Homeಮುಖಪುಟಅಂಬಾನಿ ಮನೆ ಬಳಿ ಸ್ಫೋಟಕ - ಕಾರಿನ ಮಾಲೀಕ ಶವವಾಗಿ ಪತ್ತೆ!

ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

- Advertisement -
- Advertisement -

ಫೆಬ್ರವರಿ 25 ರ ಗುರುವಾರದಂದು ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಮುಂಬೈ ಮನೆಯ ಬಳಿ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲ್ಲಿಸಲಾಗಿದ್ದ ವಾಹನದ ಮಾಲಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಕಲ್ವಾ ಕ್ರೀಕ್‌ನಲ್ಲಿ ಅವರ ಶವ ಪತ್ತೆಯಾಗಿದ್ದು, ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಥಾಣೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಖೇಶ್ ಅಂಬಾನಿಯ ಮನೆ ಬಳಿ ಪತ್ತೆಯಾಗಿದ್ದ ಜಿಲೆಟಿನ್‌ ಕಡ್ಡಿಗಳು ತುಂಬಿದ್ದ ಸ್ಕಾರ್ಪಿಯೋ ಕಾರಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದರು. ಕಾರಿನ ಮಾಲಿಕನನ್ನು ಹಿರೀನ್‌ ಮನ್ಸುಖ್ ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ ಈ ಕಾರನ್ನು ಮನ್‌ಕುರ್ದ್‌ನಿಂದ ಕಳವು ಮಾಡಿ, ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಉಪೇಕ್ಷಿಸಿ ಹೋಗಲಾಗಿತ್ತು.

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಸ್ಪೋಟಕ ತುಂಬಿದ ವಾಹನ ಪತ್ತೆಯಾದ ನಂತರ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಈ ಮನೆಗೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ ಮತ್ತು ಹಿಮ ಕೋಣೆಯನ್ನು ಹೊಂದಿದೆ.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....