Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...