Homeಮುಖಪುಟಅಂಬಾನಿ ಮನೆ ಬಳಿ ಸ್ಫೋಟಕ - ಕಾರಿನ ಮಾಲೀಕ ಶವವಾಗಿ ಪತ್ತೆ!

ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

- Advertisement -
- Advertisement -

ಫೆಬ್ರವರಿ 25 ರ ಗುರುವಾರದಂದು ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಮುಂಬೈ ಮನೆಯ ಬಳಿ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲ್ಲಿಸಲಾಗಿದ್ದ ವಾಹನದ ಮಾಲಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಕಲ್ವಾ ಕ್ರೀಕ್‌ನಲ್ಲಿ ಅವರ ಶವ ಪತ್ತೆಯಾಗಿದ್ದು, ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಥಾಣೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಖೇಶ್ ಅಂಬಾನಿಯ ಮನೆ ಬಳಿ ಪತ್ತೆಯಾಗಿದ್ದ ಜಿಲೆಟಿನ್‌ ಕಡ್ಡಿಗಳು ತುಂಬಿದ್ದ ಸ್ಕಾರ್ಪಿಯೋ ಕಾರಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದರು. ಕಾರಿನ ಮಾಲಿಕನನ್ನು ಹಿರೀನ್‌ ಮನ್ಸುಖ್ ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ ಈ ಕಾರನ್ನು ಮನ್‌ಕುರ್ದ್‌ನಿಂದ ಕಳವು ಮಾಡಿ, ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಉಪೇಕ್ಷಿಸಿ ಹೋಗಲಾಗಿತ್ತು.

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಸ್ಪೋಟಕ ತುಂಬಿದ ವಾಹನ ಪತ್ತೆಯಾದ ನಂತರ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಈ ಮನೆಗೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ ಮತ್ತು ಹಿಮ ಕೋಣೆಯನ್ನು ಹೊಂದಿದೆ.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...