Homeಮುಖಪುಟಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

ಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

- Advertisement -
- Advertisement -

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೇನಗುರಿ ಪಟ್ಟಣದ ಬಳಿ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿವೆ.

ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಶುಕ್ರವಾರ ಬೆಳಿಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಾಗಿದ್ದಾರೆ.

ಈಶಾನ್ಯ ಫ್ರಾಂಟಿಯರ್ ರೈಲ್ವೇಯ ಅಲಿಪುರ್ದುವಾರ್ ವಿಭಾಗದ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ ವಕ್ತಾರರು ಗುವಾಹಟಿಯಲ್ಲಿ ತಿಳಿಸಿದ್ದಾರೆ.

ಸಮೀಪದ ಗ್ರಾಮಗಳ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ಕುಸಿದ ಬೋಗಿಗಳಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ಸಹಾಯ ಹಸ್ತ ಚಾಚಿದರು. ಕೆಲವು ಬೋಗಿಗಳು ರೈಲಿನ ಉಳಿದ ಭಾಗದಿಂದ ಬೇರ್ಪಟ್ಟಿದ್ದರೆ, ಕೆಲವು ಚಕ್ರಗಳು ಕಳಚಿ ಬಿದ್ದಿವೆ.

ಸ್ಥಳೀಯರು, ಇತರ ಪ್ರಯಾಣಿಕರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಲ್ಪೈಗುರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಮೂರು NDRF ತಂಡಗಳು ಅಪಘಾತ ಸ್ಥಳಕ್ಕೆ ತಲುಪಿವೆ. ಅಪಘಾತದ ಕುರಿತು ಉನ್ನತ ಮಟ್ಟದ ರೈಲ್ವೆ ಸುರಕ್ಷತಾ ತನಿಖೆಗೆ ಆದೇಶಿಸಲಾಗಿದೆ. ರೈಲ್ವೆಯ ಉನ್ನತ ಅಧಿಕಾರಿಗಳು ದೆಹಲಿಯಿಂದ ಅಪಘಾತದ ಸ್ಥಳಕ್ಕೆ ತೆರಳಿದ್ದಾರೆ.

“ಸಮಯ ಸುಮಾರು 5 ಗಂಟೆಯಾಗಿತ್ತು. ನಾನು ನನ್ನ ಹೆಂಡತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದೆ. ಇದ್ದಕ್ಕಿದ್ದಂತೆ ನನಗೆ ದೊಡ್ಡ ಶಬ್ದ ಕೇಳಿಸಿತು. ಭಾರೀ ಜರ್ಕ್ ಉಂಟಾಯಿತು. ನಾನು ನನ್ನ ಬರ್ತ್‌ನಿಂದ ಬಿದ್ದೆ. ಮರಳಿ ಬಂದಾಗ ಪ್ರಜ್ಞೆ ಬಂದಾಗ ನನ್ನನ್ನು ಆಂಬ್ಯುಲೆನ್ಸ್ ಒಳಗೆ ಕರೆದೊಯ್ಯಲಾಗಿತ್ತು” ಎಂದು ಬದುಕುಳಿದ ಸಂಜಯ್ ಎಂಬವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

“ನನ್ನ ತಾಯಿ ಮತ್ತು ನಾನು ಚಹಾ ಸೇವಿಸುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಶಬ್ದ ಬಂದಿತು. ನಂತರ ತೀವ್ರ ಆಘಾತಕ್ಕೊಳಗಾದೆವು. ಮೇಲಿನ ಬರ್ತ್‌ಗಳಲ್ಲಿ ಇರಿಸಲಾಗಿದ್ದ ಸಾಮಾನುಗಳು ಉರಳಲಾರಂಭಿಸಿದವು. ನಂತರ ಸ್ಥಳೀಯರು ನನ್ನನ್ನು ರಕ್ಷಿಸಿದರು, ಆದರೆ ನಾನು ಇನ್ನೂ ನನ್ನ ತಾಯಿಯನ್ನು ಪತ್ತೆ ಮಾಡಿಲ್ಲ. ಅವರಿಗೆ ಏನಾಯಿತು ಎಂದು ತಿಳಿದಿಲ್ಲ” ಎಂದು ಮತ್ತೊಬ್ಬ ಗಾಯಾಳು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಅಪಘಾತದ ಸ್ಥಳದಿಂದ ಮೂರು ದೇಹಗಳನ್ನು ವಶಪಡಿಸಿಕೊಂಡಿದ್ದೇವೆ. ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಜಲಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ಹೇಳಿದ್ದಾರೆ. ಅಪಘಾತದಲ್ಲಿ ಕನಿಷ್ಠ 45 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಮತ್ತು ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ₹ 25,000 ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

ಸುದ್ದಿ ಅಪ್‌ಡೇಟ್‌‌: ಸಾವಿನ ಸಂಖ್ಯೆ ಏಳಕ್ಕೆ ಏರಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಪಘಾತಕ್ಕೆ ಸಂಬಂಧಿಸಿದ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿರಿ: ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚಿ ವೊಡಾಫೋನ್‌‌ ಷೇರು ಖರೀದಿಸುವಲ್ಲಿ ಅರ್ಥವಿದೆಯೇ?: ಬಿಜೆಪಿಗೆ ಖರ್ಗೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....