HomeಚಳವಳಿExplainer: ಏನಿದು ಕುಲಾಂತರಿ ಸಾಸಿವೆ ವಿವಾದ? ಅದರ ಬಳಕೆ ಬೇಕೆ - ಬೇಡವೇ?

Explainer: ಏನಿದು ಕುಲಾಂತರಿ ಸಾಸಿವೆ ವಿವಾದ? ಅದರ ಬಳಕೆ ಬೇಕೆ – ಬೇಡವೇ?

- Advertisement -
- Advertisement -

ಕುಲಾಂತರಿ ಬದನೆಕಾಯಿ ವಿರುದ್ಧ ನಡೆದ ಪ್ರತಿಭಟನೆಗಳ ಕಾರಣಕ್ಕೆ ಅದರ ವ್ಯಾವಹಾರಿಕೆ ಬಳಕೆಗೆ ತಡೆಯೊಡ್ಡಲಾಗಿದೆ. ಇಂತಹ ಸಂದರ್ಭದಲ್ಲಿ ಕುಲಾಂತರಿ ಸಾಸಿವೆ ಬಳಕೆ ಸಂಬಂಧಿಸಿದಂತೆ ಮತ್ತೆ ವಿವಾದ ಭುಗಿಲೆದ್ದಿದೆ. ಈ ಹಿಂದೆಯೇ ಕುಲಾಂತರಿಗಳ ಸಮಗ್ರ ಅಧ್ಯಯನ ನಡೆಸದೆ ಅವುಗಳ ವಾಣಿಜ್ಯ ಬಳಕೆ ಬೇಡವೆಂದು 2012ರಲ್ಲಿ ಸಂಸದೀಯ ಸಮಿತಿ ಹಾಗೂ 2013ರಲ್ಲಿ ಸರ್ವೋಚ್ಚ ನ್ಯಾಯಾಲಯದ ತಾಂತ್ರಿಕ ಸಮಿತಿ ಶಿಫಾರಸು ಮಾಡಿದವು. ಆದರೂ ಧಾರಾ ಮಸ್ಟರ್ಡ್ ಹೈಬ್ರಿಡ್ -11 (ಡಿಎಂಎಚ್-11) ಎಂಬ ಕುಲಾಂತರಿ ಸಾಸಿವೆಯನ್ನು ಮುಕ್ತ ಪರಿಸರದಲ್ಲಿ ಪರೀಕ್ಷೆಗೆ ಒಳಪಡಿಸಲು ಕೇಂದ್ರ ಸರ್ಕಾರದ ಕುಲಾಂತರ ತಳಿ ಪರಿಶೀಲನಾ ಸಮಿತಿ (ಜಿಇಎಸಿ) ಅಕ್ಟೋಬರ್ 18ರಂದು ಅನುಮತಿ ನೀಡಿದೆ.

ಆದರೆ ಸಾಮಾಜಿಕ ಕಾರ್ಯಕರ್ತರು ವೈಜ್ಞಾನಿಕ ಪ್ರಯೋಗಳುಗಳು ನಡೆಯದೆ ಅನುಮತಿ ನೀಡಲಾಗಿದೆ ಮತ್ತು ಇದರ ಬಳಕೆಯು ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳನ್ನು ಉಲ್ಲೇಖಿಸಿ ವಾಣಿಜ್ಯ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಸಹ ಹೂಡಿದ್ದಾರೆ. ಆದರೆ ಕೆಲ ವಿಜ್ಞಾನಿಗಳು ಮತ್ತು ಕೇಂದ್ರ ಸರ್ಕಾರ ಸಾಸಿವೆ ಎಣ್ಣೆಯ ಅಗತ್ಯತೆ ಉಲ್ಲೇಖಿಸಿ ವಾಣಿಜ್ಯ ಬಳಕೆಗೆ ಅವಕಾಶ ನೀಡಬೇಕೆಂದು ವಾದಿಸಿದ್ದಾರೆ. ಸುಪ್ರೀಂ ಕೋರ್ಟ್ ಪರಿಸರದ ಪರೀಕ್ಷೆಗೆ ತಡೆಯಾಜ್ಞೆ ನೀಡಿದ್ದು, ನವೆಂಬರ್ 10ರೊಳಗೆ ಕೇಂದ್ರ ಸರ್ಕಾರ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಸೂಚಿಸಿದೆ. ಆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

ಧಾರಾ ಮಸ್ಟರ್ಡ್ ಹೈಬ್ರಿಡ್ -11 ಕುರಿತು

ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಯಾಗಿದ್ದ, ವಿಶ್ವವಿದ್ಯಾಲಯದ ದಿ ಸೆಂಟರ್ ಫಾರ್ ಜೆನೆಟಿಕ್ ಮ್ಯಾನಿಪ್ಯುಲೇಷನ್ ಆಫ್ ಕ್ರಾಪ್ ಪ್ಲಾಂಟ್ಸ್‌ನ ನಿರ್ದೇಶಕರಾಗಿರುವ ದೀಪಕ್ ಪೆಂಟಾಲ್ ಧಾರಾ ಮಸ್ಟರ್ಡ್ ಹೈಬ್ರಿಡ್ -11 ಎಂಬ ಕುಲಾಂತರಿ ಸಾಸಿವೆಯನ್ನು ಅಭಿವೃದ್ದಿಪಡಿಸಿದ್ದಾರೆ. ಬರ್ನೇಸ್ ಮತ್ತು ಬಸ್ತಾರ್ ಎಂಬ ಎರಡು ವಂಶವಾಹಿಗಳನ್ನು ಮಣ್ಣಿನಲ್ಲಿ ಅಡಕವಿರುವ ಬ್ಯಾಕ್ಟಿರಿಯಾ ಆದ ಬಾಸಿಲಸ್ ಅಮೈಲೋ ಲಿಕ್ವಿಫೇಸಿಯನ್ಸ್ ಎಂಬುದರಿಂದ ತೆಗೆದು ಹೈಬ್ರೀಡ್ ಸಾಸಿವೆಯ ಅಂಗಾಂಶದಲ್ಲಿ ಸೇರಿಸುವ ಮೂಲಕ ಈ ತಳಿಯನ್ನು ತಯಾರಿಸಲಾಗಿದೆ.

ಇದನ್ನು ದೇಸಿಯ ಹೈಬ್ರಿಡ್ ಎಂದು ಕೇಂದ್ರ ಸರ್ಕಾರ ಪ್ರಚಾರ ಮಾಡಿದರೆ, ಹೋರಾಟಗಾರರು ಬರ್ನೇಸ್ ಮತ್ತು ಬಸ್ತಾರ್ ಎಂಬ ಎರಡು ವಂಶವಾಹಿಗಳು ಜರ್ಮನ್ ಮೂಲದ ಬಾಯರ್ ಆಗ್ರೋ ಸೈನ್ಸ್ ನವರ ಪೇಟೆಂಟ್ ಆಗಿದೆ ಎಂದು ಆರೋಪಿಸಿದ್ದಾರೆ.

ಕುಲಾಂತರಿ ತಳಿ ಪರ ಇರುವವರ ವಾದ

ಭಾರತದಲ್ಲಿ ಸಾಸಿವೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಹೊಸ ಕುಲಾಂತರಿ ತಳಿಯು ಸ್ಥಳೀಯ ತಳಿಗಿಂತ 28% ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ಇದರ ಕಳೆ ನಿರ್ವಹಣೆ ಅತಿ ಸುಲಭವಾಗಿದೆ. ಕಳೆನಾಶಕ ಸಿಂಪಡಿಸಿದರೆ ಕಳೆ ಮಾತ್ರವೇ ನಾಶವಾಗುತ್ತದೆ. ಸಾಸಿವೆ ಗಿಡಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಭಾರತವು ಖಾದ್ಯ ತೈಲ ಉತ್ಪಾದನೆಯಲ್ಲಿ ತೀರಾ ಹಿಂದಿದೆ. ಪ್ರತಿ ವರ್ಷ ಬಳಕೆಯ ಮೂರನೇ ಎರಡರಷ್ಟನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇದೆ. 2020-21ರಲ್ಲಿ ₹1,17,000 ಕೋಟಿ ವೆಚ್ಚದಲ್ಲಿ ಸುಮಾರು 13.3 ಮಿಲಿಯನ್ ಟನ್ ಖಾದ್ಯ ತೈಲವನ್ನು ಆಮದು ಮಾಡಿಕೊಳ್ಳಲಾಗಿದೆ. ಅದನ್ನು ತಪ್ಪಿಸಬೇಕಾದರೆ ಹೆಚ್ಚು ಇಳುವರಿ ಕೊಡುವ ಕುಲಾಂತರಿ ತಳಿ ಬಳಕೆ ಅನಿವಾರ್ಯ.

ಕುಲಾಂತರಿ ತಳಿ ವಿರೋಧಿಗಳ ವಾದ

ಬಾಯರ್‌ನಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ಕುಲಾಂತರಿ ತಳಿ ಬೀಜಗಳು ಮತ್ತು ಆಹಾರೋತ್ಪಾದನೆಗಳಿಗೆ ಅವಕಾಶ ನೀಡುವ ಮೂಲಕ ಭಾರತದಲ್ಲಿ ಅದರ ವಸಾಹತು ಸ್ಥಾಪನೆ ಮಾಡಲು ಅವಕಾಶ ಮಾಡಿಕೊಡಬಾರದು.

28% ಹೆಚ್ಚಿನ ಇಳುವರಿ ಕೊಡುತ್ತದೆ ಎಂಬುದಕ್ಕೆ ವೈಜ್ಞಾನಿಕ ದಾಖಲೆಗಳಿಲ್ಲ. ಅದರ ಬದಲಿಗೆ ನಮ್ಮ ರೈತರಿಗೆ ಸಾಕಷ್ಟು ಪ್ರೋತ್ಸಾಹ ನೀಡಿದರೆ ಈಗ ಬೆಳೆಯುತ್ತಿರುವುದರ ಮೂರು ಪಟ್ಟು ಅಧಿಕ ಸಾಸಿವೆ ಬೆಳೆಯುತ್ತಾರೆ.

ಈ ಸಾಸಿವೆ ಬೆಳೆಗೆ ಕಳೆನಾಶಕ ಗ್ಲುಫೊಸಿನೇಟ್ ಬಳಕೆ ಅನಿವಾರ್ಯವಾಗಿದೆ. ಬಾಯರ್ ಬಹರಾಷ್ಟ್ರೀಯ ಕಂಪನಿಯೇ ಆ ಕಳೆನಾಶಕದ ತಯಾರಿಸುತ್ತಿದ್ದು ಅದರ ಲಾಭಕ್ಕಾಗಿಯೇ ಈ ತಳಿ ಪರಿಚಯಿಸಿದ್ದಾರೆ.

ಆ ಕಳೆನಾಶಕದ ಬಳಕೆ ಹೆಚ್ಚಿದರೆ ಈ ಕಳೆನಾಶಕಗಳು ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದ್ದು, ಮಾನವನ ಮತ್ತು ಪ್ರಾಣಿಗಳ ದೇಹದ ಕೋಶಕ್ಕೆ ಅಪಾಯಕಾರಿಯಾಗಿವೆ. ಭಾರತವೂ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಅದರ ಬಳಕೆಯನ್ನು ನಿಷೇಧಿಸಲಾಗಿದೆ.

ಪರಿಸರ ಮತ್ತು ಒಟ್ಟಾರೆ ಜೈವಿಕ ವ್ಯವಸ್ಥೆಯ ಆರೋಗ್ಯಕ್ಕೂ ಇದು ಹಾನಿಕಾರಕವಾಗಿದೆ. ಒಮ್ಮೆ ಇಂತಹ ಕುಲಾಂತರಿ ತಳಿಗಳನ್ನು ಪರಿಸರಕ್ಕೆ ವ್ಯಾಪಿಸಿದರೆ ಅದರಿಂದಾಗುವ ಹಾನಿಯನ್ನು ಮತ್ತೆ ಸರಿಪಡಿಸಲಾಗದು.

ಕುಲಾಂತರಿ ಸಾಸಿವೆ ಎಣ್ಣೆ ಬಳಕೆಯಿಂದ ಆಗುವ ಅಪಾಯಗಳ ಕುರಿತು ಯಾವುದೇ ವೈಜ್ಞಾನಿಕ ಅಧ್ಯಯನ ನಡೆದಿಲ್ಲ.

ಸದ್ಯ ಸಾಸಿವೆ ಗಿಡದ ಕಡುಹಳದಿ ಬಣ್ಣದ ಹೂವುಗಳು ಕೀಟಗಳು ಮತ್ತು ಜೇನುಗಳನ್ನು ಆಕರ್ಷಿಸುವ ಕೆಲಸ ಮಾಡುತ್ತ, ಉಳಿದ ಬೆಳೆಗಳನ್ನು ಪರೋಕ್ಷವಾಗಿ ರಕ್ಷಿಸುತ್ತಿವೆ. ಕುಲಾಂತರಿ ಸಾಸಿವೆಯಿಂದ ಈ ಸರಪಳಿ ಕಳಚುವ ಅಪಾಯವಿದೆ.

ಮುಂದುವರಿದ ದೇಶಗಳ ಕಾನೂನು ಏನು ಹೇಳುತ್ತದೆ?

ಅಮೆರಿಕ, ಚೀನಾ ಸೇರಿದಂತೆ ಹಲವು ಅಭಿವೃದ್ದಿ ಹೊಂದಿದ ದೇಶಗಳು ಕುಲಾಂತರಿ ಬೀಜಗಳನ್ನು ನಿಷೇಧಿಸಿವೆ ಮತ್ತು ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಿವೆ. ಆದರೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳು ಭಾರತದಂತಹ ತೃತೀಯ ಜಗತ್ತಿನ ರಾಷ್ಟ್ರಗಳ ಮೇಲೆ ಈ ರೀತಿಯ ಪ್ರಯೋಗಗಳನ್ನು ನಡೆಸುತ್ತವೆ ಎಂಬ ಆರೋಪವಿದೆ.

ಅಲ್ಲದೆ ಕುಲಾಂತರಿ ಬೀಜಗಳು ದೇಶದ ವೈವಿದ್ಯ ಬೀಜ ಉತ್ಪಾದನೆಗೆ ಮಾರಕವಾಗಿ ಪರಿಣಿಮಿಸಿರುವ ಉದಾಹರಣಗಳಿವೆ. ಭಾರತದಂತಹ ದೇಶದಲ್ಲಿ ಬೀಜ ಸಂರಕ್ಷಣೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಹೈಬ್ರೀಡ್, ಕುಲಾಂತರಿ ಬೀಜಗಳ ಪ್ರಭಾವದಿಂದಾಗಿ ನಮ್ಮ ಬೀಜ ಸ್ವಾತಂತ್ರ್ಯ ನಶಿಸಿ ಬಹುರಾಷ್ಟ್ರೀಯ ಕಂಪನಿಗಳ ಮೊರೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ. ಇದು ದೊಡ್ಡ ಅಪಾಯಕಾರಿ ಎಂಬುದು ಪರಿಸರ ತಜ್ಞರ ಅಭಿಮತವಾಗಿದೆ.

ಈ ಎಲ್ಲಾ ಅಂಶಗಳನ್ನು ಗಮನಿಸಿ ಕುಲಾಂತರಿ ಬೀಜಗಳ ಬಳಕೆ ಬೇಕೆ ಬೇಡವೆ ಎಂದದನ್ನು ಭಾರತೀಯರು ನಿರ್ಧರಿಸಬೇಕಿದೆ.

ಇದನ್ನೂ ಓದಿ: ಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...