಾರವು ಮೂರು ಸ್ವತಂತ್ರವಾದ ವಿಭಾಗಗಳನ್ನು ಹೊಂದಿತ್ತು. ಅವೆಂದರೆ, ಬ್ರಿಟಿಷ್ ಪದ್ಧತಿಯಂತೆ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ. ಈ ವಸಾಹತುಗಳಿಗೆ ಯಾವುದೇ ರಾಜ ಇಲ್ಲದಿದ್ದುದರಿಂದ ಕಾರ್ಯಾಂಗವು ಶಾಸಕಾಂಗದ ನಿರ್ಧಾರದಂತೆ ಕಾರ್ಯ ನಿರ್ವಹಿಸಬೇಕಾಗಿತ್ತು.

ಯುಎಸ್‌ಎಯ ಶಾಸಕಾಂಗ

ಯುಎಸ್‌ಎಯ ಶಾಸಕಾಂಗವು ಎರಡು ಭಾಗಗಳಿಂದ ಕೂಡಿದೆ. ಅದೆಂದರೆ, ಬ್ರಿಟನ್‌ನ ಹೌಸ್ ಆಫ್ ಲಾರ್ಡ್ಸ್ ಅಥವಾ ಭಾರತೀಯ ಸಂಸತ್ತಿನ ರಾಜ್ಯಸಭೆಯ ರೀತಿಯಲ್ಲಿ ಇರುವ ಸೆನೆಟ್. ಪ್ರತೀ ರಾಜ್ಯಕ್ಕೆ ಎರಡರಂತೆ ಸೆನೆಟರ್‌ಗಳಿದ್ದಾರೆ. ಬ್ರಿಟನ್‌ನಲ್ಲಿ ಇದ್ದಂತೆ ಶ್ರೀಮಂತ ಪಾಳೆಯಗಾರಿ ವರ್ಗ ಇಲ್ಲದಿದ್ದುದರಿಂದ ಸೆನೆಟರ್‌ಗಳ ಆಯ್ಕೆ ಜನರಿಂದಲೇ ನಡೆಯಬೇಕೆಂದಾಯಿತು.

ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಎಂದರೆ ಜನಪ್ರತಿನಿಧಿ ಸಭೆ ಎಂಬುದು ಬ್ರಿಟನ್‌ನ ಹೌಸ್ ಆಫ್ ಕಾಮನ್ಸ್ ಅಥವಾ ಭಾರತದ ಲೋಕಸಭೆಯಂತೆ ಇದೆ. ಅದು ಹೆಸರೇ ಹೇಳುವಂತೆ ಜನರ ಪ್ರತಿನಿಧಿ ಸಭೆಯಾಗಿದೆ. ಇಡೀ ದೇಶವನ್ನು ಜಿಲ್ಲೆಗಳಾಗಿ ವಿಭಜಿಸಲಾಯಿತು. ಪ್ರತಿಯೊಂದು ಜಿಲ್ಲೆಯು ಒಬ್ಬೊಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡುವುದು ಎಂದು ನಿರ್ಧರಿಸಲಾಯಿತು.

ಮತದಾರ ಘಟಕ (ಇಲೆಕ್ಟೋರಲ್ ಕಾಲೇಜ್)

ಶಾಸಕಾಂಗಕ್ಕೆ ಆಯ್ಕೆ ಮಾಡುವುದರ ಜೊತೆಗೆ ಜನರು ಕಾರ್ಯಾಂಗದ ಮುಖ್ಯಸ್ಥರಾದ ಅಧ್ಯಕ್ಷರನ್ನೂ ಆಯ್ಕೆ ಮಾಡಬೇಕಾಗುತ್ತದೆ. ಇದನ್ನು ಮುಖ್ಯವಾಗಿ ಗುಲಾಮಿ ಪದ್ಧತಿಗೆ ಅವಕಾಶ ನೀಡಿದ್ದ ಹಲವಾರು ರಾಜ್ಯಗಳು ವಿರೋಧಿಸಿದ್ದವು. ಏಕೆಂದರೆ, ತಮ್ಮ ರಾಜ್ಯದ ಜನಸಂಖ್ಯೆ ಕಡಿಮೆಯಾದಲ್ಲಿ ತಮ್ಮ ರಾಜ್ಯದ ಪ್ರಭಾವ ಕುಂದುತ್ತದೆ ಎಂಬ ಕಾರಣಕ್ಕಾಗಿ. ಆ ಕಾಲದಲ್ಲಿ ಜಮೀನು ಹೊಂದಿದ್ದ ಪುರುಷರಿಗೆ ಮಾತ್ರ ಮತದಾನದ ಅವಕಾಶವಿತ್ತು. ಹೆಚ್ಚು ಕೃಷಿ ಪ್ರಧಾನವಾದ ರಾಜ್ಯಗಳಲ್ಲಿ ಮತದಾನ ಮಾಡಹುದಾದ ಜನರ ಸಾಂದ್ರತೆ ಸಹಜವಾಗಿಯೇ ಕಡಿಮೆಯಾಗಿತ್ತು. ಇದು ಗುಲಾಮರಿಂದ ಕೆಲಸ ಮಾಡಿಸುತ್ತಿದ್ದ ಭಾರಿ ಪ್ರಮಾಣದ ಜಮೀನು ಹೊಂದಿದ್ದ ಭೂಮಾಲಕರ ಆತಂಕವಾಗಿತ್ತು. ಆದುದರಿಂದ ಈ ಆತಂಕ ದೂರ ಮಾಡಲು ಯುಎಸ್‌ಎಯು ಮತದಾನ ಘಟಕದ ವ್ಯವಸ್ಥೆ ಮಾಡಿತು.

ಕೆಲವು ವಸಾಹತುಗಳಿಗೆ ಇದ್ದ ಪ್ರಮುಖ ಆತಂಕ ಎಂದರೆ ಗುಲಾಮಿ ಪದ್ಧತಿಗೆ ಏನಾದೀತು ಎಂಬುದು. ಯುಎಸ್‌ಎಯ ನಕ್ಷೆಯನ್ನು ಗುಲಾಮಿ ಪದ್ಧತಿಗೆ ಅವಕಾಶ ನೀಡುವ ಮತ್ತು ಅದನ್ನು ರದ್ದುಗೊಳಿಸಿದ ರಾಜ್ಯಗಳ ನಡುವೆ ಸಮತೋಲನ ಇರುವಂತೆ ರಚಿಸಲಾಯಿತು. ಈ ಸಮತೋಲನವನ್ನು ಕಾಪಾಡಿಕೊಂಡು ಬರುವಂತೆ ಯುಎಸ್‌ಎಯ ಈ ರಾಜ್ಯಗಳ ಇತಿಹಾಸ ಇದೆ. ಹೆಚ್ಚಿನ ಸಲ ಒಂದು ಹೊಸ ರಾಜ್ಯ ಸೇರ್ಪಡೆಯಾದಾಗ, ಈ ಸಮತೋಲನ ಕಾಪಾಡಿಕೊಳ್ಳಲು ಹಳೆಯ ರಾಜ್ಯಗಳನ್ನು ಒಡೆಯಲಾಗಿದೆ.

ಈ ಮತದಾರ ಘಟಕ ವ್ಯವಸ್ಥೆಯಲ್ಲಿ ಪ್ರತೀ ರಾಜ್ಯಕ್ಕೆ ನಿರ್ದಿಷ್ಟ ಸಂಖ್ಯೆಯ ಮತಗಳು ಇರುತ್ತವೆ. ಮತಗಳು ಸೆನೆಟರ್‌ಗಳ ಸಂಖ್ಯೆಗೆ (ಪ್ರತೀ ರಾಜ್ಯಕ್ಕೆ ಎರಡೆರಡು) ಮತ್ತು ಜನ ಪ್ರತಿನಿಧಿಗಳ ಸಂಖ್ಯೆಗೆ (ಹೆಚ್ಚುಕಡಿಮೆ ಜನಸಂಖ್ಯೆಗೆ ಅನುಗುಣವಾಗಿ) ಅನುಗುಣವಾಗಿ ಇರುತ್ತದೆ. ಪ್ರತಿಯೊಂದು ರಾಜ್ಯದ ಒಳಗೆ ಯಾವ ಅಭ್ಯರ್ಥಿ ರಾಜ್ಯವನ್ನು ಪ್ರತಿನಿಧಿಸುತ್ತಾನೆ/ಳೆ ಎಂಬುದನ್ನು ನಾಗರಿಕರು ಬಹುಮತದ ಆಧಾರದಲ್ಲಿ ನಿರ್ಧರಿಸುತ್ತಾರೆ. ರಾಜ್ಯದ ಬೆಂಬಲವನ್ನು ರಾಜ್ಯಗಳು ಹೊಂದಿರುವ ಸ್ಥಾನಗಳ ಆಧಾರದಲ್ಲಿ ನಿರ್ಧರಿಸಲಾಗುತ್ತದೆ. ಈ ಮತದಾರ ಘಟಕದಲ್ಲಿ ಬಹುಮತ ಹೊಂದಿರುವ ಅಧ್ಯಕ್ಷೀಯ ಅಭ್ಯರ್ಥಿ ಗೆಲ್ಲುತ್ತಾನೆ/ಳೆ‌.

ಈ ವ್ಯವಸ್ಥೆಯ ಸಮಸ್ಯೆಗಳು

ಈ ವ್ಯವಸ್ಥೆಯ ಟೀಕಾಕಾರರು ಇತಿಹಾಸವನ್ನು ಎತ್ತಿತೋರಿಸುತ್ತಾರೆ. ಅದು ಒಂದು ರಾಜಿಯಾಗಿದ್ದು, ಮೂಲ ಉದ್ದೇಶವನ್ನೇ ನುಂಗಿಹಾಕಿದೆ.

ಮೊದಲನೆಯದಾಗಿ ಅದು ಕಡಿಮೆ ಜನಸಂಖ್ಯೆ ಇರುವ ರಾಜ್ಯಗಳಿಗೆ ಅನ್ಯಾಯವಾಗಿ ಹೆಚ್ಚು ಪ್ರಾತಿನಿಧ್ಯ ನೀಡುತ್ತದೆ ಮತ್ತು ಕೃಷಿ ಪ್ರಧಾನವಾದ ಪ್ರಬಲ ರಾಜ್ಯಗಳ ಶಕ್ತಿಯನ್ನು ಕುಂದಿಸುತ್ತದೆ. ಯುಎಸ್‌ಎಯಲ್ಲಿ ಕೃಷಿಕರು ಕೇವಲ 1.3ರಷ್ಟಿದ್ದರೂ ಭಾರೀ ಪ್ರಮಾಣದ ಸರಕಾರಿ ಸಬ್ಸಿಡಿಯ ಪರಿಣಾಮವಾಗಿ ತುಂಬಾ ಶ್ರೀಮಂತರಾಗಿದ್ದಾರೆ.

ಎರಡನೆಯದಾಗಿ ವ್ಯವಸ್ಥೆಯು ಅನಗತ್ಯವಾಗಿ ಪರೋಕ್ಷವಾಗಿದೆ. ಕೆಲವು ಸಲ ಬಹುಸಂಖ್ಯಾತರು ಒಬ್ಬ ಅಭ್ಯರ್ಥಿಯ ಪರವಾಗಿ ಮತ ಹಾಕಿದರೂ ಅದು ಮತದಾರರ ಘಟಕದಲ್ಲಿ ಸರಿಯಾಗಿ ಪ್ರತಿನಿಧಿಸಲ್ಪಡುವುದಿಲ್ಲ. ಹಿಲರಿ ಕ್ಲಿಂಟನ್ ವಿರುದ್ಧ ಡೊನಾಲ್ಡ್ ಟ್ರಂಪ್ ಮತ್ತು ಅಲ್ ಗೋರ್ ವಿರುದ್ಧ ಜಾರ್ಜ್ ಡಬ್ಲ್ಯೂ ಬುಷ್ ಚುನಾವಣೆಯಲ್ಲಿ ಮತದಾರ ಘಟಕಗಳು ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ, ಬಹುಸಂಖ್ಯಾತ ಜನರು ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದರು. ಬಹುಸಂಖ್ಯಾತ ಜನರು ಆಯ್ಕೆ ಮಾಡಿದ ಅಭ್ಯರ್ಥಿಗಳಿಗೆ ಸೋಲಾಯಿತು.

ಮೂರನೆಯದಾಗಿ, ರಾಜ್ಯಗಳ ಹಕ್ಕುಗಳು ಹಿಂದೆ ಗುಲಾಮಿ ಪದ್ಧತಿಯನ್ನು ಉಳಿಸಿಕೊಳ್ಳುವುದಕ್ಕೆ ಪೂರಕವಾಗಿದ್ದರೆ, ಇಂದು ಬಿಳಿಯರ ಪ್ರಾಬಲ್ಯವನ್ನು ಉಳಿಸಿಕೊಳ್ಳುವುದಕ್ಕೆ ಪೂರಕವಾಗಿವೆ. ಪರಿಣಾಮವಾಗಿ ಆಫ್ರಿಕನ್ ಅಮೇರಿಕನ್ ಜನರು ಪ್ರಬಲವಾಗಿರುವ ಕಡೆಗಳಲ್ಲೂ ಅವರ ಮತಗಳು ಬಿಳಿಯರ ಪ್ರಾಬಲ್ಯವಿರುವ ಮತದಾರ ಘಟಕಗಳಿಂದ ಕಡೆಗಣಿಸಲ್ಪಟ್ಟಿರುವುದು ಕಂಡುಬಂದಿದೆ. ಇದು ಪ್ರಜಾಪ್ರಭುತ್ವವಾದಿ ಹಕ್ಕುಗಳನ್ನೇ ಕಡೆಗಣಿಸುತ್ತದೆ.

“ಸ್ವಿಂಗ್” ರಾಜ್ಯಗಳೆಂದರೇನು?

ಹೆಚ್ಚಿನ ರಾಜ್ಯಗಳಲ್ಲಿ ರಾಜಕೀಯ ಪರಿಸ್ಥಿತಿ ಹೇಗಿದೆಯೆಂದರೆ, ಯಾವ ಅಧ್ಯಕ್ಷೀಯ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದನ್ನು ಮೊದಲೇ ಊಹಿಸಬಹುದು. ಕೆಲವು ರಾಜ್ಯಗಳು ಯಾವತ್ತೂ ಡೆಮಾಕ್ರಾಟ್ ಅಭ್ಯರ್ಥಿಗಳನ್ನು ಬೆಂಬಲಿಸಿದರೆ, ಕೆಲವು ರಾಜ್ಯಗಳು ಯಾವತ್ತೂ ರಿಪಬ್ಲಿಕನ್ ಅಭ್ಯರ್ಥಿಗಳನ್ನು ಬೆಂಬಲಿಸುತ್ತವೆ. ಅವುಗಳಲ್ಲಿ ಚುನಾವಣಾ ಪ್ರಚಾರ ಮಾಡುವುದೇ ಅಪ್ರಸ್ತುತವಾಗುತ್ತದೆ. ಫಲಿತಾಂಶ ಅನಿರ್ಧಾರಿತವಾಗಿರುವ ಕೆಲವೇ ಕೆಲವು ರಾಜ್ಯಗಳು ಮಾತ್ರ ಹೋರಾಟದ ಕಣಗಳಾಗಿ ಪರಿಣಮಿಸುತ್ತವೆ. ಇವುಗಳನ್ನೇ ಫಲಿತಾಂಶ ಏರುಪೇರು ಮಾಡಬಲ್ಲ “ಸ್ವಿಂಗ್” ರಾಜ್ಯಗಳೆಂದು ಪರಿಗಣಿಸಲಾಗುತ್ತದೆ.

ಇಂದು ಬಹುತೇಕ ಅಮೇರಿಕನ್ ಜನರು ಮತದಾರರ ಘಟಕ ವ್ಯವಸ್ಥೆಯನ್ನು ವಿರೋಧಿಸುತ್ತಾರೆ. ಏಕೆಂದರೆ ಅದು ಬಹುತೇಕ ಜನರ ಮತಶಕ್ತಿಯನ್ನು ಕುಂದಿಸುತ್ತದೆ. 2016ರ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಹೆಚ್ಚು ಮತಗಳನ್ನು ಗಳಿಸಿಯೂ, ಡೊನಾಲ್ಡ್ ಟ್ರಂಪ್ ಗೆದ್ದ ಬಳಿಕವಂತೂ ಈ ಓಬಿರಾಯನ ಕಾಲದ ವ್ಯವಸ್ಥೆಯ ಬಗ್ಗೆ ವಿರೋಧ ಗಣನೀಯವಾಗಿ ಹೆಚ್ಚಿದೆ.

  • ಕಿಶೋರ್ ಗೋವಿಂದ, ಬೆಂಗಳೂರು  ಅಮೆರಿಕಾದಲ್ಲಿ ಹುಟ್ಟಿ, ಬೆಳೆದು ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರು)

ಅನುವಾದ: ನಿಖಿಲ್ ಕೋಲ್ಪೆ


Also Read: The Electoral College: How America made its direct election indirect

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...