Homeಮುಖಪುಟಅಂಬಾನಿ ಮನೆ ಬಳಿ ಸ್ಫೋಟಕ - ಕಾರಿನ ಮಾಲೀಕ ಶವವಾಗಿ ಪತ್ತೆ!

ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

- Advertisement -
- Advertisement -

ಫೆಬ್ರವರಿ 25 ರ ಗುರುವಾರದಂದು ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಮುಂಬೈ ಮನೆಯ ಬಳಿ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲ್ಲಿಸಲಾಗಿದ್ದ ವಾಹನದ ಮಾಲಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಕಲ್ವಾ ಕ್ರೀಕ್‌ನಲ್ಲಿ ಅವರ ಶವ ಪತ್ತೆಯಾಗಿದ್ದು, ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಥಾಣೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಖೇಶ್ ಅಂಬಾನಿಯ ಮನೆ ಬಳಿ ಪತ್ತೆಯಾಗಿದ್ದ ಜಿಲೆಟಿನ್‌ ಕಡ್ಡಿಗಳು ತುಂಬಿದ್ದ ಸ್ಕಾರ್ಪಿಯೋ ಕಾರಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದರು. ಕಾರಿನ ಮಾಲಿಕನನ್ನು ಹಿರೀನ್‌ ಮನ್ಸುಖ್ ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ ಈ ಕಾರನ್ನು ಮನ್‌ಕುರ್ದ್‌ನಿಂದ ಕಳವು ಮಾಡಿ, ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಉಪೇಕ್ಷಿಸಿ ಹೋಗಲಾಗಿತ್ತು.

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಸ್ಪೋಟಕ ತುಂಬಿದ ವಾಹನ ಪತ್ತೆಯಾದ ನಂತರ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಈ ಮನೆಗೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ ಮತ್ತು ಹಿಮ ಕೋಣೆಯನ್ನು ಹೊಂದಿದೆ.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ: ಬಿಎಂಡಬ್ಲ್ಯು, ವೋಕ್ಸ್‌ವ್ಯಾಗನ್, ಮರ್ಸಿಡಿಸ್ ಬೆಂಜ್ ಮೇಲಿನ ಸುಂಕ ಶೇ. 110 ರಿಂದ ಶೇ. 40ಕ್ಕೆ ಇಳಿಕೆಯಾಗುವ ಸಾಧ್ಯತೆ

ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಸುಂಕವನ್ನು ಪ್ರಸ್ತುತ ಶೇ. 110 ರಿಂದ ಶೇ. 40 ಕ್ಕೆ ಇಳಿಸಲು ಭಾರತ ಯೋಜಿಸಿದೆ, ಇದು ದೇಶದ ವಿಶಾಲ ಮಾರುಕಟ್ಟೆಯಲ್ಲಿ ಇದುವರೆಗಿನ ಅತಿದೊಡ್ಡ ಆರಂಭವಾಗಿದೆ,...

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...