Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...