Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...