Homeಕರೋನಾ ತಲ್ಲಣಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

- Advertisement -
- Advertisement -

ಭಾರತದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಅತ್ಯಂತ ಹೆಚ್ಚು ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಆದರೆ ಮಾರ್ಚ್ ತಿಂಗಳ ಮಧ್ಯದ ವೇಳೆಗೆ ಭಾರತದಲ್ಲಿ ನೀಡುತ್ತಿದ್ದ ಲಸಿಕೆ ಪ್ರಮಾಣಕ್ಕಿಂತ ಎರಡು ಪಟ್ಟು ರಫ್ತು ಮಾಡಿದೆ ಎಂಬ ಅಘಾತಕಾರಿ ವರದಿಯೂ ಬೆಳಕಿಗೆ ಬಂದಿದೆ.

ಪ್ರಸ್ತುತ ಲಸಿಕೆಯ ರಫ್ತು ಸ್ಥಗಿತಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ದೇಶದ ಐದು ರಾಜ್ಯಗಳಲ್ಲಿ ಲಸಿಕೆ ಕೊರತೆ ಅನುಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಮಹಾರಾಷ್ಟ್ರ

ಮಹಾರಾಷ್ಟ್ರದ ಲಸಿಕೆ ದಾಸ್ತಾನು ಕೇವಲ ಮೂರು ದಿನಗಳು ಮಾತ್ರ ಇರುತ್ತದೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದರು. ಕೇಂದ್ರವು ಸಾಕಷ್ಟು ಲಸಿಕೆಗಳನ್ನು ನೀಡದಿದ್ದರೆ, ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿಗೆ ಸರ್ಕಾರ ತಲುಪಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ: ಸಿದ್ದರಾಮಯ್ಯ

“ರಾಜ್ಯವು 50,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿದೆ. ಹೆಚ್ಚಿನ ಯುವಕರು ಸೋಂಕಿಗೆ ಒಳಗಾಗುತ್ತಿರುವುದರಿಂದ, ನಾವು ಚುಚ್ಚುಮದ್ದಿನೊಂದಿಗೆ ಧಾವಿಸಬೇಕು. ನಾವು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದು ನೆನಪಿಸಿದ್ದೇವೆ, ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ” ಎಂದು ಟೋಪೆ ಹೇಳಿದ್ದಾರೆ.

ಜಾರ್ಖಂಡ್‌

ಜಾರ್ಖಂಡ್‌ನಲ್ಲಿ ಕೇವಲ 3.5 ಲಕ್ಷ ಡಜನ್ ಲಸಿಕೆ ಮಾತ್ರ ಲಭ್ಯವಿರುವುದರಿಂದ ಲಸಿಕೆ ಕೊರತೆಯತ್ತ ರಾಜ್ಯವು ಸಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆರೋಗ್ಯ ಕಾರ್ಯದರ್ಶಿ ಕೆ.ಕೆ. ಸೋನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ಮಾರ್ಚ್ 23 ಮತ್ತು ಏಪ್ರಿಲ್ 2 ರಂದು ಹೆಚ್ಚಿನ ಲಸಿಕೆಗಳನ್ನು ನೀಡುವಂತೆ ಕೇಂದ್ರಕ್ಕೆ ಎರಡು ಬಾರಿ ಮನವಿಗಳನ್ನು ಕಳುಹಿಸಿದೆ, ಆದರೆ ಇದುವರೆಗೂ ಲಸಿಕೆ ಬಂದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

“ರಾಜ್ಯದಲ್ಲಿ ಈವರೆಗೆ 18 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರವಾಗಿ ಕನಿಷ್ಠ 5 ಲಕ್ಷ ಲಸಿಕೆಯ ಡೋಸೇಜ್ ಬೇಕಾಗುತ್ತವೆ” ಎಂದು ಸೋನ್ ಹೇಳಿದ್ದಾರೆ.

“ವಿಶೇಷ ಲಸಿಕಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ, ಇದರ ಅಡಿಯಲ್ಲಿ ನಾವು ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್ ಗುರಿಯನ್ನು ನಿಗದಿಪಡಿಸಿದ್ದೇವೆ. ಈ ತಿಂಗಳ ಎರಡನೇ ವಾರದಲ್ಲಿ ರಾಜ್ಯಕ್ಕೆ ಲಸಿಕೆ ಬರಬಹುದು” ಎಂದು ಸೋನ್ ಹೇಳಿದ್ದಾರೆ.

ಮಧ್ಯಪ್ರದೇಶ

ರಾಜ್ಯದಲ್ಲಿ ಯಾವುದೇ ಲಸಿಕೆ ಕೊರತೆ ಇಲ್ಲ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮಂಗಳವಾರ ಹೇಳಿದ್ದಾರೆ. ಆದರೆ ಮೂಲಗಳ ಪ್ರಕಾರ ಪಶ್ಚಿಮ ಮಧ್ಯಪ್ರದೇಶದ ಜಬುವಾ, ಅಲಿರಾಜ್‌ಪುರ, ಗ್ವಾಲಿಯರ್ ಚಂಬಲ್ ಪ್ರದೇಶದ ಶಿವಪುರಿ ಮತ್ತು ವಿಂಧ್ಯ ಪ್ರದೇಶದ ಸತ್ನಾಗಳಲ್ಲಿ ಲಸಿಕೆಯ ಕೊರತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಗಳಲ್ಲಿ ಕೇವಲ ಮೂರು ದಿನಗಳಿಗೆ ಬೇಕಾದ ಲಸಿಕೆ ಅಷ್ಟೇ ದಾಸ್ತಾನು ಇದೆ ಎಂದು ಹೇಳಲಾಗಿದೆ.

ಬಿಹಾರ

ಲಸಿಕೆ ಕೊರತೆಯ ಬಗ್ಗೆ ಮಾತನಾಡಲು ಯಾವುದೇ ಅಧಿಕಾರಿಗಳು ಅಧೀಕೃತವಾಗಿ ಮುಂದೆ ಬಂದಿಲ್ಲವಾದರೂ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಲಸಿಕೆಯ ಕೊರತೆಯ ಪರಿಣಾಮದಿದಂದಾಗಿ ಒಂದು 12 ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಕಡಿಮೆಯಾಗಿದೆ.

ಇದನ್ನೂ ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಾಜ್ಯದ 4.5 ಲಕ್ಷ ಆರೋಗ್ಯ ಕಾರ್ಯಕರ್ತರು ಸೇರಿದಂತೆ 40 ಲಕ್ಷ ಜನರಿಗೆ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. ಕೊರೊನಾ ಎರಡನೇ ಅಲೆಯ ನಂತರ, ವಿಶೇಷವಾಗಿ ಹೋಳಿಯ ನಂತರ ಹೆಚ್ಚಿನ ಜನರು ವ್ಯಾಕ್ಸಿನೇಷನ್‌ಗಾಗಿ ಹೊರಟಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರತಿದಿನ ಲಸಿಕೆಗಳನ್ನು ಕನಿಷ್ಠ 4 ಲಕ್ಷ ಜನರಿಗೆ ನೀಡಲು ರಾಜ್ಯವು ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದ್ದಾರೆ.

ಒಡಿಶಾ

ಆರೋಗ್ಯ ಸಚಿವ ನಾಬಾ ಕಿಶೋರ್ ದಾಸ್ 25 ಲಕ್ಷ ಡೋಸ್ ಲಸಿಕೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಲಸಿಕೆ ಕೊರತೆಯಿಂದಾಗಿ 600 ಕ್ಕೂ ಹೆಚ್ಚು ಲಸಿಕೆ ಕೇಂದ್ರಗಳನ್ನು ಬುಧವಾರ ಮುಚ್ಚಲಾಗಿದೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...