HomeಎಕಾನಮಿExplainer: ಈ ಜಿಡಿಪಿ (GDP) ಅಂದರೆ ಏನಪಾ? - ಬೈ ಡೇಟಾಮ್ಯಾಟಿಕ್ಸ್

Explainer: ಈ ಜಿಡಿಪಿ (GDP) ಅಂದರೆ ಏನಪಾ? – ಬೈ ಡೇಟಾಮ್ಯಾಟಿಕ್ಸ್

ನಮ್ಮ ದೇಶ ಕೆಲವೇ ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂಬ ಕನಸ ಮಾರುವ ಚಲುವರು ನಮ್ಮ ಸುತ್ತ ಮುತ್ತ ಇದ್ದಾರ. ನಮ್ಮ ಸ್ನೇಹಿತರ, ಕುಟುಂಬದ, ನಮ್ಮ ಸಹಪಾಠಿಗಳ, ಸಹ ಕೆಲಸಗಾರರ ಗುಂಪುಗಳಲ್ಲಿ ತುಂಬ್ಯಾರ.

- Advertisement -
- Advertisement -

ಜಿಡಿಪಿ ಅಥವಾ ನಿವ್ವಳ ಆಂತರಿಕ ಉತ್ನನ್ನ ಹಿಂಗಂದರ ಒಂದು ದೇಶದ ಜನಾ ತಮ್ಮ ಎಲ್ಲಾ ಚಟುವಟಿಕೆಗಳಿಂದ ಒಂದು ವರ್ಷದಾಗ ಸೃಷ್ಟಿಸಬಹುದಾದ ಒಟ್ಟು ಸಂಪತ್ತು. ಇದು ಸರಕು ಅಥವಾ ಸೇವೆಯ ರೂಪದಾಗ ಇರಬಹುದು.

ನೀವು ಏನರ ನೌಕರಿ ಮಾಡ್ತೀರಿ, ಅಥವಾ ವ್ಯಾಪಾರ ಮಾಡತೀರಿ ಅದರಿಂದ ನಿಮಗ ಎಷ್ಟು ದುಡ್ಡು ಅಥವಾ ಅದರ ಮೌಲ್ಯದ ಪರ್ಯಾಯ ವಸ್ತು ಅಥವಾ ಸೇವೆ ಸಿಗತದೋ ಅದು ನಿಮ್ಮ ಪಾಲಿನ ಜಿಡಿಪಿ. ಇಂಥದನ್ನೇ ಎಲ್ಲಾರೂ ಕೂಡಿ ಮಾಡಿದಾಗ ಸಿಗೋ ಲೆಕ್ಕಾ ಅಂದರ ಈ ದೇಶದ ಜಿಡಿಪಿ.


ಇದನ್ನೂ ಓದಿ: 1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ 23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ


ಇನ್ನ ಕೆಲವು ವಿಷಯ ಜಿಡಿಪಿಯೊಳಗ ಬರಂಗಿಲ್ಲಾ. ನಿಮ್ಮ ದಾಡಿ ನೀವ ಮಾಡಿಕೊಳ್ಳೋದು ಅನ್ರೀ, ನಿಮ್ಮ ತಾಯಿ, ಹೆಂಡತಿ, ಮಗಳು, ಅಕ್ಕಾ, ತಂಗಿ, ವೈನಿ, ಅಥವಾ ಮತ್ಯಾರರೆ ನಿಮ್ಮ ಅಡಿಗಿ ಮನಿಯೊಳಗ ನಿಮ್ಮ ಮತ್ತು ತಮ್ಮ ಊಟಕ್ಕ ಅಡಿಗೀ ಮಾಡತಾರಲ್ಲಾ, ಅದುನೂ ಬರೋದಿಲ್ಲ. ನಮ್ಮ ದೇಶದೊಳಗ ಕೋಟ್ಯಾಂತರ ಹೆಣ್ಣು ಮಕ್ಕಳು ಸಾಯೋ ತನಕಾ ತಮ್ಮ ತಮ್ಮ ಮನಿಯೊಳಗ, ಕೈ ಸುಟಗೋತ ದುಡದು ಹಾಕತಾರಲ್ಲಾ ಅದರ ಮೌಲ್ಯ ಸರಕಾರದ ಜಿಡಿಪಿ ಲೆಕ್ಕದೊಳಗ ಬರಂಗಿಲ್ಲಾ. ಗಂಡು ಮಕ್ಕಳ ಮನಸಿನ್ಯಾಗಂತೂ ಅದು ಬರೋದೇ ಇಲ್ಲಾ ಬಿಡ್ರಿ. ಅದು ಬ್ಯಾರೆ ಮಾತು.

ನಂ ಭಾರತದ ಈ ವರ್ಷದ ಜಿಡಿಪಿ ಸುಮಾರು 2.6 ಲಕ್ಷ ಕೋಟಿ ಡಾಲರ್ ಅಂದರ ಸುಮಾರು 182 ಲಕ್ಷ ಕೋಟಿ. ಇದು 2011-12 ವರ್ಷವನ್ನು ಅಳತೆಗೋಲಾಗಿ ತೆಗೆದುಕೊಂಡಾಗ ಸಿಗುವ ಲೆಕ್ಕ. ಮುಂಚೆ ಇದು 1981 ಇತ್ತು, 91 ಆತು, 2004 ನಾಲ್ಕು ಆತು. ಮೋಷಾ ಸರಕಾರ ಬಂದ ಮ್ಯಾಲೆ ಇದು 2011 ಆತು. ಲೆಕ್ಕದ ವರ್ಷ ಬದಲಾದಂಗೆಲ್ಲಾ ಜಿಡಿಪಿಯ ಮೌಲ್ಯ ಬದಲಾಗತದ, ಅದು ಮತ್ತ ಯೂನಿವರ್ಸಿಟಿ ಬೃಹಸ್ಪತಿಗಳ ತಲಿ ಕೆಡಿಸೋ ಲೆಕ್ಕ. ನಮ್ಮಂತಹ ಹುಲುಮಾನವರಿಗಲ್ಲ. ಅದನ್ನ ಬಿಡ್ರಿ.

ಹಂಗಾರ ಬ್ಯಾರೆ ದೇಶಗಳ ಜಿಡಿಪಿ ಎಷ್ಟದಪಾ? ಇದು ಯಾಕ ಬೇಕಂದ್ರ, ನಿಮ್ಮ ಹುಡುಗಾ ರನ್ನಿಂಗ್ ರೇಸ್ ನ್ಯಾಗ ಎಷ್ಟನೇ ಬಂದಾನ್ರೀ ಅಂದ್ರ ಸೆಕೆಂಡ್ ಬಂದಾನ ಅಂತ ನೀವು ಹೆಮ್ಮೆಯಿಂದ ಹೇಳಿದ್ರಿ ಅಂತ ತಿಳಕೋಳ್ರಿ. ಆ ರೇಸಿನ್ಯಾಗ ಎಷ್ಟು ಜನಾ ಇದ್ದರು ಅಂದರು ಅಂತ ತಿರಗಿ ಕೇಳಿದರ ಇಬ್ಬರ ರನ್ನರ್ಸ ಇದ್ದರು ಅಂತ ನಾಚಿಕೊಂಡು ಹೇಳೋ ಪರಿಸ್ಥಿತಿ ನಿಮಗ ಬರಬಾರದಲ್ಲಾ, ಅದಕ್ಕ.

ನೋಡ್ರಿ, ಈ ಸಮಸ್ತ ಭೂಮಂಡಲದಾಗ ಸುಮಾರು 220 ದೇಶ ಅಥವಾ ಸ್ವಯಂ ಆಡಳಿತ ಪ್ರದೇಶಾ ಅದಾವು. ಅದರಾಗ ಸುಮಾರು 200 ದೇಶದ ಜಿಡಿಪಿ ಲೆಕ್ಕಾ ಸಿಕ್ಕದ.
ಅದರ ಪ್ರಕಾರ ಅತಿ ಹೆಚ್ಚಿನವು ಹಿಂಗವ.

ಅಮೇರಿಕಾ 1357 ಲಕ್ಷ ಕೋಟಿ
ಚೈನಾ 857 ಲಕ್ಷ ಕೋಟಿ
ಜಪಾನ್ 350 ಲಕ್ಷ ಕೋಟಿ
ಜರ್ಮನಿ 257 ಲಕ್ಷ ಕೋಟಿ
ಭಾರತ 182 ಲಕ್ಷ ಕೋಟಿ
ಇನ್ನು ನಮ್ಮ ನೆರೆ ಹೊರೆಯವರ ಲೆಕ್ಕ ಎಷ್ಟು? ಬೆಳಿಗ್ಗೆ ಎದ್ದಾಗಿಂದಲೂ ಮಲಗೋ ತನಕಾ ನಾವು ಎಲ್ಲದಕ್ಕೂ ಹೋಲಿಸಿಕೊಳ್ಳುವ ನಮ್ಮ ನೆರೆಯವರು ಈ ರೇಸಿನ್ಯಾಗ ಎಲ್ಲಿದ್ದಾರ ಅಂದರ-
ಬಾಂಗ್ಲಾ – 17 ಲಕ್ಷ ಕೋಟಿ
ಪಾಕಿಸ್ತಾನ 21 ಲಕ್ಷ ಕೋಟಿ
ಇನ್ನು ಲಭ್ಯ ಅಂಕಿ ಅಂಶಗಳ ಪ್ರಕಾರ ಅತ್ಯಂತ ಕಡಿಮೆ ಜಿಡಿಪಿ ಇರುವ ದೇಶಗಳು ಅಂದರ-
ಬುರುಂಡಿ 25,000 ಕೋಟಿ
ರುವಾಂಡಾ 63,000 ಕೋಟಿ

ನಮ್ಮ ದೇಶ ಕೆಲವೇ ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂಬ ಕನಸ ಮಾರುವ ಚಲುವರು ನಮ್ಮ ಸುತ್ತ ಮುತ್ತ ಇದ್ದಾರ. ನಮ್ಮ ಸ್ನೇಹಿತರ, ಕುಟುಂಬದ, ನಮ್ಮ ಸಹಪಾಠಿಗಳ, ಸಹ ಕೆಲಸಗಾರರ ಗುಂಪುಗಳಲ್ಲಿ ತುಂಬ್ಯಾರ.

ಅವರೆಲ್ಲಾ ತಿಳಿದುಕೊಳ್ಳಬೇಕಾದ ವಿಷಯ ಏನಪಾ ಅಂದರ ನಾವು ಜಿಡಿಪಿ ಪಟ್ಟಿಯ ಮೇಲಿನ ದೇಶಗಳಿಗೆ ಹತ್ತಿರ ಇಲ್ಲ. ಕೆಳಗಿನವರಿಗೆ ಹತ್ತಿರ ಇದ್ದೇವೆ. ಅದಕ್ಕೇ ಭೂಗೋಳದ ದಕ್ಷಿಣದ ದೇಶಗಳ ಭ್ರಾತ್ವತ್ವದ ಮಾತು, ಬ್ರಿಕ್ಸ ದೇಶಗಳ ಹೊಂದಾಣಿಕೆಯ ಮಾತುಗಳು ಆಗಾಗ ಕೇಳಿ ಬರತಿರತಾವು.
ಇದನ್ನ ನಾವು ಮರೆಯಬಾರದು.

ನಾವು ಏಣಿಯ ಎಷ್ಟನೇ ಮೆಟ್ಟಿಲ ಮೇಲೆ ಇದ್ದೇವಿ ಅನ್ನುವುದು ಗೊತ್ತಾಗದಿದ್ದರ ಎಷ್ಟು ಬೇಗ, ಎಷ್ಟು ಎತ್ತರಕ್ಕೆ ಏರಬೇಕು ಎನ್ನುವುದು ನಮಗೆ ಗೊತ್ತಾಗಲಿಕ್ಕೆ ಸಾಧ್ಯವಿಲ್ಲ. ನಾವು ನಿಂತಲ್ಲೇ ನಿಂತು ಮೇಲಿನವರನ್ನು ನೋಡಿ ಹೊಟ್ಟಿ ಕಿಚ್ಚು ಪಡಬಹುದು, ಅಥವಾ ಕೆಳಗಿನವರನ್ನು ನೋಡಿ ಅಪಹಾಸ್ಯ ಮಾಡಬಹುದು. ನಮ್ಮ ಮನಿಯೊಳಗ ಕನ್ನಡಿ ಇರದಿದ್ದರ, ಬೇರೆಯವರ ಮುಖದ ಮೇಲಿನ ಕಲೆಯ ಬಗ್ಗೆ ಮಾತಾಡಬಾರದು.

ಈ ಸಲಾ ಈ ವಿಷಯದ ಕಡೆ ನಮ್ಮ ಸಂಕೀರ್ತನೆ ಯಾಕ ಹೊರಳಿತಪಾ ಅಂದರ ಅದಕ್ಕೊಂದು ಛಂದನೆ ಕಾರಣ ಅದ.

ನಮ್ಮ ಮೋಹನ ಭಾಗವತ ಅವರು `ಜಿಡಿಪಿ’ ಭಾರತೀಯ ಮೂಲದ ಕಲ್ಪನೆ ಅಲ್ಲಾ ಅಂತ ಹೇಳ್ಯಾರ. ಅಷ್ಟ ಅಲ್ಲದ `ಲಿಂಚಿಂಗ್’ ಅನ್ನೋದು ಸಹ ನಮ್ಮ ಸಂಸ್ಕೃತಿಯ ಮೂಲದ್ದಲ್ಲಾ ಅಂತಂದಾರ.
ಅಮಿತ ಷಾ ಅವರು `ಮಾನವ ಹಕ್ಕುಗಳು` ಅನ್ನೋದು ನಮ್ಮ ಭಾರತೀಯ ಸಂಸ್ಕೃತಿಯ ಕಲ್ಪನೆ ಅಲ್ಲಾ ಅಂತ ಅಪ್ಪಣೆ ಕೊಟ್ಟಾರ.

ಅಂದರ ಈ ಮೂರು ವಿಷಯಗಳ ಬಗ್ಗೆ ತಿಳಕೊಳ್ಳೋದು, ಮಾತಾಡೋದು ನಿಷಿದ್ಧ ಅಂತ ಆತಲ್ಲಾ.
ಅದಕ್ಕಂತನ, ಈ ವಾರದ ಡೇಟಾ ಖೋಲಿಯೊಳಗ ನಮ್ಮ ಪ್ರವೇಶ. ಈ ನಿಷೇಧಿತ ವಸ್ತುವಿನ ಹುಡುಕಾಟಕ್ಕ.


ಇದನ್ನೂ ಓದಿ: ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...