Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...