Homeಮುಖಪುಟಅಂಬಾನಿ ಮನೆ ಬಳಿ ಸ್ಫೋಟಕ - ಕಾರಿನ ಮಾಲೀಕ ಶವವಾಗಿ ಪತ್ತೆ!

ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

- Advertisement -
- Advertisement -

ಫೆಬ್ರವರಿ 25 ರ ಗುರುವಾರದಂದು ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಮುಂಬೈ ಮನೆಯ ಬಳಿ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲ್ಲಿಸಲಾಗಿದ್ದ ವಾಹನದ ಮಾಲಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಕಲ್ವಾ ಕ್ರೀಕ್‌ನಲ್ಲಿ ಅವರ ಶವ ಪತ್ತೆಯಾಗಿದ್ದು, ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಥಾಣೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಖೇಶ್ ಅಂಬಾನಿಯ ಮನೆ ಬಳಿ ಪತ್ತೆಯಾಗಿದ್ದ ಜಿಲೆಟಿನ್‌ ಕಡ್ಡಿಗಳು ತುಂಬಿದ್ದ ಸ್ಕಾರ್ಪಿಯೋ ಕಾರಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದರು. ಕಾರಿನ ಮಾಲಿಕನನ್ನು ಹಿರೀನ್‌ ಮನ್ಸುಖ್ ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ ಈ ಕಾರನ್ನು ಮನ್‌ಕುರ್ದ್‌ನಿಂದ ಕಳವು ಮಾಡಿ, ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಉಪೇಕ್ಷಿಸಿ ಹೋಗಲಾಗಿತ್ತು.

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಸ್ಪೋಟಕ ತುಂಬಿದ ವಾಹನ ಪತ್ತೆಯಾದ ನಂತರ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಈ ಮನೆಗೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ ಮತ್ತು ಹಿಮ ಕೋಣೆಯನ್ನು ಹೊಂದಿದೆ.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...