Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...