Homeಮುಖಪುಟಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆ ಪ್ರಕರಣ: ಸಹಾಯಕ ಪೊಲೀಸ್ ಇನ್ಸ್‌‌ಪೆಕ್ಟರ್‌‌ ಎನ್‌ಐಎ ವಶಕ್ಕೆ

ಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆ ಪ್ರಕರಣ: ಸಹಾಯಕ ಪೊಲೀಸ್ ಇನ್ಸ್‌‌ಪೆಕ್ಟರ್‌‌ ಎನ್‌ಐಎ ವಶಕ್ಕೆ

ಫೆಬ್ರವರಿ 25 ರಂದು ಮುಖೇಶ್ ಅಂಬಾನಿಯ ಮುಂಬೈಯ ಮನೆಯ ಬಳಿ ಸ್ಫೋಟಕ ತುಂಬಿದ ಕಾರನ್ನು ವಶಪಡಿಸಲಾಗಿತ್ತು.

- Advertisement -
- Advertisement -

ಮುಖೇಶ್‌ ಅಂಬಾನಿ ಮನೆಯ ಬಲಿ ಸ್ಪೋಟಕಗಳು ತುಂಬಿದ್ದ ಕಾರಿನ ಮಾಲಿಕ ಮನ್ಸುಖ್ ಹಿರೆನ್ ಸಾವಿನ ಪ್ರಕರಣದಲ್ಲಿ, ಅಪರಾಧ ಗುಪ್ತಚರ ಘಟಕದಲ್ಲಿ (ಸಿಐಯು) ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ ಸಚಿನ್ ವಾಜ್ ಅವರನ್ನು ಮಾರ್ಚ್ 25 ರವರೆಗೆ ಕೇಂದ್ರ ತನಿಖಾ ಏಜೆನ್ಸಿ (ಎನ್‌ಐಎ) ವಶಕ್ಕೆ ನೀಡಲಾಗಿದೆ.

ಪ್ರಕರಣದಲ್ಲಿ ಸಚಿನ್ ವಾಜ್ ಹೆಸರು ಕೇಳಿ ಬಂದ ನಂತರ, ಅವರನ್ನು ಮುಂಬೈ ಪೊಲೀಸ್ ಪ್ರಧಾನ ಕಚೇರಿಯಲ್ಲಿನ ನಾಗರಿಕ ಸೌಲಭ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು. ಫೆಬ್ರವರಿ 25 ರಂದು ಮುಖೇಶ್ ಅಂಬಾನಿಯ ಮುಂಬೈಯ ಮನೆಯ ಬಳಿ ಸ್ಫೋಟಕ ತುಂಬಿದ ಕಾರನ್ನು ವಶಪಡಿಸಲಾಗಿತ್ತು.

ಸಚಿನ್ ಶನಿವಾರದಂದು ಥಾಣೆಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

ಈ ವಿಷಯವು ಸಂಕ್ಷಿಪ್ತವಾಗಿ ಮಾರ್ಚ್ 12 ರಂದು ವಿಚಾರಣೆಗೆ ಬಂದಿತ್ತು. ಆದರೆ ನ್ಯಾಯಾಲಯವು ಸಚಿನ್‌ಗೆ ಯಾವುದೇ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 19 ಕ್ಕೆ ಮುಂದೂಡಿದೆ.

ಅಂಬಾನಿ ಮನೆಯ ಹೊರಗೆ ಸ್ಫೋಟಕಗಳೊಂದಿಗೆ ಪತ್ತೆಯಾಗಿದ್ದ ವಾಹನದ ಮಾಲೀಕ ಹಿರೆನ್ ಮಾರ್ಚ್ 5 ರಂದು ಥಾಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿನ್ ವಾಜ್‌ ವಿರುದ್ಧ ಆರೋಪಗಳು ಕೇಳಿಬಂದ ನಂತರ, ಅಪರಾಧ ಗುಪ್ತಚರ ಘಟಕದಲ್ಲಿ (ಸಿಐಯು) ಹಿರೆನ್ ಸಾವಿನ ತನಿಖೆಯ ನೇತೃತ್ವ ವಹಿಸಿದ್ದ ಅವರನ್ನು ಮುಂಬೈ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ನಾಗರಿಕ ಸೌಲಭ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...