HomeಎಕಾನಮಿExplainer: ಈ ಜಿಡಿಪಿ (GDP) ಅಂದರೆ ಏನಪಾ? - ಬೈ ಡೇಟಾಮ್ಯಾಟಿಕ್ಸ್

Explainer: ಈ ಜಿಡಿಪಿ (GDP) ಅಂದರೆ ಏನಪಾ? – ಬೈ ಡೇಟಾಮ್ಯಾಟಿಕ್ಸ್

ನಮ್ಮ ದೇಶ ಕೆಲವೇ ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂಬ ಕನಸ ಮಾರುವ ಚಲುವರು ನಮ್ಮ ಸುತ್ತ ಮುತ್ತ ಇದ್ದಾರ. ನಮ್ಮ ಸ್ನೇಹಿತರ, ಕುಟುಂಬದ, ನಮ್ಮ ಸಹಪಾಠಿಗಳ, ಸಹ ಕೆಲಸಗಾರರ ಗುಂಪುಗಳಲ್ಲಿ ತುಂಬ್ಯಾರ.

- Advertisement -
- Advertisement -

ಜಿಡಿಪಿ ಅಥವಾ ನಿವ್ವಳ ಆಂತರಿಕ ಉತ್ನನ್ನ ಹಿಂಗಂದರ ಒಂದು ದೇಶದ ಜನಾ ತಮ್ಮ ಎಲ್ಲಾ ಚಟುವಟಿಕೆಗಳಿಂದ ಒಂದು ವರ್ಷದಾಗ ಸೃಷ್ಟಿಸಬಹುದಾದ ಒಟ್ಟು ಸಂಪತ್ತು. ಇದು ಸರಕು ಅಥವಾ ಸೇವೆಯ ರೂಪದಾಗ ಇರಬಹುದು.

ನೀವು ಏನರ ನೌಕರಿ ಮಾಡ್ತೀರಿ, ಅಥವಾ ವ್ಯಾಪಾರ ಮಾಡತೀರಿ ಅದರಿಂದ ನಿಮಗ ಎಷ್ಟು ದುಡ್ಡು ಅಥವಾ ಅದರ ಮೌಲ್ಯದ ಪರ್ಯಾಯ ವಸ್ತು ಅಥವಾ ಸೇವೆ ಸಿಗತದೋ ಅದು ನಿಮ್ಮ ಪಾಲಿನ ಜಿಡಿಪಿ. ಇಂಥದನ್ನೇ ಎಲ್ಲಾರೂ ಕೂಡಿ ಮಾಡಿದಾಗ ಸಿಗೋ ಲೆಕ್ಕಾ ಅಂದರ ಈ ದೇಶದ ಜಿಡಿಪಿ.


ಇದನ್ನೂ ಓದಿ: 1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ 23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ


ಇನ್ನ ಕೆಲವು ವಿಷಯ ಜಿಡಿಪಿಯೊಳಗ ಬರಂಗಿಲ್ಲಾ. ನಿಮ್ಮ ದಾಡಿ ನೀವ ಮಾಡಿಕೊಳ್ಳೋದು ಅನ್ರೀ, ನಿಮ್ಮ ತಾಯಿ, ಹೆಂಡತಿ, ಮಗಳು, ಅಕ್ಕಾ, ತಂಗಿ, ವೈನಿ, ಅಥವಾ ಮತ್ಯಾರರೆ ನಿಮ್ಮ ಅಡಿಗಿ ಮನಿಯೊಳಗ ನಿಮ್ಮ ಮತ್ತು ತಮ್ಮ ಊಟಕ್ಕ ಅಡಿಗೀ ಮಾಡತಾರಲ್ಲಾ, ಅದುನೂ ಬರೋದಿಲ್ಲ. ನಮ್ಮ ದೇಶದೊಳಗ ಕೋಟ್ಯಾಂತರ ಹೆಣ್ಣು ಮಕ್ಕಳು ಸಾಯೋ ತನಕಾ ತಮ್ಮ ತಮ್ಮ ಮನಿಯೊಳಗ, ಕೈ ಸುಟಗೋತ ದುಡದು ಹಾಕತಾರಲ್ಲಾ ಅದರ ಮೌಲ್ಯ ಸರಕಾರದ ಜಿಡಿಪಿ ಲೆಕ್ಕದೊಳಗ ಬರಂಗಿಲ್ಲಾ. ಗಂಡು ಮಕ್ಕಳ ಮನಸಿನ್ಯಾಗಂತೂ ಅದು ಬರೋದೇ ಇಲ್ಲಾ ಬಿಡ್ರಿ. ಅದು ಬ್ಯಾರೆ ಮಾತು.

ನಂ ಭಾರತದ ಈ ವರ್ಷದ ಜಿಡಿಪಿ ಸುಮಾರು 2.6 ಲಕ್ಷ ಕೋಟಿ ಡಾಲರ್ ಅಂದರ ಸುಮಾರು 182 ಲಕ್ಷ ಕೋಟಿ. ಇದು 2011-12 ವರ್ಷವನ್ನು ಅಳತೆಗೋಲಾಗಿ ತೆಗೆದುಕೊಂಡಾಗ ಸಿಗುವ ಲೆಕ್ಕ. ಮುಂಚೆ ಇದು 1981 ಇತ್ತು, 91 ಆತು, 2004 ನಾಲ್ಕು ಆತು. ಮೋಷಾ ಸರಕಾರ ಬಂದ ಮ್ಯಾಲೆ ಇದು 2011 ಆತು. ಲೆಕ್ಕದ ವರ್ಷ ಬದಲಾದಂಗೆಲ್ಲಾ ಜಿಡಿಪಿಯ ಮೌಲ್ಯ ಬದಲಾಗತದ, ಅದು ಮತ್ತ ಯೂನಿವರ್ಸಿಟಿ ಬೃಹಸ್ಪತಿಗಳ ತಲಿ ಕೆಡಿಸೋ ಲೆಕ್ಕ. ನಮ್ಮಂತಹ ಹುಲುಮಾನವರಿಗಲ್ಲ. ಅದನ್ನ ಬಿಡ್ರಿ.

ಹಂಗಾರ ಬ್ಯಾರೆ ದೇಶಗಳ ಜಿಡಿಪಿ ಎಷ್ಟದಪಾ? ಇದು ಯಾಕ ಬೇಕಂದ್ರ, ನಿಮ್ಮ ಹುಡುಗಾ ರನ್ನಿಂಗ್ ರೇಸ್ ನ್ಯಾಗ ಎಷ್ಟನೇ ಬಂದಾನ್ರೀ ಅಂದ್ರ ಸೆಕೆಂಡ್ ಬಂದಾನ ಅಂತ ನೀವು ಹೆಮ್ಮೆಯಿಂದ ಹೇಳಿದ್ರಿ ಅಂತ ತಿಳಕೋಳ್ರಿ. ಆ ರೇಸಿನ್ಯಾಗ ಎಷ್ಟು ಜನಾ ಇದ್ದರು ಅಂದರು ಅಂತ ತಿರಗಿ ಕೇಳಿದರ ಇಬ್ಬರ ರನ್ನರ್ಸ ಇದ್ದರು ಅಂತ ನಾಚಿಕೊಂಡು ಹೇಳೋ ಪರಿಸ್ಥಿತಿ ನಿಮಗ ಬರಬಾರದಲ್ಲಾ, ಅದಕ್ಕ.

ನೋಡ್ರಿ, ಈ ಸಮಸ್ತ ಭೂಮಂಡಲದಾಗ ಸುಮಾರು 220 ದೇಶ ಅಥವಾ ಸ್ವಯಂ ಆಡಳಿತ ಪ್ರದೇಶಾ ಅದಾವು. ಅದರಾಗ ಸುಮಾರು 200 ದೇಶದ ಜಿಡಿಪಿ ಲೆಕ್ಕಾ ಸಿಕ್ಕದ.
ಅದರ ಪ್ರಕಾರ ಅತಿ ಹೆಚ್ಚಿನವು ಹಿಂಗವ.

ಅಮೇರಿಕಾ 1357 ಲಕ್ಷ ಕೋಟಿ
ಚೈನಾ 857 ಲಕ್ಷ ಕೋಟಿ
ಜಪಾನ್ 350 ಲಕ್ಷ ಕೋಟಿ
ಜರ್ಮನಿ 257 ಲಕ್ಷ ಕೋಟಿ
ಭಾರತ 182 ಲಕ್ಷ ಕೋಟಿ
ಇನ್ನು ನಮ್ಮ ನೆರೆ ಹೊರೆಯವರ ಲೆಕ್ಕ ಎಷ್ಟು? ಬೆಳಿಗ್ಗೆ ಎದ್ದಾಗಿಂದಲೂ ಮಲಗೋ ತನಕಾ ನಾವು ಎಲ್ಲದಕ್ಕೂ ಹೋಲಿಸಿಕೊಳ್ಳುವ ನಮ್ಮ ನೆರೆಯವರು ಈ ರೇಸಿನ್ಯಾಗ ಎಲ್ಲಿದ್ದಾರ ಅಂದರ-
ಬಾಂಗ್ಲಾ – 17 ಲಕ್ಷ ಕೋಟಿ
ಪಾಕಿಸ್ತಾನ 21 ಲಕ್ಷ ಕೋಟಿ
ಇನ್ನು ಲಭ್ಯ ಅಂಕಿ ಅಂಶಗಳ ಪ್ರಕಾರ ಅತ್ಯಂತ ಕಡಿಮೆ ಜಿಡಿಪಿ ಇರುವ ದೇಶಗಳು ಅಂದರ-
ಬುರುಂಡಿ 25,000 ಕೋಟಿ
ರುವಾಂಡಾ 63,000 ಕೋಟಿ

ನಮ್ಮ ದೇಶ ಕೆಲವೇ ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂಬ ಕನಸ ಮಾರುವ ಚಲುವರು ನಮ್ಮ ಸುತ್ತ ಮುತ್ತ ಇದ್ದಾರ. ನಮ್ಮ ಸ್ನೇಹಿತರ, ಕುಟುಂಬದ, ನಮ್ಮ ಸಹಪಾಠಿಗಳ, ಸಹ ಕೆಲಸಗಾರರ ಗುಂಪುಗಳಲ್ಲಿ ತುಂಬ್ಯಾರ.

ಅವರೆಲ್ಲಾ ತಿಳಿದುಕೊಳ್ಳಬೇಕಾದ ವಿಷಯ ಏನಪಾ ಅಂದರ ನಾವು ಜಿಡಿಪಿ ಪಟ್ಟಿಯ ಮೇಲಿನ ದೇಶಗಳಿಗೆ ಹತ್ತಿರ ಇಲ್ಲ. ಕೆಳಗಿನವರಿಗೆ ಹತ್ತಿರ ಇದ್ದೇವೆ. ಅದಕ್ಕೇ ಭೂಗೋಳದ ದಕ್ಷಿಣದ ದೇಶಗಳ ಭ್ರಾತ್ವತ್ವದ ಮಾತು, ಬ್ರಿಕ್ಸ ದೇಶಗಳ ಹೊಂದಾಣಿಕೆಯ ಮಾತುಗಳು ಆಗಾಗ ಕೇಳಿ ಬರತಿರತಾವು.
ಇದನ್ನ ನಾವು ಮರೆಯಬಾರದು.

ನಾವು ಏಣಿಯ ಎಷ್ಟನೇ ಮೆಟ್ಟಿಲ ಮೇಲೆ ಇದ್ದೇವಿ ಅನ್ನುವುದು ಗೊತ್ತಾಗದಿದ್ದರ ಎಷ್ಟು ಬೇಗ, ಎಷ್ಟು ಎತ್ತರಕ್ಕೆ ಏರಬೇಕು ಎನ್ನುವುದು ನಮಗೆ ಗೊತ್ತಾಗಲಿಕ್ಕೆ ಸಾಧ್ಯವಿಲ್ಲ. ನಾವು ನಿಂತಲ್ಲೇ ನಿಂತು ಮೇಲಿನವರನ್ನು ನೋಡಿ ಹೊಟ್ಟಿ ಕಿಚ್ಚು ಪಡಬಹುದು, ಅಥವಾ ಕೆಳಗಿನವರನ್ನು ನೋಡಿ ಅಪಹಾಸ್ಯ ಮಾಡಬಹುದು. ನಮ್ಮ ಮನಿಯೊಳಗ ಕನ್ನಡಿ ಇರದಿದ್ದರ, ಬೇರೆಯವರ ಮುಖದ ಮೇಲಿನ ಕಲೆಯ ಬಗ್ಗೆ ಮಾತಾಡಬಾರದು.

ಈ ಸಲಾ ಈ ವಿಷಯದ ಕಡೆ ನಮ್ಮ ಸಂಕೀರ್ತನೆ ಯಾಕ ಹೊರಳಿತಪಾ ಅಂದರ ಅದಕ್ಕೊಂದು ಛಂದನೆ ಕಾರಣ ಅದ.

ನಮ್ಮ ಮೋಹನ ಭಾಗವತ ಅವರು `ಜಿಡಿಪಿ’ ಭಾರತೀಯ ಮೂಲದ ಕಲ್ಪನೆ ಅಲ್ಲಾ ಅಂತ ಹೇಳ್ಯಾರ. ಅಷ್ಟ ಅಲ್ಲದ `ಲಿಂಚಿಂಗ್’ ಅನ್ನೋದು ಸಹ ನಮ್ಮ ಸಂಸ್ಕೃತಿಯ ಮೂಲದ್ದಲ್ಲಾ ಅಂತಂದಾರ.
ಅಮಿತ ಷಾ ಅವರು `ಮಾನವ ಹಕ್ಕುಗಳು` ಅನ್ನೋದು ನಮ್ಮ ಭಾರತೀಯ ಸಂಸ್ಕೃತಿಯ ಕಲ್ಪನೆ ಅಲ್ಲಾ ಅಂತ ಅಪ್ಪಣೆ ಕೊಟ್ಟಾರ.

ಅಂದರ ಈ ಮೂರು ವಿಷಯಗಳ ಬಗ್ಗೆ ತಿಳಕೊಳ್ಳೋದು, ಮಾತಾಡೋದು ನಿಷಿದ್ಧ ಅಂತ ಆತಲ್ಲಾ.
ಅದಕ್ಕಂತನ, ಈ ವಾರದ ಡೇಟಾ ಖೋಲಿಯೊಳಗ ನಮ್ಮ ಪ್ರವೇಶ. ಈ ನಿಷೇಧಿತ ವಸ್ತುವಿನ ಹುಡುಕಾಟಕ್ಕ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...