Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...