Homeಮುಖಪುಟಅಂಬಾನಿ ಮನೆ ಬಳಿ ಸ್ಫೋಟಕ - ಕಾರಿನ ಮಾಲೀಕ ಶವವಾಗಿ ಪತ್ತೆ!

ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

- Advertisement -
- Advertisement -

ಫೆಬ್ರವರಿ 25 ರ ಗುರುವಾರದಂದು ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಮುಂಬೈ ಮನೆಯ ಬಳಿ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲ್ಲಿಸಲಾಗಿದ್ದ ವಾಹನದ ಮಾಲಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಕಲ್ವಾ ಕ್ರೀಕ್‌ನಲ್ಲಿ ಅವರ ಶವ ಪತ್ತೆಯಾಗಿದ್ದು, ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಥಾಣೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಖೇಶ್ ಅಂಬಾನಿಯ ಮನೆ ಬಳಿ ಪತ್ತೆಯಾಗಿದ್ದ ಜಿಲೆಟಿನ್‌ ಕಡ್ಡಿಗಳು ತುಂಬಿದ್ದ ಸ್ಕಾರ್ಪಿಯೋ ಕಾರಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದರು. ಕಾರಿನ ಮಾಲಿಕನನ್ನು ಹಿರೀನ್‌ ಮನ್ಸುಖ್ ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ ಈ ಕಾರನ್ನು ಮನ್‌ಕುರ್ದ್‌ನಿಂದ ಕಳವು ಮಾಡಿ, ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಉಪೇಕ್ಷಿಸಿ ಹೋಗಲಾಗಿತ್ತು.

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಸ್ಪೋಟಕ ತುಂಬಿದ ವಾಹನ ಪತ್ತೆಯಾದ ನಂತರ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಈ ಮನೆಗೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ ಮತ್ತು ಹಿಮ ಕೋಣೆಯನ್ನು ಹೊಂದಿದೆ.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...