Homeಕರೋನಾ ತಲ್ಲಣಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

- Advertisement -
- Advertisement -

ಭಾರತದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಅತ್ಯಂತ ಹೆಚ್ಚು ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಆದರೆ ಮಾರ್ಚ್ ತಿಂಗಳ ಮಧ್ಯದ ವೇಳೆಗೆ ಭಾರತದಲ್ಲಿ ನೀಡುತ್ತಿದ್ದ ಲಸಿಕೆ ಪ್ರಮಾಣಕ್ಕಿಂತ ಎರಡು ಪಟ್ಟು ರಫ್ತು ಮಾಡಿದೆ ಎಂಬ ಅಘಾತಕಾರಿ ವರದಿಯೂ ಬೆಳಕಿಗೆ ಬಂದಿದೆ.

ಪ್ರಸ್ತುತ ಲಸಿಕೆಯ ರಫ್ತು ಸ್ಥಗಿತಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ದೇಶದ ಐದು ರಾಜ್ಯಗಳಲ್ಲಿ ಲಸಿಕೆ ಕೊರತೆ ಅನುಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಹಾರಾಷ್ಟ್ರ

ಮಹಾರಾಷ್ಟ್ರದ ಲಸಿಕೆ ದಾಸ್ತಾನು ಕೇವಲ ಮೂರು ದಿನಗಳು ಮಾತ್ರ ಇರುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದರು. ಕೇಂದ್ರವು ಸಾಕಷ್ಟು ಲಸಿಕೆಗಳನ್ನು ನೀಡದಿದ್ದರೆ, ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿಗೆ ಸರ್ಕಾರ ತಲುಪಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ: ಸಿದ್ದರಾಮಯ್ಯ

“ರಾಜ್ಯವು 50,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿದೆ. ಹೆಚ್ಚಿನ ಯುವಕರು ಸೋಂಕಿಗೆ ಒಳಗಾಗುತ್ತಿರುವುದರಿಂದ, ನಾವು ಚುಚ್ಚುಮದ್ದಿನೊಂದಿಗೆ ಧಾವಿಸಬೇಕು. ನಾವು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದು ನೆನಪಿಸಿದ್ದೇವೆ, ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ” ಎಂದು ಟೋಪೆ ಹೇಳಿದ್ದಾರೆ.

ಜಾರ್ಖಂಡ್‌

ಜಾರ್ಖಂಡ್‌ನಲ್ಲಿ ಕೇವಲ 3.5 ಲಕ್ಷ ಡಜನ್ ಲಸಿಕೆ ಮಾತ್ರ ಲಭ್ಯವಿರುವುದರಿಂದ ಲಸಿಕೆ ಕೊರತೆಯತ್ತ ರಾಜ್ಯವು ಸಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆರೋಗ್ಯ ಕಾರ್ಯದರ್ಶಿ ಕೆ.ಕೆ. ಸೋನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ಮಾರ್ಚ್ 23 ಮತ್ತು ಏಪ್ರಿಲ್ 2 ರಂದು ಹೆಚ್ಚಿನ ಲಸಿಕೆಗಳನ್ನು ನೀಡುವಂತೆ ಕೇಂದ್ರಕ್ಕೆ ಎರಡು ಬಾರಿ ಮನವಿಗಳನ್ನು ಕಳುಹಿಸಿದೆ, ಆದರೆ ಇದುವರೆಗೂ ಲಸಿಕೆ ಬಂದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

“ರಾಜ್ಯದಲ್ಲಿ ಈವರೆಗೆ 18 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರವಾಗಿ ಕನಿಷ್ಠ 5 ಲಕ್ಷ ಲಸಿಕೆಯ ಡೋಸೇಜ್ ಬೇಕಾಗುತ್ತವೆ” ಎಂದು ಸೋನ್ ಹೇಳಿದ್ದಾರೆ.

“ವಿಶೇಷ ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ, ಇದರ ಅಡಿಯಲ್ಲಿ ನಾವು ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್ ಗುರಿಯನ್ನು ನಿಗದಿಪಡಿಸಿದ್ದೇವೆ. ಈ ತಿಂಗಳ ಎರಡನೇ ವಾರದಲ್ಲಿ ರಾಜ್ಯಕ್ಕೆ ಲಸಿಕೆ ಬರಬಹುದು” ಎಂದು ಸೋನ್ ಹೇಳಿದ್ದಾರೆ.

ಮಧ್ಯಪ್ರದೇಶ

ರಾಜ್ಯದಲ್ಲಿ ಯಾವುದೇ ಲಸಿಕೆ ಕೊರತೆ ಇಲ್ಲ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮಂಗಳವಾರ ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಪಶ್ಚಿಮ ಮಧ್ಯಪ್ರದೇಶದ ಜಬುವಾ, ಅಲಿರಾಜ್‌ಪುರ, ಗ್ವಾಲಿಯರ್ ಚಂಬಲ್ ಪ್ರದೇಶದ ಶಿವಪುರಿ ಮತ್ತು ವಿಂಧ್ಯ ಪ್ರದೇಶದ ಸತ್ನಾಗಳಲ್ಲಿ ಲಸಿಕೆಯ ಕೊರತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಗಳಲ್ಲಿ ಕೇವಲ ಮೂರು ದಿನಗಳಿಗೆ ಬೇಕಾದ ಲಸಿಕೆ ಅಷ್ಟೇ ದಾಸ್ತಾನು ಇದೆ ಎಂದು ಹೇಳಲಾಗಿದೆ.

ಬಿಹಾರ

ಲಸಿಕೆ ಕೊರತೆಯ ಬಗ್ಗೆ ಮಾತನಾಡಲು ಯಾವುದೇ ಅಧಿಕಾರಿಗಳು ಅಧೀಕೃತವಾಗಿ ಮುಂದೆ ಬಂದಿಲ್ಲವಾದರೂ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಲಸಿಕೆಯ ಕೊರತೆಯ ಪರಿಣಾಮದಿದಂದಾಗಿ ಒಂದು 12 ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಕಡಿಮೆಯಾಗಿದೆ.

ಇದನ್ನೂ ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಾಜ್ಯದ 4.5 ಲಕ್ಷ ಆರೋಗ್ಯ ಕಾರ್ಯಕರ್ತರು ಸೇರಿದಂತೆ 40 ಲಕ್ಷ ಜನರಿಗೆ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. ಕೊರೊನಾ ಎರಡನೇ ಅಲೆಯ ನಂತರ, ವಿಶೇಷವಾಗಿ ಹೋಳಿಯ ನಂತರ ಹೆಚ್ಚಿನ ಜನರು ವ್ಯಾಕ್ಸಿನೇಷನ್‌ಗಾಗಿ ಹೊರಟಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರತಿದಿನ ಲಸಿಕೆಗಳನ್ನು ಕನಿಷ್ಠ 4 ಲಕ್ಷ ಜನರಿಗೆ ನೀಡಲು ರಾಜ್ಯವು ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದ್ದಾರೆ.

ಒಡಿಶಾ

ಆರೋಗ್ಯ ಸಚಿವ ನಾಬಾ ಕಿಶೋರ್ ದಾಸ್ 25 ಲಕ್ಷ ಡೋಸ್ ಲಸಿಕೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಲಸಿಕೆ ಕೊರತೆಯಿಂದಾಗಿ 600 ಕ್ಕೂ ಹೆಚ್ಚು ಲಸಿಕೆ ಕೇಂದ್ರಗಳನ್ನು ಬುಧವಾರ ಮುಚ್ಚಲಾಗಿದೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...