Homeಕರೋನಾ ತಲ್ಲಣಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

- Advertisement -
- Advertisement -

ಭಾರತದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಅತ್ಯಂತ ಹೆಚ್ಚು ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಆದರೆ ಮಾರ್ಚ್ ತಿಂಗಳ ಮಧ್ಯದ ವೇಳೆಗೆ ಭಾರತದಲ್ಲಿ ನೀಡುತ್ತಿದ್ದ ಲಸಿಕೆ ಪ್ರಮಾಣಕ್ಕಿಂತ ಎರಡು ಪಟ್ಟು ರಫ್ತು ಮಾಡಿದೆ ಎಂಬ ಅಘಾತಕಾರಿ ವರದಿಯೂ ಬೆಳಕಿಗೆ ಬಂದಿದೆ.

ಪ್ರಸ್ತುತ ಲಸಿಕೆಯ ರಫ್ತು ಸ್ಥಗಿತಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ದೇಶದ ಐದು ರಾಜ್ಯಗಳಲ್ಲಿ ಲಸಿಕೆ ಕೊರತೆ ಅನುಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಹಾರಾಷ್ಟ್ರ

ಮಹಾರಾಷ್ಟ್ರದ ಲಸಿಕೆ ದಾಸ್ತಾನು ಕೇವಲ ಮೂರು ದಿನಗಳು ಮಾತ್ರ ಇರುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದರು. ಕೇಂದ್ರವು ಸಾಕಷ್ಟು ಲಸಿಕೆಗಳನ್ನು ನೀಡದಿದ್ದರೆ, ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿಗೆ ಸರ್ಕಾರ ತಲುಪಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ: ಸಿದ್ದರಾಮಯ್ಯ

“ರಾಜ್ಯವು 50,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿದೆ. ಹೆಚ್ಚಿನ ಯುವಕರು ಸೋಂಕಿಗೆ ಒಳಗಾಗುತ್ತಿರುವುದರಿಂದ, ನಾವು ಚುಚ್ಚುಮದ್ದಿನೊಂದಿಗೆ ಧಾವಿಸಬೇಕು. ನಾವು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದು ನೆನಪಿಸಿದ್ದೇವೆ, ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ” ಎಂದು ಟೋಪೆ ಹೇಳಿದ್ದಾರೆ.

ಜಾರ್ಖಂಡ್‌

ಜಾರ್ಖಂಡ್‌ನಲ್ಲಿ ಕೇವಲ 3.5 ಲಕ್ಷ ಡಜನ್ ಲಸಿಕೆ ಮಾತ್ರ ಲಭ್ಯವಿರುವುದರಿಂದ ಲಸಿಕೆ ಕೊರತೆಯತ್ತ ರಾಜ್ಯವು ಸಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆರೋಗ್ಯ ಕಾರ್ಯದರ್ಶಿ ಕೆ.ಕೆ. ಸೋನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ಮಾರ್ಚ್ 23 ಮತ್ತು ಏಪ್ರಿಲ್ 2 ರಂದು ಹೆಚ್ಚಿನ ಲಸಿಕೆಗಳನ್ನು ನೀಡುವಂತೆ ಕೇಂದ್ರಕ್ಕೆ ಎರಡು ಬಾರಿ ಮನವಿಗಳನ್ನು ಕಳುಹಿಸಿದೆ, ಆದರೆ ಇದುವರೆಗೂ ಲಸಿಕೆ ಬಂದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

“ರಾಜ್ಯದಲ್ಲಿ ಈವರೆಗೆ 18 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರವಾಗಿ ಕನಿಷ್ಠ 5 ಲಕ್ಷ ಲಸಿಕೆಯ ಡೋಸೇಜ್ ಬೇಕಾಗುತ್ತವೆ” ಎಂದು ಸೋನ್ ಹೇಳಿದ್ದಾರೆ.

“ವಿಶೇಷ ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ, ಇದರ ಅಡಿಯಲ್ಲಿ ನಾವು ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್ ಗುರಿಯನ್ನು ನಿಗದಿಪಡಿಸಿದ್ದೇವೆ. ಈ ತಿಂಗಳ ಎರಡನೇ ವಾರದಲ್ಲಿ ರಾಜ್ಯಕ್ಕೆ ಲಸಿಕೆ ಬರಬಹುದು” ಎಂದು ಸೋನ್ ಹೇಳಿದ್ದಾರೆ.

ಮಧ್ಯಪ್ರದೇಶ

ರಾಜ್ಯದಲ್ಲಿ ಯಾವುದೇ ಲಸಿಕೆ ಕೊರತೆ ಇಲ್ಲ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮಂಗಳವಾರ ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಪಶ್ಚಿಮ ಮಧ್ಯಪ್ರದೇಶದ ಜಬುವಾ, ಅಲಿರಾಜ್‌ಪುರ, ಗ್ವಾಲಿಯರ್ ಚಂಬಲ್ ಪ್ರದೇಶದ ಶಿವಪುರಿ ಮತ್ತು ವಿಂಧ್ಯ ಪ್ರದೇಶದ ಸತ್ನಾಗಳಲ್ಲಿ ಲಸಿಕೆಯ ಕೊರತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಗಳಲ್ಲಿ ಕೇವಲ ಮೂರು ದಿನಗಳಿಗೆ ಬೇಕಾದ ಲಸಿಕೆ ಅಷ್ಟೇ ದಾಸ್ತಾನು ಇದೆ ಎಂದು ಹೇಳಲಾಗಿದೆ.

ಬಿಹಾರ

ಲಸಿಕೆ ಕೊರತೆಯ ಬಗ್ಗೆ ಮಾತನಾಡಲು ಯಾವುದೇ ಅಧಿಕಾರಿಗಳು ಅಧೀಕೃತವಾಗಿ ಮುಂದೆ ಬಂದಿಲ್ಲವಾದರೂ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಲಸಿಕೆಯ ಕೊರತೆಯ ಪರಿಣಾಮದಿದಂದಾಗಿ ಒಂದು 12 ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಕಡಿಮೆಯಾಗಿದೆ.

ಇದನ್ನೂ ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಾಜ್ಯದ 4.5 ಲಕ್ಷ ಆರೋಗ್ಯ ಕಾರ್ಯಕರ್ತರು ಸೇರಿದಂತೆ 40 ಲಕ್ಷ ಜನರಿಗೆ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. ಕೊರೊನಾ ಎರಡನೇ ಅಲೆಯ ನಂತರ, ವಿಶೇಷವಾಗಿ ಹೋಳಿಯ ನಂತರ ಹೆಚ್ಚಿನ ಜನರು ವ್ಯಾಕ್ಸಿನೇಷನ್‌ಗಾಗಿ ಹೊರಟಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರತಿದಿನ ಲಸಿಕೆಗಳನ್ನು ಕನಿಷ್ಠ 4 ಲಕ್ಷ ಜನರಿಗೆ ನೀಡಲು ರಾಜ್ಯವು ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದ್ದಾರೆ.

ಒಡಿಶಾ

ಆರೋಗ್ಯ ಸಚಿವ ನಾಬಾ ಕಿಶೋರ್ ದಾಸ್ 25 ಲಕ್ಷ ಡೋಸ್ ಲಸಿಕೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಲಸಿಕೆ ಕೊರತೆಯಿಂದಾಗಿ 600 ಕ್ಕೂ ಹೆಚ್ಚು ಲಸಿಕೆ ಕೇಂದ್ರಗಳನ್ನು ಬುಧವಾರ ಮುಚ್ಚಲಾಗಿದೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...