Homeಮುಖಪುಟಬೆಳ್ಳಿಚುಕ್ಕಿ; ಸೀಳು ಆಕಾಶದ ಸೂರ್ಯಾಸ್ತ

ಬೆಳ್ಳಿಚುಕ್ಕಿ; ಸೀಳು ಆಕಾಶದ ಸೂರ್ಯಾಸ್ತ

- Advertisement -
- Advertisement -

“ಕಣ್ಣರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು” ಎಂಬ ದ ರಾ ಬೇಂದ್ರೆಯವರ ಸಾಲುಗಳನ್ನು ’ಬಂಗಾರ ನೀರ ಕಡಲಾಚೆ’ ಕವನ-ಹಾಡಿನಲ್ಲಿ ಕೇಳಿರಬೇಕು. ಇಲ್ಲಿ ಬೇಂದ್ರೆಯವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ಕಡಲು ಹೊಳೆಯುವುದನ್ನು ಎಷ್ಟು ಚೆನ್ನಾಗಿ ವರ್ಣಿಸಿದ್ದಾರೆ ಅಲ್ಲವೇ! ಬೇಂದ್ರೆಯವರು ಚಿತ್ರಿಸಿದ ಹೊಳೆಯುವ ಕಡಲನ್ನು ಮೂಡಿಸಿದ ಸೂರ್ಯೋದಯ ಮತ್ತು ಸೂರ್ಯಾಸ್ತದ ಬಗ್ಗೆ ಕೆಲವು ವಿಜ್ಞಾನದ ಸಂಗತಿಗಳನ್ನು ಚರ್ಚಿಸೋಣ.

ಸೂರ್ಯ ಪೂರ್ವದಲ್ಲಿ ಹುಟ್ಟಿ ನೆತ್ತಿಯ ಮೇಲೆ ಸಾಗಿ, ಪಶ್ಚಿಮದಲ್ಲಿ ಪ್ರತಿ ದಿನ ಮುಳುಗುತ್ತಾನೆ ಎಂಬುದನ್ನು ಸಾಮಾನ್ಯವಾಗಿ ತಿಳಿದಿರುತ್ತೇವೆ. ಬಹುಶಃ ಎಲ್ಲರಿಗೂ, ಇದು ಸೂರ್ಯನ ನಿಜವಾದ ಚಲನೆಯಲ್ಲ, ಭೂಮಿ ಪಶ್ಚಿಮದಿಂದ ಪೂರ್ವಕ್ಕೆ ತನ್ನ ಅಕ್ಷದ ಸುತ್ತ ತಿರುಗುತ್ತಿರುವ ಕಾರಣದಿಂದ, ಎಲ್ಲಾ ಆಕಾಶಕಾಯಗಳು ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ನಾವು ಸಾಮಾನ್ಯವಾಗಿ ಗ್ರಹಿಸುತ್ತೇವೆ ಎಂಬುದು ಕೂಡ ತಿಳಿದ ವಿಚಾರವೇ.

PC : Uma Gopalakrishnan

ಈಗ ಈ ಫೋಟೋ ನೋಡಿ. ಇದೊಂದು ಸೂರ್ಯಾಸ್ತದ ಫೋಟೋ? ಫೋಟೋದಲ್ಲಿನ ವಿಶೇಷವೇನು ಎಂಬುದನ್ನು ಗಮನಿಸಿ. ಅರೆರೆ, ಯಾರೋ ಸೂರ್ಯಾಸ್ತದ ಎರಡು ಫೋಟೋ ತೆಗೆದು ಫೋಟೋಶಾಪ್ ಮೂಲಕ ಜೋಡಿಸಿದ್ದಾರೆ ಅನ್ನಿಸುತ್ತಿದೆಯೇ? ಇದೊಂದು ಚಮತ್ಕಾರದ ಗ್ರಾಫಿಕ್ಸ್ ಫೋಟೋ ಅಂದುಕೊಂಡಿರಾ? ಇಲ್ಲ. ಇದು, ಒಂದೇ ಬಾರಿಗೆ ತೆಗೆದಿರುವ ನಿಜವಾದ ಫೋಟೋನೇ ಹೊರತು ಎರಡು ಪೋಟೋ ಜೋಡಿಸಿರುವುದಲ್ಲ! ಇಂತಹ ಫೋಟೋಗಳನ್ನು ಪ್ರಪಂಚದಾದ್ಯಂತ ಅನೇಕರು ಸೆರೆ ಹಿಡಿದಿದ್ದಾರೆ. ಇದನ್ನು ಸೀಳು ಆಕಾಶದ ಸೂರ್ಯಾಸ್ತ (Split-sky Sunset/ Split Sunset/ Split-screen Sunset) ಎಂಬ ಹೆಸರಿನಿಂದ ಪ್ರಚಲಿತವಾಗಿದೆ.

ಹಾಗಾದರೆ ಏನು, ಆಕಾಶ ಎರಡು ಭಾಗವಾಗಿದೆಯಾ? ಅಥವಾ ಒಂದು ಬದಿಯಿಂದ ರಾತ್ರಿಯಾಗುತ್ತಿರುವುದನ್ನು ನೋಡುತ್ತಿದ್ದೇವೆಯೇ? ಇದು ಯಾವ ಯಾವ ಪ್ರದೇಶದಲ್ಲಿ ಹೀಗೆ ಕಾಣುತ್ತೆ? ಈ ತರಹದ ಸೂರ್ಯಾಸ್ತ ಸಾಮಾನ್ಯವೇ ಎಂಬಿತ್ಯಾದಿಯಾಗಿ ಯೋಚಿಸುತ್ತಿದ್ದೀರಾ?

ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಕೆ ಮಾಡಿದರೆ, ಭೂಮಿಯಲ್ಲಿ ಮಾತ್ರ ಜೀವಿಗಳ ಉಗಮಕ್ಕೆ ಮತ್ತು ಪೋಷಣೆಗೆ ಸೂಕ್ತವಾದ ವಾತಾವರಣವಿರುವುದು. ಈ ವಾತಾವರಣದಲ್ಲಿ ಹೆಚ್ಚಾಗಿ ಆಕ್ಸಿಜನ್ ಮತ್ತು ನೈಟ್ರೋಜನ್ ಇದೆ. ಸೂರ್ಯನ ತೀವ್ರ ನೇರಳಾತೀತ (UV Rays) ಕಿರಣಗಳಿಂದ ಜೀವರಾಶಿಯನ್ನು ರಕ್ಷಿಸಲು ಓಜೋನ್ ಪದರವು ವಾತಾವರಣದಲ್ಲಿದೆ. ಪ್ರತಿ ದಿನ ವಾತಾವರಣದ ಅನಿಲಗಳು, ಧೂಳು ಮತ್ತು ಮೋಡಗಳ ಮೂಲಕ ಹಾದು ಬರುವ ಸೂರ್ಯನ ಬೆಳಕು ಆಕಾಶದಲ್ಲಿ ರಂಗುರಂಗಿನ ಚಿತ್ತಾರವನ್ನೇ ಮೂಡಿಸುತ್ತೆ.

ಸಾಮಾನ್ಯವಾಗಿ ನೀವು ಆಕಾಶವನ್ನು ನೋಡಿದರೆ, ನೀಲಿ ಬಣ್ಣ ಕಾಣುತ್ತದೆ ಅಲ್ಲವೇ? ಏಕೆ ನೀಲಿ ಬಣ್ಣ ಎಂದು ಪ್ರಶ್ನಿಸಿದರೆ: ಸೂರ್ಯನ ಬೆಳಕು ಭೂಮಿಯ ವಾತಾವರಣದಲ್ಲಿ ಹಾದುಹೋಗುವಾಗ, ವಾತಾವರಣದಲ್ಲಿನ ಅನಿಲಗಳು, ಮೋಡಗಳು, ಧೂಳಿನ ಕಣಗಳು ಬೆಳಕನ್ನು ಚದುರಿಸುತ್ತವೆ (Scattering). (ಬಿಳಿ ಬಣ್ಣ ಏಳು VIBGYOR ಬಣ್ಣಗಳಾಗಿ ಚದುರುವುದು). ವಾತಾವರಣದಲ್ಲಿ ಆಕ್ಸಿಜನ್ ಮತ್ತು ನೈಟ್ರೋಜನ್ ಹೆಚ್ಚಾಗಿರುವುದರಿಂದ, ಈ ಅನಿಲದ ಅಣುಗಳು ಬಿಳಿ ಬೆಳಕಿನ ಏಳು ಬಣ್ಣಗಳಲ್ಲಿ ನೀಲಿ ಬಣ್ಣವನ್ನು ಹೆಚ್ಚು ಚದುರಿಸುತ್ತದೆ. ಈ ಕಾರಣದಿಂದ ಆಕಾಶವು ನೀಲಿ ಬಣ್ಣದಲ್ಲಿ ಕಾಣುತ್ತದೆ. ಸೂರ್ಯೋದಯದ ನಂತರದಿಂದ ಸೂರ್ಯಾಸ್ತದವರೆಗೂ ಆಕಾಶ ನೀಲಿ ಬಣ್ಣವಾಗಿ ಕಾಣುವುದನ್ನು ಗಮನಿಸಿರಬಹುದು. ಆದರೆ, ಸೂರ್ಯೋದಯ ಮತ್ತು ಸೂರ್ಯಾಸ್ತದಲ್ಲಿ ಯಾವ ಬಣ್ಣ ಕಾಣುತ್ತದೆ?

ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ಬೆಳಕು ಭೂಮಿಯ ವಾತಾವರಣದಲ್ಲಿ ಹೆಚ್ಚು ದೂರ ಚಲಿಸುವುದರಿಂದ, ನೀಲಿ ಬೆಳಕು ಅಷ್ಟು ದೂರ ಕ್ರಮಿಸುವುದರಲ್ಲಿ ಚದುರಿಹೋಗಿ, VIBGYORನಲ್ಲಿ ಉಳಿಯುವ ಕೊನೆಯ ಬಣ್ಣದ ಕೆಂಪು ಬೆಳಕು ನಮ್ಮ ಕಣ್ಣುಗಳನ್ನು ತಲುಪುತ್ತದೆ. ಆ ಕಾರಣದಿಂದ ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ಆಕಾಶವು ಕೆಂಪಾಗಿ ಹೊಳೆಯುವುದು. ಹೆಚ್ಚಿನ ಕವಿಗಳಿಗಂತೂ ಈ ಕೆಂಪು ಬಣ್ಣದ ಆಕಾಶವು ಅವರ ಕವಿತೆಗಳಿಗೆ ರಾಗವಾಗಿ ನುಡಿದಿದೆ. “ಸಂಜೆಯ ರಾಗಕೆ ಬಾನು ಕೆಂಪೇರಿದೆ?” ಎನ್ನುವ ಸುಬ್ರಾಯ ಚೊಕ್ಕಾಡಿಯವರ ಕವಿತೆ-ಹಾಡನ್ನು ನೀವು ಕೇಳಿರಬಹುದು.

ಇರಲಿ, ಆದರೆ ಈ ಸೀಳಾಕಾಶದ ಸೂರ್ಯಾಸ್ತ ಮೂಡುವುದು ಹೇಗೆ ಅನ್ನುವುದನ್ನು ನೋಡೋಣ.

ಈ ಚಿತ್ರದಲ್ಲಿ ನೋಡಿ, ಸೂರ್ಯಾಸ್ತದ ಸಮಯದಲ್ಲಿ, ಆಕಾಶದ ಒಂದು ಭಾಗದಲ್ಲಿ ಒಂದು ದೊಡ್ಡ ಮೋಡ, ಸಣ್ಣ ಸಣ್ಣ ಮೋಡಗಳಿಗೆ ಸೂರ್ಯನ ಬೆಳಕು ನೇರವಾಗಿ ಬೀಳುವುದನ್ನು ಮರೆಮಾಚುತ್ತಿದೆ. ಹೀಗೆ ಮರೆಮಾಚುವಿಕೆ ನಡೆದಾಗ, ದೊಡ್ಡ ಮೋಡದ ನೆರಳಿನಲ್ಲಿರುವ ಮೋಡಗಳಿಗೆ ಸೂರ್ಯನ ನೇರವಾದ ಬೆಳಕು ಬೀಳದೆ, ಚದುರಿಹೋದ ನೀಲಿ ಬೆಳಕಿನ ಕಿರಣಗಳು ಮಾತ್ರ ಬೀಳುತ್ತವೆ. ಹಾಗಾಗಿ, ಈ ಭಾಗ ನೀಲಿ ಬಣ್ಣದಲ್ಲಿ ಹೊಳೆಯುತ್ತಿದ್ದರೆ, ದೊಡ್ಡ ಮೋಡವಿರದ ಭಾಗದಲ್ಲಿ ಕೆಂಪಾದ ಆಕಾಶವೇ ಕಾಣುತ್ತದೆ. ಈ ಕಾರಣದಿಂದ, ಆಕಾಶವು ಎರಡು ಭಾಗವಾಗಿರುವಂತೆ ಕಂಡು ಒಂದು ಕಡೆ ನೀಲಿ ಬಣ್ಣ ಇನ್ನೊಂದು ಕಡೆ ಕೆಂಪು ಬಣ್ಣದಲ್ಲಿ
ಗೋಚರಿಸುತ್ತದೆ.

ಈ ಪ್ರಕ್ರಿಯೆ ನಡೆಯುವುದು ಬೆಳಕಿನ ಚದುರುವಿಕೆಯ ಕಾರಣದಿಂದ. ಇದನ್ನು ಪ್ರಚಲಿತದಲ್ಲಿ Split Sunset, Split-sky Sunset ಅಂತ ಕರೆಯುತ್ತಾರೆ. ಕನ್ನಡದಲ್ಲಿ ಸೀಳು ಆಕಾಶದ ಸೂರ್ಯಾಸ್ತ ಎಂದು ಕರೆಯಬಹುದೇನೊ! ಇಂತಹ ದೃಶ್ಯ ಸೂರ್ಯಸ್ತದ ಸಮಯದಲ್ಲಿ ಮೂಡಲು ಮೋಡಗಳು ಚಿತ್ರದಲ್ಲಿ ತೋರಿಸಿದಂತೆ ವ್ಯವಸ್ಥೆಗೊಂಡರೆ ಮಾತ್ರ ಸಾಧ್ಯ ಮತ್ತು ಮೋಡ ಮತ್ತು ಸೂರ್ಯನ ನಿರಂತರ ಚಲನೆಯಿಂದ ಈ ತರಹ ವ್ಯವಸ್ಥೆಯು ಹೆಚ್ಚು ಸಮಯ ಕೂಡ ಉಳಿದುಕೊಂಡಿರಲಾರದು. ಆದಕಾರಣ ಈ ಸೀಳಾಕಾಶದ ಸೂರ್ಯಾಸ್ತ ಸಾಮಾನ್ಯವಾಗಿ ಹೆಚ್ಚು ಸಮಯ ಗೋಚರಿಸುವುದಿಲ್ಲ. ಕೆಲವೊಮ್ಮೆ ಅಸ್ಪಷ್ಟವಾಗಿ ಈ ತರಹದ ವಿದ್ಯಮಾನವನ್ನು ನೀವು ನೋಡಿರಬಹುದು, ಆದರೆ, ಸ್ಪಷ್ಟವಾಗಿ ಗೆರೆ ಎಳೆದಂತೆ ಸೀಳಾಕಾಶವಾಗಿ ಕಾಣುವುದು ಅತಿ ಅಪರೂಪ. ಆದರೂ ಇದು ಅಸಾಧ್ಯವಾದುದಲ್ಲ. ಹಾಗಾಗಿ, ಸೂರ್ಯಾಸ್ತವನ್ನು ನೀವೂ ಕೂಡ ಒಂದಲ್ಲಾ ಒಂದು ದಿನ ವೀಕ್ಷಿಸಬಹುದು. ಅಂದಹಾಗೆ ಇಂತಹ ವಿದ್ಯಮಾನ ಸೂರ್ಯೋದಯದ ಸಮಯದಲ್ಲೂ ಸಂಭವಿಸಬಹುದಾದರೂ, ಹೆಚ್ಚಾಗಿ ಎಲ್ಲರೂ ಸೂರ್ಯಾಸ್ತದಲ್ಲಿಯೇ ಇದನ್ನು ಕಂಡಿದ್ದಾರೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ; 2030ಕ್ಕೆ ಪ್ರಳಯವಂತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...