HomeಎಕಾನಮಿExplainer: ಈ ಜಿಡಿಪಿ (GDP) ಅಂದರೆ ಏನಪಾ? - ಬೈ ಡೇಟಾಮ್ಯಾಟಿಕ್ಸ್

Explainer: ಈ ಜಿಡಿಪಿ (GDP) ಅಂದರೆ ಏನಪಾ? – ಬೈ ಡೇಟಾಮ್ಯಾಟಿಕ್ಸ್

ನಮ್ಮ ದೇಶ ಕೆಲವೇ ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂಬ ಕನಸ ಮಾರುವ ಚಲುವರು ನಮ್ಮ ಸುತ್ತ ಮುತ್ತ ಇದ್ದಾರ. ನಮ್ಮ ಸ್ನೇಹಿತರ, ಕುಟುಂಬದ, ನಮ್ಮ ಸಹಪಾಠಿಗಳ, ಸಹ ಕೆಲಸಗಾರರ ಗುಂಪುಗಳಲ್ಲಿ ತುಂಬ್ಯಾರ.

- Advertisement -
- Advertisement -

ಜಿಡಿಪಿ ಅಥವಾ ನಿವ್ವಳ ಆಂತರಿಕ ಉತ್ನನ್ನ ಹಿಂಗಂದರ ಒಂದು ದೇಶದ ಜನಾ ತಮ್ಮ ಎಲ್ಲಾ ಚಟುವಟಿಕೆಗಳಿಂದ ಒಂದು ವರ್ಷದಾಗ ಸೃಷ್ಟಿಸಬಹುದಾದ ಒಟ್ಟು ಸಂಪತ್ತು. ಇದು ಸರಕು ಅಥವಾ ಸೇವೆಯ ರೂಪದಾಗ ಇರಬಹುದು.

ನೀವು ಏನರ ನೌಕರಿ ಮಾಡ್ತೀರಿ, ಅಥವಾ ವ್ಯಾಪಾರ ಮಾಡತೀರಿ ಅದರಿಂದ ನಿಮಗ ಎಷ್ಟು ದುಡ್ಡು ಅಥವಾ ಅದರ ಮೌಲ್ಯದ ಪರ್ಯಾಯ ವಸ್ತು ಅಥವಾ ಸೇವೆ ಸಿಗತದೋ ಅದು ನಿಮ್ಮ ಪಾಲಿನ ಜಿಡಿಪಿ. ಇಂಥದನ್ನೇ ಎಲ್ಲಾರೂ ಕೂಡಿ ಮಾಡಿದಾಗ ಸಿಗೋ ಲೆಕ್ಕಾ ಅಂದರ ಈ ದೇಶದ ಜಿಡಿಪಿ.


ಇದನ್ನೂ ಓದಿ: 1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ 23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ


ಇನ್ನ ಕೆಲವು ವಿಷಯ ಜಿಡಿಪಿಯೊಳಗ ಬರಂಗಿಲ್ಲಾ. ನಿಮ್ಮ ದಾಡಿ ನೀವ ಮಾಡಿಕೊಳ್ಳೋದು ಅನ್ರೀ, ನಿಮ್ಮ ತಾಯಿ, ಹೆಂಡತಿ, ಮಗಳು, ಅಕ್ಕಾ, ತಂಗಿ, ವೈನಿ, ಅಥವಾ ಮತ್ಯಾರರೆ ನಿಮ್ಮ ಅಡಿಗಿ ಮನಿಯೊಳಗ ನಿಮ್ಮ ಮತ್ತು ತಮ್ಮ ಊಟಕ್ಕ ಅಡಿಗೀ ಮಾಡತಾರಲ್ಲಾ, ಅದುನೂ ಬರೋದಿಲ್ಲ. ನಮ್ಮ ದೇಶದೊಳಗ ಕೋಟ್ಯಾಂತರ ಹೆಣ್ಣು ಮಕ್ಕಳು ಸಾಯೋ ತನಕಾ ತಮ್ಮ ತಮ್ಮ ಮನಿಯೊಳಗ, ಕೈ ಸುಟಗೋತ ದುಡದು ಹಾಕತಾರಲ್ಲಾ ಅದರ ಮೌಲ್ಯ ಸರಕಾರದ ಜಿಡಿಪಿ ಲೆಕ್ಕದೊಳಗ ಬರಂಗಿಲ್ಲಾ. ಗಂಡು ಮಕ್ಕಳ ಮನಸಿನ್ಯಾಗಂತೂ ಅದು ಬರೋದೇ ಇಲ್ಲಾ ಬಿಡ್ರಿ. ಅದು ಬ್ಯಾರೆ ಮಾತು.

ನಂ ಭಾರತದ ಈ ವರ್ಷದ ಜಿಡಿಪಿ ಸುಮಾರು 2.6 ಲಕ್ಷ ಕೋಟಿ ಡಾಲರ್ ಅಂದರ ಸುಮಾರು 182 ಲಕ್ಷ ಕೋಟಿ. ಇದು 2011-12 ವರ್ಷವನ್ನು ಅಳತೆಗೋಲಾಗಿ ತೆಗೆದುಕೊಂಡಾಗ ಸಿಗುವ ಲೆಕ್ಕ. ಮುಂಚೆ ಇದು 1981 ಇತ್ತು, 91 ಆತು, 2004 ನಾಲ್ಕು ಆತು. ಮೋಷಾ ಸರಕಾರ ಬಂದ ಮ್ಯಾಲೆ ಇದು 2011 ಆತು. ಲೆಕ್ಕದ ವರ್ಷ ಬದಲಾದಂಗೆಲ್ಲಾ ಜಿಡಿಪಿಯ ಮೌಲ್ಯ ಬದಲಾಗತದ, ಅದು ಮತ್ತ ಯೂನಿವರ್ಸಿಟಿ ಬೃಹಸ್ಪತಿಗಳ ತಲಿ ಕೆಡಿಸೋ ಲೆಕ್ಕ. ನಮ್ಮಂತಹ ಹುಲುಮಾನವರಿಗಲ್ಲ. ಅದನ್ನ ಬಿಡ್ರಿ.

ಹಂಗಾರ ಬ್ಯಾರೆ ದೇಶಗಳ ಜಿಡಿಪಿ ಎಷ್ಟದಪಾ? ಇದು ಯಾಕ ಬೇಕಂದ್ರ, ನಿಮ್ಮ ಹುಡುಗಾ ರನ್ನಿಂಗ್ ರೇಸ್ ನ್ಯಾಗ ಎಷ್ಟನೇ ಬಂದಾನ್ರೀ ಅಂದ್ರ ಸೆಕೆಂಡ್ ಬಂದಾನ ಅಂತ ನೀವು ಹೆಮ್ಮೆಯಿಂದ ಹೇಳಿದ್ರಿ ಅಂತ ತಿಳಕೋಳ್ರಿ. ಆ ರೇಸಿನ್ಯಾಗ ಎಷ್ಟು ಜನಾ ಇದ್ದರು ಅಂದರು ಅಂತ ತಿರಗಿ ಕೇಳಿದರ ಇಬ್ಬರ ರನ್ನರ್ಸ ಇದ್ದರು ಅಂತ ನಾಚಿಕೊಂಡು ಹೇಳೋ ಪರಿಸ್ಥಿತಿ ನಿಮಗ ಬರಬಾರದಲ್ಲಾ, ಅದಕ್ಕ.

ನೋಡ್ರಿ, ಈ ಸಮಸ್ತ ಭೂಮಂಡಲದಾಗ ಸುಮಾರು 220 ದೇಶ ಅಥವಾ ಸ್ವಯಂ ಆಡಳಿತ ಪ್ರದೇಶಾ ಅದಾವು. ಅದರಾಗ ಸುಮಾರು 200 ದೇಶದ ಜಿಡಿಪಿ ಲೆಕ್ಕಾ ಸಿಕ್ಕದ.
ಅದರ ಪ್ರಕಾರ ಅತಿ ಹೆಚ್ಚಿನವು ಹಿಂಗವ.

ಅಮೇರಿಕಾ 1357 ಲಕ್ಷ ಕೋಟಿ
ಚೈನಾ 857 ಲಕ್ಷ ಕೋಟಿ
ಜಪಾನ್ 350 ಲಕ್ಷ ಕೋಟಿ
ಜರ್ಮನಿ 257 ಲಕ್ಷ ಕೋಟಿ
ಭಾರತ 182 ಲಕ್ಷ ಕೋಟಿ
ಇನ್ನು ನಮ್ಮ ನೆರೆ ಹೊರೆಯವರ ಲೆಕ್ಕ ಎಷ್ಟು? ಬೆಳಿಗ್ಗೆ ಎದ್ದಾಗಿಂದಲೂ ಮಲಗೋ ತನಕಾ ನಾವು ಎಲ್ಲದಕ್ಕೂ ಹೋಲಿಸಿಕೊಳ್ಳುವ ನಮ್ಮ ನೆರೆಯವರು ಈ ರೇಸಿನ್ಯಾಗ ಎಲ್ಲಿದ್ದಾರ ಅಂದರ-
ಬಾಂಗ್ಲಾ – 17 ಲಕ್ಷ ಕೋಟಿ
ಪಾಕಿಸ್ತಾನ 21 ಲಕ್ಷ ಕೋಟಿ
ಇನ್ನು ಲಭ್ಯ ಅಂಕಿ ಅಂಶಗಳ ಪ್ರಕಾರ ಅತ್ಯಂತ ಕಡಿಮೆ ಜಿಡಿಪಿ ಇರುವ ದೇಶಗಳು ಅಂದರ-
ಬುರುಂಡಿ 25,000 ಕೋಟಿ
ರುವಾಂಡಾ 63,000 ಕೋಟಿ

ನಮ್ಮ ದೇಶ ಕೆಲವೇ ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂಬ ಕನಸ ಮಾರುವ ಚಲುವರು ನಮ್ಮ ಸುತ್ತ ಮುತ್ತ ಇದ್ದಾರ. ನಮ್ಮ ಸ್ನೇಹಿತರ, ಕುಟುಂಬದ, ನಮ್ಮ ಸಹಪಾಠಿಗಳ, ಸಹ ಕೆಲಸಗಾರರ ಗುಂಪುಗಳಲ್ಲಿ ತುಂಬ್ಯಾರ.

ಅವರೆಲ್ಲಾ ತಿಳಿದುಕೊಳ್ಳಬೇಕಾದ ವಿಷಯ ಏನಪಾ ಅಂದರ ನಾವು ಜಿಡಿಪಿ ಪಟ್ಟಿಯ ಮೇಲಿನ ದೇಶಗಳಿಗೆ ಹತ್ತಿರ ಇಲ್ಲ. ಕೆಳಗಿನವರಿಗೆ ಹತ್ತಿರ ಇದ್ದೇವೆ. ಅದಕ್ಕೇ ಭೂಗೋಳದ ದಕ್ಷಿಣದ ದೇಶಗಳ ಭ್ರಾತ್ವತ್ವದ ಮಾತು, ಬ್ರಿಕ್ಸ ದೇಶಗಳ ಹೊಂದಾಣಿಕೆಯ ಮಾತುಗಳು ಆಗಾಗ ಕೇಳಿ ಬರತಿರತಾವು.
ಇದನ್ನ ನಾವು ಮರೆಯಬಾರದು.

ನಾವು ಏಣಿಯ ಎಷ್ಟನೇ ಮೆಟ್ಟಿಲ ಮೇಲೆ ಇದ್ದೇವಿ ಅನ್ನುವುದು ಗೊತ್ತಾಗದಿದ್ದರ ಎಷ್ಟು ಬೇಗ, ಎಷ್ಟು ಎತ್ತರಕ್ಕೆ ಏರಬೇಕು ಎನ್ನುವುದು ನಮಗೆ ಗೊತ್ತಾಗಲಿಕ್ಕೆ ಸಾಧ್ಯವಿಲ್ಲ. ನಾವು ನಿಂತಲ್ಲೇ ನಿಂತು ಮೇಲಿನವರನ್ನು ನೋಡಿ ಹೊಟ್ಟಿ ಕಿಚ್ಚು ಪಡಬಹುದು, ಅಥವಾ ಕೆಳಗಿನವರನ್ನು ನೋಡಿ ಅಪಹಾಸ್ಯ ಮಾಡಬಹುದು. ನಮ್ಮ ಮನಿಯೊಳಗ ಕನ್ನಡಿ ಇರದಿದ್ದರ, ಬೇರೆಯವರ ಮುಖದ ಮೇಲಿನ ಕಲೆಯ ಬಗ್ಗೆ ಮಾತಾಡಬಾರದು.

ಈ ಸಲಾ ಈ ವಿಷಯದ ಕಡೆ ನಮ್ಮ ಸಂಕೀರ್ತನೆ ಯಾಕ ಹೊರಳಿತಪಾ ಅಂದರ ಅದಕ್ಕೊಂದು ಛಂದನೆ ಕಾರಣ ಅದ.

ನಮ್ಮ ಮೋಹನ ಭಾಗವತ ಅವರು `ಜಿಡಿಪಿ’ ಭಾರತೀಯ ಮೂಲದ ಕಲ್ಪನೆ ಅಲ್ಲಾ ಅಂತ ಹೇಳ್ಯಾರ. ಅಷ್ಟ ಅಲ್ಲದ `ಲಿಂಚಿಂಗ್’ ಅನ್ನೋದು ಸಹ ನಮ್ಮ ಸಂಸ್ಕೃತಿಯ ಮೂಲದ್ದಲ್ಲಾ ಅಂತಂದಾರ.
ಅಮಿತ ಷಾ ಅವರು `ಮಾನವ ಹಕ್ಕುಗಳು` ಅನ್ನೋದು ನಮ್ಮ ಭಾರತೀಯ ಸಂಸ್ಕೃತಿಯ ಕಲ್ಪನೆ ಅಲ್ಲಾ ಅಂತ ಅಪ್ಪಣೆ ಕೊಟ್ಟಾರ.

ಅಂದರ ಈ ಮೂರು ವಿಷಯಗಳ ಬಗ್ಗೆ ತಿಳಕೊಳ್ಳೋದು, ಮಾತಾಡೋದು ನಿಷಿದ್ಧ ಅಂತ ಆತಲ್ಲಾ.
ಅದಕ್ಕಂತನ, ಈ ವಾರದ ಡೇಟಾ ಖೋಲಿಯೊಳಗ ನಮ್ಮ ಪ್ರವೇಶ. ಈ ನಿಷೇಧಿತ ವಸ್ತುವಿನ ಹುಡುಕಾಟಕ್ಕ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...