Homeಮುಖಪುಟಮೊಯಿತ್ರಾರನ್ನ ಸಂಸತ್ತಿನಿಂದ ಹೊರಹಾಕುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ: ಪ್ರಗತಿಪರರು

ಮೊಯಿತ್ರಾರನ್ನ ಸಂಸತ್ತಿನಿಂದ ಹೊರಹಾಕುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ: ಪ್ರಗತಿಪರರು

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಚಾಟಿಸಲು ಲೋಕಸಭೆಯ ನೈತಿಕ ಸಮಿತಿ ಶಿಫಾರಸು ಮಾಡಿರುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು 123 ಪ್ರಗತಿಪರ ಗುಂಪು ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಗುಂಪಿನಲ್ಲಿ ನಿವೃತ್ತ ಅಧಿಕಾರಿಗಳು, ಬರಹಗಾರರು, ಕಾರ್ಯಕರ್ತರು ಮತ್ತು ವಕೀಲರಿದ್ದಾರೆ.

ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹೀರಾನಂದನಿಯಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರು ಆರೋಪಿಸಿದ್ದಾರೆ.

ಆರೋಪಗಳ ತನಿಖೆ ನಡೆಸಿದ ಲೋಕಸಭೆಯ ನೈತಿಕ ಸಮಿತಿಯು ನವೆಂಬರ್ 8 ರಂದು ತನ್ನ ಕರಡು ವರದಿಯಲ್ಲಿ ಶಿಫಾರಸು ಮಾಡಿದೆ. ಸಮಿತಿಯು ಮಹುವಾ ಅವರ ನಡೆಯು ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ ಮತ್ತು ಅಪರಾಧ ಎಂದು ಆರೋಪಿಸಿದೆ. ಆರು ಪ್ಯಾನೆಲ್ ಸದಸ್ಯರು ಅದನ್ನು ಬೆಂಬಲಿಸಿದರು ಮತ್ತು ನಾಲ್ವರು ಅಸಮ್ಮತಿ ಟಿಪ್ಪಣಿಗಳನ್ನು ಸಲ್ಲಿಸುವುದರೊಂದಿಗೆ ವರದಿಯನ್ನು ಅಂಗೀಕರಿಸಲಾಯಿತು.

ಮೊಯಿತ್ರಾ ಅವರನ್ನು ಬೆಂಬಲಿಸಿ ಬುಧವಾರದ ಹೇಳಿಕೆಗೆ ಸಹಿ ಮಾಡಿದವರಲ್ಲಿ ಸಾಮಾಜಿಕ ಕಾರ್ಯಕರ್ತೆ ಅಭಾ ಭಯ್ಯಾ, ನಿವೃತ್ತ ನಾಗರಿಕ ಸೇವಕರಾದ ಇಎಎಸ್ ಶರ್ಮಾ, ಅನಿತಾ ಅಗ್ನಿಹೋತ್ರಿ ಮತ್ತು ಅಶೋಕ್ ವಾಜಪೇಯಿ, ಪತ್ರಕರ್ತರಾದ ಪಿ ಸಾಯಿನಾಥ್ ಮತ್ತು ಪಮೇಲಾ ಫಿಲಿಪೋಸ್ ಮತ್ತು ಪ್ರಾಧ್ಯಾಪಕರಾದ ರಾಘವನ್ ರಂಗರಾಜನ್, ಸುರೀಂದರ್ ಕುಮಾರ್ ಮತ್ತು ಜಗಮೋಹನ್ ಸಿಂಗ್ ಸೇರಿದ್ದಾರೆ.

”ನ್ಯಾಯದ ತತ್ವಗಳಿಗೆ ಅನುಗುಣವಾಗಿ ಇನ್ನೂ ಕಟ್ಟುನಿಟ್ಟಾದ ಸಂಸದೀಯ ಮತ್ತು ನ್ಯಾಯಾಂಗ ಪರಿಶೀಲನೆಗೆ ಒಳಪಡಬೇಕಾದ ಆರೋಪಗಳ ಆಧಾರದ ಮೇಲೆ ಮೊಯಿತ್ರಾ ಅವರನ್ನು ಹೊರಹಾಕಬಹುದು” ಎಂದು ಗುಂಪು ತನ್ನ ಹೇಳಿಕೆಯಲ್ಲಿ ಹೇಳಿದೆ.

”ಮೊಯಿತ್ರಾ ಪ್ರಕರಣದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಅಂತರ-ಕಾರ್ಪೊರೇಟ್ ಹಿತಾಸಕ್ತಿ ಸಂಘರ್ಷ ಎಂದು ಸಂಕುಚಿತವಾಗಿ ನೋಡಲಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಅದು ಹೇಳಿದೆ.

”ಸಂಪೂರ್ಣವಾಗಿ ಪರಿಶೀಲಿಸದ ಹೊರತು, ಸಂಸತ್ತು ಮೊಯಿತ್ರಾಗೆ ಅನ್ಯಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

”ಕಾನೂನನ್ನು ಅನುಸರಿಸಲು ವಿಫಲವಾದ ಕಾರ್ಪೊರೇಟ್ ಘಟಕದ ಬಗ್ಗೆ ಹಲವಾರು ರಾಜಕೀಯ ಪಕ್ಷಗಳು ಜಂಟಿ ಸಂಸದೀಯ ಸಮಿತಿಯನ್ನು ರಚಿಸಲು ಕೇಳಿಕೊಂಡಾಗ ಕೇಂದ್ರ ಸರ್ಕಾರವು ಏಕೆ ಸಮಿತಿ ರಚಿಸಲಿಲ್ಲ?” ಎಂದು ಗುಂಪು ಕೇಳಿದೆ.

ಅದಾನಿ ಗ್ರೂಪ್ ಕಾರ್ಪೊರೇಟ್ ಇತಿಹಾಸದಲ್ಲಿ ಅತಿ ದೊಡ್ಡ ಹಗರಣ ಮಾಡಿದೆ ಎಂದು ಜನವರಿಯಲ್ಲಿ ಅಮೇರಿಕನ್ ಹೂಡಿಕೆ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿದೆ. ಲೆಕ್ಕಪತ್ರ ವಂಚನೆ, ತೆರಿಗೆ ಧಾಮಗಳ ಅನುಚಿತ ಬಳಕೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ತೊಡಗಿದೆ ಎಂದು ಹಿಂಡೆನ್‌ಬರ್ಗ್ ಸಂಸ್ಥೆಯು ಹೇಳಿಕೊಂಡಿದೆ.

ಅದಾನಿ ಗ್ರೂಪ್ ಪ್ರಕರಣದಲ್ಲಿ ಮೋದಿ ಸರ್ಕಾರದ ಪ್ರತಿಕ್ರಿಯೆಯು “ರಾಜಕೀಯ ಕಾರ್ಯನಿರ್ವಾಹಕ ಮತ್ತು ದೊಡ್ಡ ಉದ್ಯಮಗಳು ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಅದರ ಹಾನಿಕಾರಕ ಪರಿಣಾಮಗಳ” ನಡುವಿನ ಸಂಬಂಧವನ್ನು ತೋರಿಸುತ್ತದೆ ಎಂದು ಗುಂಪು ಆರೋಪಿಸಿದೆ.

”ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಮುಖ ವಿಷಯಗಳನ್ನು ಹೈಲೈಟ್ ಮಾಡಿದ್ದಾರೆ ಮತ್ತು ಅವರನ್ನು ಹೊರಹಾಕಿದರೆ ಅಂತಹ ಪ್ರಶ್ನೆಗಳನ್ನು ಯಾರೂ ಕೇಳುವುದಿಲ್ಲ ಎಂದು ಈ ರೀತಿ ಮಾಡಲಾಗುತ್ತಿದೆ” ಎಂದು ಸಹಿ ಮಾಡಿದವರು ಹೇಳಿದರು.

”ಶಾಸಕಾಂಗದ ಸದಸ್ಯರನ್ನು ಹೊರಹಾಕುವುದು ನಮ್ಮ ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಮೂಡುತ್ತದೆ, ಇದು ಗಂಭೀರ ವಿಷಯವಾಗಿದೆ. ಅಂತಹ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಸಂಸತ್ತು ಮತ್ತು ಇತರ ಶಾಸಕಾಂಗ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಶೀಲನೆ ಮತ್ತು ಸೂಕ್ಷ್ಮತೆಯಿಮದ ನಡೆದುಕೊಳ್ಳಬೇಕು” ಎಂದು ಹೇಳಲಾಗಿದೆ.

ಇದನ್ನೂ ಓದಿ: ನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...