HomeಚಳವಳಿExplainer: ಏನಿದು ಕುಲಾಂತರಿ ಸಾಸಿವೆ ವಿವಾದ? ಅದರ ಬಳಕೆ ಬೇಕೆ - ಬೇಡವೇ?

Explainer: ಏನಿದು ಕುಲಾಂತರಿ ಸಾಸಿವೆ ವಿವಾದ? ಅದರ ಬಳಕೆ ಬೇಕೆ – ಬೇಡವೇ?

- Advertisement -
- Advertisement -

ಕುಲಾಂತರಿ ಬದನೆಕಾಯಿ ವಿರುದ್ಧ ನಡೆದ ಪ್ರತಿಭಟನೆಗಳ ಕಾರಣಕ್ಕೆ ಅದರ ವ್ಯಾವಹಾರಿಕೆ ಬಳಕೆಗೆ ತಡೆಯೊಡ್ಡಲಾಗಿದೆ. ಇಂತಹ ಸಂದರ್ಭದಲ್ಲಿ ಕುಲಾಂತರಿ ಸಾಸಿವೆ ಬಳಕೆ ಸಂಬಂಧಿಸಿದಂತೆ ಮತ್ತೆ ವಿವಾದ ಭುಗಿಲೆದ್ದಿದೆ. ಈ ಹಿಂದೆಯೇ ಕುಲಾಂತರಿಗಳ ಸಮಗ್ರ ಅಧ್ಯಯನ ನಡೆಸದೆ ಅವುಗಳ ವಾಣಿಜ್ಯ ಬಳಕೆ ಬೇಡವೆಂದು 2012ರಲ್ಲಿ ಸಂಸದೀಯ ಸಮಿತಿ ಹಾಗೂ 2013ರಲ್ಲಿ ಸರ್ವೋಚ್ಚ ನ್ಯಾಯಾಲಯದ ತಾಂತ್ರಿಕ ಸಮಿತಿ ಶಿಫಾರಸು ಮಾಡಿದವು. ಆದರೂ ಧಾರಾ ಮಸ್ಟರ್ಡ್ ಹೈಬ್ರಿಡ್ -11 (ಡಿಎಂಎಚ್-11) ಎಂಬ ಕುಲಾಂತರಿ ಸಾಸಿವೆಯನ್ನು ಮುಕ್ತ ಪರಿಸರದಲ್ಲಿ ಪರೀಕ್ಷೆಗೆ ಒಳಪಡಿಸಲು ಕೇಂದ್ರ ಸರ್ಕಾರದ ಕುಲಾಂತರ ತಳಿ ಪರಿಶೀಲನಾ ಸಮಿತಿ (ಜಿಇಎಸಿ) ಅಕ್ಟೋಬರ್ 18ರಂದು ಅನುಮತಿ ನೀಡಿದೆ.

ಆದರೆ ಸಾಮಾಜಿಕ ಕಾರ್ಯಕರ್ತರು ವೈಜ್ಞಾನಿಕ ಪ್ರಯೋಗಳುಗಳು ನಡೆಯದೆ ಅನುಮತಿ ನೀಡಲಾಗಿದೆ ಮತ್ತು ಇದರ ಬಳಕೆಯು ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳನ್ನು ಉಲ್ಲೇಖಿಸಿ ವಾಣಿಜ್ಯ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಸಹ ಹೂಡಿದ್ದಾರೆ. ಆದರೆ ಕೆಲ ವಿಜ್ಞಾನಿಗಳು ಮತ್ತು ಕೇಂದ್ರ ಸರ್ಕಾರ ಸಾಸಿವೆ ಎಣ್ಣೆಯ ಅಗತ್ಯತೆ ಉಲ್ಲೇಖಿಸಿ ವಾಣಿಜ್ಯ ಬಳಕೆಗೆ ಅವಕಾಶ ನೀಡಬೇಕೆಂದು ವಾದಿಸಿದ್ದಾರೆ. ಸುಪ್ರೀಂ ಕೋರ್ಟ್ ಪರಿಸರದ ಪರೀಕ್ಷೆಗೆ ತಡೆಯಾಜ್ಞೆ ನೀಡಿದ್ದು, ನವೆಂಬರ್ 10ರೊಳಗೆ ಕೇಂದ್ರ ಸರ್ಕಾರ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಸೂಚಿಸಿದೆ. ಆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

ಧಾರಾ ಮಸ್ಟರ್ಡ್ ಹೈಬ್ರಿಡ್ -11 ಕುರಿತು

ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಯಾಗಿದ್ದ, ವಿಶ್ವವಿದ್ಯಾಲಯದ ದಿ ಸೆಂಟರ್ ಫಾರ್ ಜೆನೆಟಿಕ್ ಮ್ಯಾನಿಪ್ಯುಲೇಷನ್ ಆಫ್ ಕ್ರಾಪ್ ಪ್ಲಾಂಟ್ಸ್‌ನ ನಿರ್ದೇಶಕರಾಗಿರುವ ದೀಪಕ್ ಪೆಂಟಾಲ್ ಧಾರಾ ಮಸ್ಟರ್ಡ್ ಹೈಬ್ರಿಡ್ -11 ಎಂಬ ಕುಲಾಂತರಿ ಸಾಸಿವೆಯನ್ನು ಅಭಿವೃದ್ದಿಪಡಿಸಿದ್ದಾರೆ. ಬರ್ನೇಸ್ ಮತ್ತು ಬಸ್ತಾರ್ ಎಂಬ ಎರಡು ವಂಶವಾಹಿಗಳನ್ನು ಮಣ್ಣಿನಲ್ಲಿ ಅಡಕವಿರುವ ಬ್ಯಾಕ್ಟಿರಿಯಾ ಆದ ಬಾಸಿಲಸ್ ಅಮೈಲೋ ಲಿಕ್ವಿಫೇಸಿಯನ್ಸ್ ಎಂಬುದರಿಂದ ತೆಗೆದು ಹೈಬ್ರೀಡ್ ಸಾಸಿವೆಯ ಅಂಗಾಂಶದಲ್ಲಿ ಸೇರಿಸುವ ಮೂಲಕ ಈ ತಳಿಯನ್ನು ತಯಾರಿಸಲಾಗಿದೆ.

ಇದನ್ನು ದೇಸಿಯ ಹೈಬ್ರಿಡ್ ಎಂದು ಕೇಂದ್ರ ಸರ್ಕಾರ ಪ್ರಚಾರ ಮಾಡಿದರೆ, ಹೋರಾಟಗಾರರು ಬರ್ನೇಸ್ ಮತ್ತು ಬಸ್ತಾರ್ ಎಂಬ ಎರಡು ವಂಶವಾಹಿಗಳು ಜರ್ಮನ್ ಮೂಲದ ಬಾಯರ್ ಆಗ್ರೋ ಸೈನ್ಸ್ ನವರ ಪೇಟೆಂಟ್ ಆಗಿದೆ ಎಂದು ಆರೋಪಿಸಿದ್ದಾರೆ.

ಕುಲಾಂತರಿ ತಳಿ ಪರ ಇರುವವರ ವಾದ

ಭಾರತದಲ್ಲಿ ಸಾಸಿವೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಹೊಸ ಕುಲಾಂತರಿ ತಳಿಯು ಸ್ಥಳೀಯ ತಳಿಗಿಂತ 28% ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ಇದರ ಕಳೆ ನಿರ್ವಹಣೆ ಅತಿ ಸುಲಭವಾಗಿದೆ. ಕಳೆನಾಶಕ ಸಿಂಪಡಿಸಿದರೆ ಕಳೆ ಮಾತ್ರವೇ ನಾಶವಾಗುತ್ತದೆ. ಸಾಸಿವೆ ಗಿಡಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಭಾರತವು ಖಾದ್ಯ ತೈಲ ಉತ್ಪಾದನೆಯಲ್ಲಿ ತೀರಾ ಹಿಂದಿದೆ. ಪ್ರತಿ ವರ್ಷ ಬಳಕೆಯ ಮೂರನೇ ಎರಡರಷ್ಟನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇದೆ. 2020-21ರಲ್ಲಿ ₹1,17,000 ಕೋಟಿ ವೆಚ್ಚದಲ್ಲಿ ಸುಮಾರು 13.3 ಮಿಲಿಯನ್ ಟನ್ ಖಾದ್ಯ ತೈಲವನ್ನು ಆಮದು ಮಾಡಿಕೊಳ್ಳಲಾಗಿದೆ. ಅದನ್ನು ತಪ್ಪಿಸಬೇಕಾದರೆ ಹೆಚ್ಚು ಇಳುವರಿ ಕೊಡುವ ಕುಲಾಂತರಿ ತಳಿ ಬಳಕೆ ಅನಿವಾರ್ಯ.

ಕುಲಾಂತರಿ ತಳಿ ವಿರೋಧಿಗಳ ವಾದ

ಬಾಯರ್‌ನಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ಕುಲಾಂತರಿ ತಳಿ ಬೀಜಗಳು ಮತ್ತು ಆಹಾರೋತ್ಪಾದನೆಗಳಿಗೆ ಅವಕಾಶ ನೀಡುವ ಮೂಲಕ ಭಾರತದಲ್ಲಿ ಅದರ ವಸಾಹತು ಸ್ಥಾಪನೆ ಮಾಡಲು ಅವಕಾಶ ಮಾಡಿಕೊಡಬಾರದು.

28% ಹೆಚ್ಚಿನ ಇಳುವರಿ ಕೊಡುತ್ತದೆ ಎಂಬುದಕ್ಕೆ ವೈಜ್ಞಾನಿಕ ದಾಖಲೆಗಳಿಲ್ಲ. ಅದರ ಬದಲಿಗೆ ನಮ್ಮ ರೈತರಿಗೆ ಸಾಕಷ್ಟು ಪ್ರೋತ್ಸಾಹ ನೀಡಿದರೆ ಈಗ ಬೆಳೆಯುತ್ತಿರುವುದರ ಮೂರು ಪಟ್ಟು ಅಧಿಕ ಸಾಸಿವೆ ಬೆಳೆಯುತ್ತಾರೆ.

ಈ ಸಾಸಿವೆ ಬೆಳೆಗೆ ಕಳೆನಾಶಕ ಗ್ಲುಫೊಸಿನೇಟ್ ಬಳಕೆ ಅನಿವಾರ್ಯವಾಗಿದೆ. ಬಾಯರ್ ಬಹರಾಷ್ಟ್ರೀಯ ಕಂಪನಿಯೇ ಆ ಕಳೆನಾಶಕದ ತಯಾರಿಸುತ್ತಿದ್ದು ಅದರ ಲಾಭಕ್ಕಾಗಿಯೇ ಈ ತಳಿ ಪರಿಚಯಿಸಿದ್ದಾರೆ.

ಆ ಕಳೆನಾಶಕದ ಬಳಕೆ ಹೆಚ್ಚಿದರೆ ಈ ಕಳೆನಾಶಕಗಳು ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದ್ದು, ಮಾನವನ ಮತ್ತು ಪ್ರಾಣಿಗಳ ದೇಹದ ಕೋಶಕ್ಕೆ ಅಪಾಯಕಾರಿಯಾಗಿವೆ. ಭಾರತವೂ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಅದರ ಬಳಕೆಯನ್ನು ನಿಷೇಧಿಸಲಾಗಿದೆ.

ಪರಿಸರ ಮತ್ತು ಒಟ್ಟಾರೆ ಜೈವಿಕ ವ್ಯವಸ್ಥೆಯ ಆರೋಗ್ಯಕ್ಕೂ ಇದು ಹಾನಿಕಾರಕವಾಗಿದೆ. ಒಮ್ಮೆ ಇಂತಹ ಕುಲಾಂತರಿ ತಳಿಗಳನ್ನು ಪರಿಸರಕ್ಕೆ ವ್ಯಾಪಿಸಿದರೆ ಅದರಿಂದಾಗುವ ಹಾನಿಯನ್ನು ಮತ್ತೆ ಸರಿಪಡಿಸಲಾಗದು.

ಕುಲಾಂತರಿ ಸಾಸಿವೆ ಎಣ್ಣೆ ಬಳಕೆಯಿಂದ ಆಗುವ ಅಪಾಯಗಳ ಕುರಿತು ಯಾವುದೇ ವೈಜ್ಞಾನಿಕ ಅಧ್ಯಯನ ನಡೆದಿಲ್ಲ.

ಸದ್ಯ ಸಾಸಿವೆ ಗಿಡದ ಕಡುಹಳದಿ ಬಣ್ಣದ ಹೂವುಗಳು ಕೀಟಗಳು ಮತ್ತು ಜೇನುಗಳನ್ನು ಆಕರ್ಷಿಸುವ ಕೆಲಸ ಮಾಡುತ್ತ, ಉಳಿದ ಬೆಳೆಗಳನ್ನು ಪರೋಕ್ಷವಾಗಿ ರಕ್ಷಿಸುತ್ತಿವೆ. ಕುಲಾಂತರಿ ಸಾಸಿವೆಯಿಂದ ಈ ಸರಪಳಿ ಕಳಚುವ ಅಪಾಯವಿದೆ.

ಮುಂದುವರಿದ ದೇಶಗಳ ಕಾನೂನು ಏನು ಹೇಳುತ್ತದೆ?

ಅಮೆರಿಕ, ಚೀನಾ ಸೇರಿದಂತೆ ಹಲವು ಅಭಿವೃದ್ದಿ ಹೊಂದಿದ ದೇಶಗಳು ಕುಲಾಂತರಿ ಬೀಜಗಳನ್ನು ನಿಷೇಧಿಸಿವೆ ಮತ್ತು ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಿವೆ. ಆದರೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳು ಭಾರತದಂತಹ ತೃತೀಯ ಜಗತ್ತಿನ ರಾಷ್ಟ್ರಗಳ ಮೇಲೆ ಈ ರೀತಿಯ ಪ್ರಯೋಗಗಳನ್ನು ನಡೆಸುತ್ತವೆ ಎಂಬ ಆರೋಪವಿದೆ.

ಅಲ್ಲದೆ ಕುಲಾಂತರಿ ಬೀಜಗಳು ದೇಶದ ವೈವಿದ್ಯ ಬೀಜ ಉತ್ಪಾದನೆಗೆ ಮಾರಕವಾಗಿ ಪರಿಣಿಮಿಸಿರುವ ಉದಾಹರಣಗಳಿವೆ. ಭಾರತದಂತಹ ದೇಶದಲ್ಲಿ ಬೀಜ ಸಂರಕ್ಷಣೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಹೈಬ್ರೀಡ್, ಕುಲಾಂತರಿ ಬೀಜಗಳ ಪ್ರಭಾವದಿಂದಾಗಿ ನಮ್ಮ ಬೀಜ ಸ್ವಾತಂತ್ರ್ಯ ನಶಿಸಿ ಬಹುರಾಷ್ಟ್ರೀಯ ಕಂಪನಿಗಳ ಮೊರೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ. ಇದು ದೊಡ್ಡ ಅಪಾಯಕಾರಿ ಎಂಬುದು ಪರಿಸರ ತಜ್ಞರ ಅಭಿಮತವಾಗಿದೆ.

ಈ ಎಲ್ಲಾ ಅಂಶಗಳನ್ನು ಗಮನಿಸಿ ಕುಲಾಂತರಿ ಬೀಜಗಳ ಬಳಕೆ ಬೇಕೆ ಬೇಡವೆ ಎಂದದನ್ನು ಭಾರತೀಯರು ನಿರ್ಧರಿಸಬೇಕಿದೆ.

ಇದನ್ನೂ ಓದಿ: ಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...