Homeಮುಖಪುಟಪೆಟ್ರೋಲ್ - ಡೀಸೆಲ್ ಬೆಲೆ ಕಡಿಮೆ ಮಾಡಬೇಕಿರುವುದು ಮೋದಿ ಸರ್ಕಾರವೋ? ರಾಜ್ಯ ಸರ್ಕಾರಗಳೊ?: ಇಲ್ಲಿದೆ ಡೀಟೈಲ್ಸ್

ಪೆಟ್ರೋಲ್ – ಡೀಸೆಲ್ ಬೆಲೆ ಕಡಿಮೆ ಮಾಡಬೇಕಿರುವುದು ಮೋದಿ ಸರ್ಕಾರವೋ? ರಾಜ್ಯ ಸರ್ಕಾರಗಳೊ?: ಇಲ್ಲಿದೆ ಡೀಟೈಲ್ಸ್

ಪೆಟ್ರೋಲ್- ಡೀಸೆಲ್ ಅನ್ನು GST ವ್ಯಾಪ್ತಿಗೆ ತರಬೇಕೆ-ಬೇಡವೇ?

- Advertisement -
- Advertisement -

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ವಾಕ್ ಸಮರ ಆರಂಭವಾಗಿದೆ. ರಾಜ್ಯಗಳೊಂದಿಗೆ ಕೋವಿಡ್ ಸಂಬಂಧಿತ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು “ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ತೆರಿಗೆಯನ್ನು ಕಡಿಮೆ ಮಾಡಬೇಕು” ಎಂದು ಹೇಳಿಕೆ ನೀಡಿದ ನಂತರ ವಿವಾದ ತಾರಕಕ್ಕೇರಿದೆ.

“ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ. ಅದರೆ ”ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ಮೋದಿ ಸಭೆಯಲ್ಲಿ ಹೇಳಿದ್ದರು.

ಇದಕ್ಕೆ ತೀವ್ರವಾಗಿ ಟೀಕಿಸಿರುವ ಪ್ರತಿಪಕ್ಷಗಳು, ಅದರಲ್ಲಿಯೂ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ‘ಪ್ರಧಾನಿಗಳೆ ರಾಜ್ಯಗಳನ್ನು ದೂರುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ’ ಎಂದು ಕಠಿಣ ಪದಗಳಲ್ಲಿ ಟೀಕಿಸಿದ್ದಾರೆ. “ರಾಜ್ಯಗಳನ್ನು ದುರ್ಬಲಗೊಳಿಸಲು ಆರ್ಥಿಕ ಸಂಷಕ್ಟ ಸೃಷ್ಟಿಸುತ್ತಿದ್ದೀರಿ. ನಿಮಗೆ ಧೈರ್ಯವಿದ್ದರೆ ಯಾರು ಎಷ್ಟು ತೆರಿಗೆ ವಿಧಿಸುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿ” ಎಂದು ತೆಲಂಗಾಣ ಸಿಎಂ ಕೆಸಿಆರ್ ಸವಾಲು ಹಾಕಿದ್ದಾರೆ. “ನಾವೀಗ ಪ್ರತಿ ವರ್ಷ 1500 ಕೋಟಿ ರೂಗಳನ್ನು ಪೆಟ್ರೋಲ್ ಡೀಸೆಲ್ ಮೇಲಿನ ಸಬ್ಸಿಡಿ ನೀಡಲು ಬಳಸುತ್ತಿದ್ದೇವೆ. ಕೇಂದ್ರದಿಂದ ಬಂಗಾಳಕ್ಕೆ ಬರಬೇಕಿರುವ 97,000 ಕೋಟಿ ಬಾಕಿ ಹಣ ನೀಡಿ. ನಾವು ಪ್ರತಿವರ್ಷ 3000 ಕೋಟಿ ರೂ ಇಂಧನದ ಮೇಲಿನ ಸಬ್ಸಿಡಿಗೆ ಬಳಸುತ್ತೇವೆ” ಎಂದು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಿಜವಾಗಿಯೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಯಾರು ಕಾರಣ ಎಂಬುದನ್ನು ಗಮನಿಸೋಣ.

1. ಜೇಮ್ಸ್ ವಿಲ್ಸನ್ ಎಂಬ ಡೇಟಾ ಸೈಂಟಿಸ್ಟ್ ಏಪ್ರಿಲ್ 16 ರಂದು ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ನಿಗಧಿಯಾಗುವುದರ ಕುರಿತು ಸಂಶೋಧನಾ ವರದಿಯನ್ನು ಬಿಡುಗಡೆಗೊಳಿಸಿದ್ದಾರೆ. ಅದರಂತೆ ಕೇಂದ್ರ ಸರ್ಕಾರದ ಅಬಕಾರಿ ತೆರಿಗೆ ಹೆಚ್ಚಿರುವುದು ಕಂಡುಬಂದಿದೆ. ಕೆಳಗಿನ ಚಾರ್ಟ್ ನೋಡಿ

ಒಂದು ಲೀಟರ್ ಪೆಟ್ರೋಲ್‌ನ ಮೂಲಬೆಲೆ : 56.52 ರೂ (ಸಾಕಾಣೆ ವೆಚ್ಚ ಸೇರಿ)

ಕೇಂದ್ರ ಸರ್ಕಾರದ ಅಬಕಾರಿ ಶುಂಕ         : 27.90 ರೂ

ಡೀಲರ್ ಕಮಿಷನ್                            : 03.86 ರೂ

ರಾಜ್ಯದ ವ್ಯಾಟ್/ಮಾರಾಟ ತೆರಿಗೆ            : 17.13 ರೂ

ಗ್ರಾಹಕರಿಗೆ ಮಾರಟವಾಗುವ ಬೆಲೆ            : 105.41 ರೂ

2. ಕೇಂದ್ರದ ಅಬಕಾರಿ ತೆರಿಗೆಯಲ್ಲಿ ಸತತ ಏರಿಕೆ:

ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬಂದರೆ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಡೀಸೆಲ್ ನೀಡುವುದಾಗಿ ಭರವಸೆ ನೀಡಿದ್ದರು. ಅವರು 2014 ರಲ್ಲಿ ಅಧಿಕಾರಕ್ಕೆ ಬಂದಾಗ ಒಂದು ಲೀಟರ್ ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರ 9.48ರೂಗಳನ್ನು ಅಬಕಾರಿ ಶುಂಕ ವಿಧಿಸಲಾಗುತ್ತಿತ್ತು. ಆದರೆ ಮೋದಿ ಆಡಳಿತದಲ್ಲಿಅದು ಕ್ರಮೇಣ ಏರುತ್ತಲೇ ಸಾಗಿ 2021ರಲ್ಲಿ 32.98 ರೂಗೆ ಏರಿಕೆಯಾಗಿತ್ತು. ಆ ನಂತರ ಉತ್ತರ ಪ್ರದೇಶ ಸೇರಿ 5 ರಾಜ್ಯಗಳ ಚುನಾವಣೆ ಘೋಷಣೆಯಾದ ನಂತರ 2021ರ ನವೆಂಬರ್ 04ರಂದು ಮೋದಿಯವರು ಅಬಕಾರಿ ಶುಂಕವನ್ನು 27.90 ರೂಗೆ ಇಳಿಸಿದ್ದರು. ಆದರೆ ಇತ್ತೀಚೆಗೆ ಪೆಟ್ರೋಲ್ ಮೇಲಿನ ಮೂಲಬೆಲೆಯಲ್ಲಿ ಅಧಿಕವಾಗಿದ್ದು ಅದನ್ನು ನೇರವಾಗಿ ಗ್ರಾಮಕರ ಮೇಲೆ ವರ್ಗಾಯಿಸಲಾಗಿದೆ.

ಕೇಂದ್ರ ಅಬಕಾರಿ ಶುಂಕ ಏರಿಸಿದ್ದರ ಚಾರ್ಟ್ ನೋಡಿ

3. ಕೇಂದ್ರವು ಮೂಲ ಅಬಕಾರಿ ತೆರಿಗೆಯನ್ನು ಮಾತ್ರ ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ

2012ರಲ್ಲಿ ಮೂಲ ಅಬಕಾರಿ ತೆರಿಗೆ (Base Excise duty) ಶೇ.67 ರಷ್ಟಿತ್ತು. ಉಳಿದ ಶೇ.33 ರಷ್ಟು ಸೆಸ್ ತೆರಿಗೆ ಇತ್ತು. ಆಗಿನ ಕೇಂದ್ರ ಸರ್ಕಾರ ಮೂಲ ಅಬಕಾರಿ ತೆರಿಗೆಯಲ್ಲಿ ಶೇ.68 ರಷ್ಟನ್ನು ತಾನು ಇಟ್ಟುಕೊಂಡು ಶೇ.32 ಅನ್ನು ರಾಜ್ಯಗಳಿಗೆ ನೀಡುತ್ತಿತ್ತು. (2014 ರಲ್ಲಿ 1ಲೀ. ಪೆಟ್ರೋಲ್ ಮೇಲೆ 9.48 ರೂ ತೆರಿಗೆ ಸಂಗ್ರಹಿಸುತ್ತಿದ್ದ ಕೇಂದ್ರ ಸರ್ಕಾರ 6.45 ರೂ ಅನ್ನು ತಾನು ಇಟ್ಟುಕೊಂಡು, 3.03ರೂ ಅನ್ನು ರಾಜ್ಯಗಳಿಗೆ ನೀಡುತ್ತಿತ್ತು.)

ಆದರೆ ಈಗ 2022 ರಲ್ಲಿ ಮೂಲ ಅಬಕಾರಿ ತೆರಿಗೆ ಶೇ.5ಕ್ಕಿಂತ ಕಡಿಮೆಯಾಗಿದ್ದು ಸೆಸ್ ಒಂದೇ ಶೇ.95 ರಷ್ಟು ಆಗಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕೇಂದ್ರ ಸರ್ಕಾರ ಮೂಲ ಅಬಕಾರಿ ತೆರಿಗೆಯನ್ನು ಮಾತ್ರ ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆಯೆ ಹೊರತು ಸೆಸ್ ಅನ್ನು ಅಲ್ಲ.

ಅಂದರೆ 2022 ರಲ್ಲಿ 1ಲೀ. ಪೆಟ್ರೋಲ್ ಮೇಲೆ 27.90 ರೂ ತೆರಿಗೆ ಸಂಗ್ರಹಿಸುತ್ತಿರುವ ಕೇಂದ್ರ 27.31 ರೂ ಅನ್ನು ತಾನು ಇಟ್ಟುಕೊಂಡು, ಕೇವಲ 0.59 ರೂ ಅನ್ನು ರಾಜ್ಯಗಳಿಗೆ ನೀಡುತ್ತಿದೆ. ಕೇಂದ್ರ ರಾಜ್ಯದ ಅನುಪಾತ 98:02 ಆಗಿದೆ.. ಅಂದರೆ ನಿಧಾನವಾಗಿ ಅದು ರಾಜ್ಯಗಳೊಂದಿಗೆ ತಾನು ಹಂಚಿಕೊಳ್ಳುತ್ತಿದ್ದ ತೆರಿಗೆ ಪಾಲನ್ನು ನಿಲ್ಲಿಸಿಬಿಟ್ಟಿದೆ!

4. ಕೇಂದ್ರ ಸರ್ಕಾರದ ಅಬಕಾರಿ ತೆರಿಗೆ ಮೊದಲೇ ನಿಗಧಿಯಾಗಿರುತ್ತದೆ. ಅಂದರೆ ಒಂದು ಲೀಟರ್ ಮೇಲೆ ಅದು ತೆರಿಗೆ ವಿಧಿಸುತ್ತದೆ. ಆದರೆ ರಾಜ್ಯಗಳು ಮೂಲ ಬೆಲೆಗೆ ಇಂತಿಷ್ಟು ಶೇ. ಎಂದು ವ್ಯಾಟ್ ಅಥವಾ ಮಾರಾಟ ತೆರಿಗೆ ವಿಧಿಸುತ್ತವೆ. ದೇಶಾದ್ಯಂತ ಜಿಎಸ್‌ಟಿ ಜಾರಿಯಾದ ನಂತರ ರಾಜ್ಯಗಳು ಪೆಟ್ರೋಲ್ ಮತ್ತು ಆಲ್ಕೋಹಾಲ್ ಹೊರತುಪಡಿಸಿ ಉಳಿದ ವಸ್ತುಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರ ಕಳೆದುಕೊಂಡಿವೆ.

5. ರಾಜ್ಯಗಳು ಪೆಟ್ರೋಲ್‌ನ ಮೂಲ ಬೆಲೆ ಮೇಲೆ ಮಾತ್ರ ವ್ಯಾಟ್ ವಿಧಿಸಬಹುದು. ಆದರೆ ಕೇಂದ್ರ ಸರ್ಕಾರವು ಸಾಕಾಣೆ ವೆಚ್ಚ ಮತ್ತು ಡೀಲರ್ ಕಮಿಷನ್ ಮೇಲೆಯೂ ಅಬಕಾರಿ ಶುಂಕ ವಿಧಿಸುತ್ತದೆ.

6. ಜಿ.ಎಸ್‌.ಟಿ ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ

ಕೇಂದ್ರಕ್ಕೆ ಹಲವಾರು ಮೂಲಗಳಿಂದ ಸಂಪತ್ತು ಹರಿದುಬರುತ್ತದೆ. ಕಸ್ಟಮ್ ಡ್ಯೂಟಿ, ಕಾರ್ಪೊರೇಟ್ ಟ್ಯಾಕ್ಸ್, ಜಿಎಸ್‌ಟಿ, ಸೆಸ್ ಇತ್ಯಾದಿಗಳ ಮೂಲಕ ಹಣ ಬರುತ್ತೆ.. ಆದರೆ ರಾಜ್ಯಗಳು ಪೆಟ್ರೋಲ್ – ಡೀಸೆಲ್ ಮತ್ತು ಲಿಕ್ಕರ್ ಮೇಲೆ ಮಾತ್ರ ತೆರಿಗೆ ಹಾಕಬಹುದು ಬಿಟ್ಟರೆ ಬೇರೆ ಮಾರ್ಗಗಳಿಲ್ಲ. ಕೇಂದ್ರ ಸರ್ಕಾರವು ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು ಸಕಾಲದಲ್ಲಿ ಸಮರ್ಪಕವಾಗಿ ನೀಡುತ್ತಿಲ್ಲ. ಈಗಾಗಲೇ ರಾಜ್ಯಗಳು ತಮ್ಮ ಬೊಕ್ಕಸ ಖಾಲಿ ಮಾಡಿಕೊಂಡು ಸಾಲ ಮಾಡುವ ಪರಿಸ್ಥಿತಿಗೆ ತಲುಪಿವೆ. ಕೇಂದ್ರ ಕೊಡಬೇಕಾದ ಹಣದತ್ತ ನೋಡುತ್ತಿವೆ.. ಹಾಗಾಗಿ ಪೆಟ್ರೋಲ್ ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಇರುವ ಆದಾಯದ ಮೂಲವು ಹೊರಟುಹೋಗುತ್ತದೆ. ಅದು ರಾಜ್ಯಗಳ ಪಾಲಿಗೆ ಮರಣ ಶಾಸನ ಬರೆದಂತೆ ಎನ್ನುವುದು ಅವರ ಅಭಿಪ್ರಾಯ.

7. ಕರ್ನಾಟಕದ ಕತೆ

2020-21 ನೇ ಸಾಲಿನಲ್ಲಿ 11,000 ಕೋಟಿ ಜಿಎಸ್‌ಟಿ ಬಾಕಿಯನ್ನು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿಲ್ಲ. 15 ಆರ್ಥಿಕ ಕಮಿಷನ್ 5,365 ಕೋಟಿ ರೂ ಪರಿಹಾರ ಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೇಳಿತ್ತು. ಆದರೆ ಕೇಂದ್ರ ಕೊಡಲಿಲ್ಲ.. ರಾಜ್ಯದ ಪಾಲಿನ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರ ಕೇಳಿದ್ದು 35,000 ಕೋಟಿ.. ಆದರೆ ಕೇಂದ್ರ ಕೊಟ್ಟಿದ್ದು 1,800 ಕೋಟಿ ಮಾತ್ರ.. ಕೇಂದ್ರ ಸರ್ಕಾರ ಸೆಸ್ ರೂಪದಲ್ಲಿ ಸಂಗ್ರಹಿಸುವ ತೆರಿಗೆಯನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ.. ಇದು ಕರ್ನಾಟಕಕ್ಕೆ ಶಾಪವಾಗಿ ಪರಿಣಮಿಸಿದೆ. ಇಂತಹ ಸಮಯದಲ್ಲಿ ಪೆಟ್ರೋಲ್ ಅನ್ನು ಜಿ.ಎಸ್‌.ಜಿ ವ್ಯಾಪ್ತಿಗೆ ತರಲು ಸಾಧ್ಯವೇ?

8. ಕೇಂದ್ರ ಸರ್ಕಾರ ಅಬಕಾರಿ ಶುಂಕ ಹೆಚ್ಚಿಸಲು ಆಯಿಲ್ ಬಾಂಡ್‌ಗಳು ಕಾರಣವೇ?

ಮನಮೋಹನ್‌ ಸಿಂಗ್‌ರವರು ಪ್ರಧಾನಿಯಾಗಿದ್ದ ಯುಪಿಎ 1 ರ ಕಾಲದಲ್ಲಿ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆದ ಬೆಲೆ ಅತಿ ದುಬಾರಿಯಾಗಿತ್ತು. ಅಂದರೆ ಒಂದು ಬ್ಯಾರೆಲ್‌ಗೆ 120 ಡಾಲ್‌ರ್‌ಗಿಂತ ಅಧಿಕವಾಗಿತ್ತು. ಹಾಗಾಗಿ ಅದರ ಹೊರೆ ಜನರಿಗೆ ಬೀಳದಂತೆ ತಡೆಯಲು ಸಬ್ಸಿಡಿ ದರದಲ್ಲಿ ಪೆಟ್ರೋಲ್ ಮಾರಬೇಕು ಮತ್ತು ಅದಕ್ಕೆ ಬದಲಾಗಿ ಸರ್ಕಾರ ಧೀರ್ಘಾವಧಿಯ ಆಯಿಲ್‌ ಬಾಂಡ್‌ಗಳನ್ನು ಪೆಟ್ರೋಲಿಯಂ ಕಂಪನಿಗಳಿಗೆ ನೀಡಿತ್ತು ಅದರ ಮೇಲಿನ ಬಡ್ಡಿ ಕಟ್ಟುವುದಾಗಿ ಒಪ್ಪಿಕೊಂಡಿತ್ತು. ಅದರ ಒಟ್ಟು ಮೊತ್ತ 1,44,186 ಕೋಟಿ ರೂಗಳಾಗಿದ್ದು, ಆ ಬಾಂಡ್‌ಗಳು mature ಆಗಲು ಇದ್ದ ಅವಧಿ 15 – 20 ವರ್ಷ ಆಗಿತ್ತು. ಹಾಗೆಯೇ ಅವುಗಳ ಮೇಲಿನ ಬಡ್ಡಿಯಾಗಿ ಯುಪಿಎ 2 ರ ಸಮಯದಲ್ಲಿ 53,163 ಕೋಟಿ ರೂಗಳನ್ನು ಮನಮೋಹನ್‌ ಸಿಂಗ್ ಸರ್ಕಾರ ಪಾವತಿಸಿತ್ತು.

ಅದೇ ರೀತಿ ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ 7 ವರ್ಷಗಳಲ್ಲಿ ಆಯಿಲ್ ಬಾಂಡ್‌ಗಳ ಮೇಲಿನ ಬಡ್ಡಿಯಾಗಿ ಒಟ್ಟು 70,214 ಕೋಟಿ ರೂಗಳನ್ನು ಮತ್ತು  2014-15 ರಿಂದ 2018-19 ರ ಅವಧಿಗೆ mature ಆದ ಎರಡು ಆಯಿಲ್ ಬಾಂಡ್‌ಗಳ ಮೊತ್ತವಾದ 3,500 ರೂಗಳನ್ನು ಪಾವತಿಸಲಾಗಿದೆ. ಅಂದರೆ ಅದು ಒಟ್ಟು 73,714 ಕೋಟಿ ರೂ ಹೊರೆ ಹೊತ್ತುಕೊಂಡಿದೆ.

ಬಾಕಿ ಉಳಿದಿರುವ ಒಟ್ಟು 12 ಆಯಿಲ್ ಬಾಂಡ್‌ಗಳ ಒಟ್ಟು ಮೊತ್ತ 1,30,923 ಕೋಟಿ ರೂಗಳಾಗಿವೆ. ಅವುಗಳ ಮೇಲೆ ಕಟ್ಟಬೇಕಾದ ಬಡ್ಡಿ ಅಂದಾಜು 40,000 ಕೋಟಿ ರೂಗಳಾಗಿವೆ. ಅವರೆಡನ್ನೂ ಸೇರಿಸಿದರೆ ಆಯಿಲ್‌ ಬಾಂಡ್‌ಗಳಿಂದ ನರೇಂದ್ರ ಮೋದಿ ಸರ್ಕಾರಕ್ಕೆ ಒಟ್ಟು 1,70,923 ಹೊರೆಯಾಗಲಿದೆ. ಅದನ್ನು ತೀರಿಸಲು ಮೋದಿ ಸರ್ಕಾರಕ್ಕೆ ಇನ್ನು 5 ವರ್ಷಗಳ ಸಮಯವಿದೆ.

ಆದರೆ ನರೇಂದ್ರ ಮೋದಿ ಸರ್ಕಾರ 2014-2020ರ ಅವಧಿಯಲ್ಲಿ ಕೇವಲ 6 ವರ್ಷದ ಆಡಳಿತದಲ್ಲಿ ಸುಮಾರು 11 ಲಕ್ಷ ಕೋಟಿ ರೂಪಾಯಿ ಅಬಕಾರಿ ಸುಂಕ ಸಂಗ್ರಹಿಸಿದೆ! 2020-21ರ ಒಂದೇ ವರ್ಷದಲ್ಲಿ ಅದು ಪೆಟ್ರೋಲ್ ಡೀಸೆಲ್ ಮೇಲೆ 2.94 ಲಕ್ಷ ಕೋಟಿ ಅಬಕಾರಿ ಸುಂಕ ವಿಧಿಸಿದೆ. 2021-22 ರಲ್ಲಿಯೂ 3 ಲಕ್ಷ ಕೋಟಿಗೂ ಅಧಿಕ ಅಬಕಾರಿ ಸುಂಕ ಸಂಗ್ರಹಿಸಿದೆ. ಅಂದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸೆಸ್ ಮತ್ತು ಅಬಕಾರಿ ಸುಂಕ ಸೇರಿ ಸುಮಾರು 20 ಲಕ್ಷ ಕೋಟಿ ರೂ ಹಣ ಸಂಗ್ರಹಿಸಿದೆ. ಇದಕ್ಕೆ ಹೋಲಿಸಿದರೆ ಆಯಿಲ್ ಬಾಂಡ್‌ಗಳ ಮೇಲೆ ಈಗಾಗಲೇ ಪಾವತಿಸಿರುವ 73,714 ರೂ ಮತ್ತು ಪಾವತಿಸಬೇಕಿರುವ 1.7 ಲಕ್ಷ ಕೋಟಿ ದೊಡ್ಡ ಮೊತ್ತವೇ ಅಲ್ಲ.. ಹಾಗಾಗಿ ಅಬಕಾರಿ ಸುಂಕ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ ಎನ್ನವ ವಾದ ಒಪ್ಪತಕ್ಕದ್ದಲ್ಲ.

9. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಏರಿಕೆ ಕಾರಣವೇ?

ಹಿಂದಿನ ಯುಪಿಎ ಸರ್ಕಾರ ಇದ್ದಾಗ ಒಂದು ಬ್ಯಾರೆಲ್ ಕಚ್ಚಾತೈಲದ ಬೆಲೆ 120 ಡಾಲರ್‌ ಮುಟ್ಟಿತ್ತು. ಆಗ ಮನಮೋಹನ್ ಸಿಂಗ್‌ರವರು ಕೇವಲ 9.48ರೂಗಳನ್ನು ಅಬಕಾರಿ ಶುಂಕವಾಗಿ ವಿಧಿಸಿದ್ದರು. ಮೋದಿಯವರು ಪ್ರಧಾನಿಯಾದ ನಂತರ ಕಚ್ಚಾತೈಲದ ಬೆಲೆ ನಿರಂತರವಾಗಿ ಇಳಿಕೆಯಾಗಿತ್ತು. 2015-16ರ ಅವಧಿಯಲ್ಲಿ ಅದು ಬ್ಯಾರೆಲ್‌ಗೆ 50-60 ಡಾಲರ್ ಗೆ ಇಳಿದಿತ್ತು. ಇತ್ತೀಚಿನವರೆಗೂ ಅದು 70-80 ಡಾಲರ್ ಆಸುಪಾಸಿನಲ್ಲಿಯೇ ಇತ್ತು. ಈಗ ಮಾತ್ರವೇ 100 ಡಾಲರ್‌ಗೆ ತಲುಪಿದೆ. ಹಿಂದೆ ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಮೋದಿ ಸರ್ಕಾರ ಅಬಕಾರಿ ಶುಂಕವನ್ನು ಕಡಿಮೆ ಮಾಡದೇ ಹೆಚ್ಚಿಸುತ್ತಲೇ ಹೋದರು. ಹಾಗಾಗಿ ಪ್ರಸ್ತುತ ಅಬಕಾರಿ ಶುಂಕ ಹೆಚ್ಚಳಕ್ಕೆ ಕಚ್ಚಾತೈಲ ಕಾರಣವಲ್ಲ ಬದಲಿಗೆ ನರೇಂದ್ರ ಮೋದಿ ಸರ್ಕಾರವೇ ಕಾರಣವಾಗಿದೆ.

10. ಬೆಲೆ ಇಳಿಕೆ ಸಾಧ್ಯವೇ?

ಒಂದೊ ಯಾವುದಾದರೂ ರಾಜ್ಯಗಳ ಚುನಾವಣೆ ಬಂದರೆ ಕೇಂದ್ರ ಸರ್ಕಾರ ಸ್ವಲ್ಪ ಪ್ರಮಾಣದಲ್ಲಿ ಅಬಕಾರಿ ಶುಂಕ ಕಡಿಮೆ ಮಾಡಿ ಒಂದಷ್ಟು ಬೆಲೆ ಇಳಿಸುತ್ತದೆ. ಇಲ್ಲದಿದ್ದರೆ ಜನ ದೊಡ್ಡ ಮಟ್ಟದಲ್ಲಿ ಹೋರಾಡದಿದ್ದರೆ ಬೆಲೆ ಇಳಿಕೆ ಸಾಧ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....