Homeಮುಖಪುಟಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

ಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

- Advertisement -
- Advertisement -

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೇನಗುರಿ ಪಟ್ಟಣದ ಬಳಿ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿವೆ.

ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಶುಕ್ರವಾರ ಬೆಳಿಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಾಗಿದ್ದಾರೆ.

ಈಶಾನ್ಯ ಫ್ರಾಂಟಿಯರ್ ರೈಲ್ವೇಯ ಅಲಿಪುರ್ದುವಾರ್ ವಿಭಾಗದ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ ವಕ್ತಾರರು ಗುವಾಹಟಿಯಲ್ಲಿ ತಿಳಿಸಿದ್ದಾರೆ.

ಸಮೀಪದ ಗ್ರಾಮಗಳ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ಕುಸಿದ ಬೋಗಿಗಳಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ಸಹಾಯ ಹಸ್ತ ಚಾಚಿದರು. ಕೆಲವು ಬೋಗಿಗಳು ರೈಲಿನ ಉಳಿದ ಭಾಗದಿಂದ ಬೇರ್ಪಟ್ಟಿದ್ದರೆ, ಕೆಲವು ಚಕ್ರಗಳು ಕಳಚಿ ಬಿದ್ದಿವೆ.

ಸ್ಥಳೀಯರು, ಇತರ ಪ್ರಯಾಣಿಕರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಲ್ಪೈಗುರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಮೂರು NDRF ತಂಡಗಳು ಅಪಘಾತ ಸ್ಥಳಕ್ಕೆ ತಲುಪಿವೆ. ಅಪಘಾತದ ಕುರಿತು ಉನ್ನತ ಮಟ್ಟದ ರೈಲ್ವೆ ಸುರಕ್ಷತಾ ತನಿಖೆಗೆ ಆದೇಶಿಸಲಾಗಿದೆ. ರೈಲ್ವೆಯ ಉನ್ನತ ಅಧಿಕಾರಿಗಳು ದೆಹಲಿಯಿಂದ ಅಪಘಾತದ ಸ್ಥಳಕ್ಕೆ ತೆರಳಿದ್ದಾರೆ.

“ಸಮಯ ಸುಮಾರು 5 ಗಂಟೆಯಾಗಿತ್ತು. ನಾನು ನನ್ನ ಹೆಂಡತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದೆ. ಇದ್ದಕ್ಕಿದ್ದಂತೆ ನನಗೆ ದೊಡ್ಡ ಶಬ್ದ ಕೇಳಿಸಿತು. ಭಾರೀ ಜರ್ಕ್ ಉಂಟಾಯಿತು. ನಾನು ನನ್ನ ಬರ್ತ್‌ನಿಂದ ಬಿದ್ದೆ. ಮರಳಿ ಬಂದಾಗ ಪ್ರಜ್ಞೆ ಬಂದಾಗ ನನ್ನನ್ನು ಆಂಬ್ಯುಲೆನ್ಸ್ ಒಳಗೆ ಕರೆದೊಯ್ಯಲಾಗಿತ್ತು” ಎಂದು ಬದುಕುಳಿದ ಸಂಜಯ್ ಎಂಬವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

“ನನ್ನ ತಾಯಿ ಮತ್ತು ನಾನು ಚಹಾ ಸೇವಿಸುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಶಬ್ದ ಬಂದಿತು. ನಂತರ ತೀವ್ರ ಆಘಾತಕ್ಕೊಳಗಾದೆವು. ಮೇಲಿನ ಬರ್ತ್‌ಗಳಲ್ಲಿ ಇರಿಸಲಾಗಿದ್ದ ಸಾಮಾನುಗಳು ಉರಳಲಾರಂಭಿಸಿದವು. ನಂತರ ಸ್ಥಳೀಯರು ನನ್ನನ್ನು ರಕ್ಷಿಸಿದರು, ಆದರೆ ನಾನು ಇನ್ನೂ ನನ್ನ ತಾಯಿಯನ್ನು ಪತ್ತೆ ಮಾಡಿಲ್ಲ. ಅವರಿಗೆ ಏನಾಯಿತು ಎಂದು ತಿಳಿದಿಲ್ಲ” ಎಂದು ಮತ್ತೊಬ್ಬ ಗಾಯಾಳು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಅಪಘಾತದ ಸ್ಥಳದಿಂದ ಮೂರು ದೇಹಗಳನ್ನು ವಶಪಡಿಸಿಕೊಂಡಿದ್ದೇವೆ. ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಜಲಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ಹೇಳಿದ್ದಾರೆ. ಅಪಘಾತದಲ್ಲಿ ಕನಿಷ್ಠ 45 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಮತ್ತು ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ₹ 25,000 ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

ಸುದ್ದಿ ಅಪ್‌ಡೇಟ್‌‌: ಸಾವಿನ ಸಂಖ್ಯೆ ಏಳಕ್ಕೆ ಏರಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಪಘಾತಕ್ಕೆ ಸಂಬಂಧಿಸಿದ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿರಿ: ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚಿ ವೊಡಾಫೋನ್‌‌ ಷೇರು ಖರೀದಿಸುವಲ್ಲಿ ಅರ್ಥವಿದೆಯೇ?: ಬಿಜೆಪಿಗೆ ಖರ್ಗೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...