Homeಮುಖಪುಟಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

ಪಶ್ಚಿಮ ಬಂಗಾಳ: ಹಳಿತಪ್ಪಿದ ರೈಲು, ಐವರ ದುರ್ಮರಣ

- Advertisement -
- Advertisement -

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೇನಗುರಿ ಪಟ್ಟಣದ ಬಳಿ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿವೆ.

ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಶುಕ್ರವಾರ ಬೆಳಿಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಾಗಿದ್ದಾರೆ.

ಈಶಾನ್ಯ ಫ್ರಾಂಟಿಯರ್ ರೈಲ್ವೇಯ ಅಲಿಪುರ್ದುವಾರ್ ವಿಭಾಗದ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ ವಕ್ತಾರರು ಗುವಾಹಟಿಯಲ್ಲಿ ತಿಳಿಸಿದ್ದಾರೆ.

ಸಮೀಪದ ಗ್ರಾಮಗಳ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ಕುಸಿದ ಬೋಗಿಗಳಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ಸಹಾಯ ಹಸ್ತ ಚಾಚಿದರು. ಕೆಲವು ಬೋಗಿಗಳು ರೈಲಿನ ಉಳಿದ ಭಾಗದಿಂದ ಬೇರ್ಪಟ್ಟಿದ್ದರೆ, ಕೆಲವು ಚಕ್ರಗಳು ಕಳಚಿ ಬಿದ್ದಿವೆ.

ಸ್ಥಳೀಯರು, ಇತರ ಪ್ರಯಾಣಿಕರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಲ್ಪೈಗುರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಮೂರು NDRF ತಂಡಗಳು ಅಪಘಾತ ಸ್ಥಳಕ್ಕೆ ತಲುಪಿವೆ. ಅಪಘಾತದ ಕುರಿತು ಉನ್ನತ ಮಟ್ಟದ ರೈಲ್ವೆ ಸುರಕ್ಷತಾ ತನಿಖೆಗೆ ಆದೇಶಿಸಲಾಗಿದೆ. ರೈಲ್ವೆಯ ಉನ್ನತ ಅಧಿಕಾರಿಗಳು ದೆಹಲಿಯಿಂದ ಅಪಘಾತದ ಸ್ಥಳಕ್ಕೆ ತೆರಳಿದ್ದಾರೆ.

“ಸಮಯ ಸುಮಾರು 5 ಗಂಟೆಯಾಗಿತ್ತು. ನಾನು ನನ್ನ ಹೆಂಡತಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದೆ. ಇದ್ದಕ್ಕಿದ್ದಂತೆ ನನಗೆ ದೊಡ್ಡ ಶಬ್ದ ಕೇಳಿಸಿತು. ಭಾರೀ ಜರ್ಕ್ ಉಂಟಾಯಿತು. ನಾನು ನನ್ನ ಬರ್ತ್‌ನಿಂದ ಬಿದ್ದೆ. ಮರಳಿ ಬಂದಾಗ ಪ್ರಜ್ಞೆ ಬಂದಾಗ ನನ್ನನ್ನು ಆಂಬ್ಯುಲೆನ್ಸ್ ಒಳಗೆ ಕರೆದೊಯ್ಯಲಾಗಿತ್ತು” ಎಂದು ಬದುಕುಳಿದ ಸಂಜಯ್ ಎಂಬವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

“ನನ್ನ ತಾಯಿ ಮತ್ತು ನಾನು ಚಹಾ ಸೇವಿಸುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಶಬ್ದ ಬಂದಿತು. ನಂತರ ತೀವ್ರ ಆಘಾತಕ್ಕೊಳಗಾದೆವು. ಮೇಲಿನ ಬರ್ತ್‌ಗಳಲ್ಲಿ ಇರಿಸಲಾಗಿದ್ದ ಸಾಮಾನುಗಳು ಉರಳಲಾರಂಭಿಸಿದವು. ನಂತರ ಸ್ಥಳೀಯರು ನನ್ನನ್ನು ರಕ್ಷಿಸಿದರು, ಆದರೆ ನಾನು ಇನ್ನೂ ನನ್ನ ತಾಯಿಯನ್ನು ಪತ್ತೆ ಮಾಡಿಲ್ಲ. ಅವರಿಗೆ ಏನಾಯಿತು ಎಂದು ತಿಳಿದಿಲ್ಲ” ಎಂದು ಮತ್ತೊಬ್ಬ ಗಾಯಾಳು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನಾವು ಅಪಘಾತದ ಸ್ಥಳದಿಂದ ಮೂರು ದೇಹಗಳನ್ನು ವಶಪಡಿಸಿಕೊಂಡಿದ್ದೇವೆ. ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಜಲಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡರಾ ಬಸು ಹೇಳಿದ್ದಾರೆ. ಅಪಘಾತದಲ್ಲಿ ಕನಿಷ್ಠ 45 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಮತ್ತು ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ₹ 25,000 ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

ಸುದ್ದಿ ಅಪ್‌ಡೇಟ್‌‌: ಸಾವಿನ ಸಂಖ್ಯೆ ಏಳಕ್ಕೆ ಏರಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಪಘಾತಕ್ಕೆ ಸಂಬಂಧಿಸಿದ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿರಿ: ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚಿ ವೊಡಾಫೋನ್‌‌ ಷೇರು ಖರೀದಿಸುವಲ್ಲಿ ಅರ್ಥವಿದೆಯೇ?: ಬಿಜೆಪಿಗೆ ಖರ್ಗೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...