Homeಮುಖಪುಟವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

- Advertisement -
- Advertisement -

ಜಗತ್ತಿನಲ್ಲಿ ವಿಸ್ತರಣಾವಾದಿಗಳ ಕಾಲ ಮುಗಿದಿದೆ. ಹೀಗಾಗಿ ವಿಸ್ತರಣಾವಾದಿಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೇ ಸರ್ವನಾಶವಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಜೊತೆಗೆ ಗಡಿ ಹಂಚಿಕೊಂಡಿರುವ ಲಡಾಖಿನ ಎತ್ತರದ ಬೆಟ್ಟ ಪ್ರದೇಶದಲ್ಲಿ ಹೇಳಿದ್ದಾರೆ.

ಇತ್ತಿಚೆಗೆ ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿಯಲ್ಲಿ ಯುದ್ಧದ ಭೀತಿ ಉಂಟಾಗಿದ್ದು, ಇಂದು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಗೆ ಭೇಟಿ ನೀಡಿದ್ದಾರೆ.

ಈ ವೇಳೆ ಸೈನಿಕರನ್ನು ಉದ್ದೇಶಿಸಿ 26 ನಿಮಿಷಗಳ ಭಾಷಣ ಮಾಡಿರುವ ನರೇಂದ್ರ ಮೋದಿ, “ವಿಸ್ತರಣೆಯ ಯುಗ ಮುಗಿದಿದೆ. ಇದು ಪ್ರಗತಿಯ ಯುಗ. ಪ್ರಗತಿ ಸಾಧಿಸಿದರೆ ಮಾತ್ರ ಎಲ್ಲಾ ದೇಗಳಿಗೂ ಭವಿಷ್ಯ. ವಿಸ್ತರಣೆಯ ಯುಗದಲ್ಲಿ ಮಾನವೀಯತೆ ಸಾಕಷ್ಟು ಸಂಷಕ್ಟಗಳನ್ನು ಅನುಭವಿಸಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಏಕೆಂದರೆ ವಿಸ್ತರಣಾವಾದಿಗಳು ನಾಶವಾಗಿರುವುದಕ್ಕೆ ಇತಿಹಾಸದಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ತಿಳಿಸಿದ್ದಾರೆ.

ಭಾರತೀಯ ಸೈನಿಕರ ಧೈರ್ಯವನ್ನು ಸಾಟಿಯಿಲ್ಲದವರು ಎಂದು ಬಣ್ಣಿಸಿದ ಪ್ರಧಾನಿ ಮೋದಿ, “ಈ ಕಷ್ಟದ ಸಂದರ್ಭಗಳಲ್ಲಿ, ಸೈನಿಕರು ತಾಯ್ನಾಡಿನ ಗುರಾಣಿ. ನಿಮ್ಮ ಧೈರ್ಯ ಎಂಬುದು ನೀವೆಲ್ಲರೂ ನಿಂತಿರುವ ಎತ್ತರಕ್ಕಿಂತ ಹೆಚ್ಚಾಗಿದೆ. ನಿಮ್ಮ ತೋಳುಗಳು ನಿಮ್ಮನ್ನು ಸುತ್ತುವರೆದಿರುವ ಪರ್ವತಗಳಷ್ಟೇ ಪ್ರಬಲವಾಗಿವೆ. ನಿಮ್ಮ ಆತ್ಮವಿಶ್ವಾಸ, ನಿರ್ಣಯ ಮತ್ತು ನಂಬಿಕೆ ಇಲ್ಲಿನ ಶಿಖರಗಳಂತೆ ಸ್ಥಿರವಾಗಿದೆ” ಎಂದು ಬಣ್ಣಿಸಿದ್ದಾರೆ.

“ಭಾರತೀಯ ಸಶಸ್ತ್ರ ಪಡೆ ವಿಶ್ವದ ಎಲ್ಲರಿಗಿಂತಲೂ ಪ್ರಬಲವಾಗಿದೆ ಮತ್ತು ಉತ್ತಮವಾಗಿದೆ ಎಂದು ನೀವು ಮತ್ತೆ ಮತ್ತೆ ಸಾಬೀತುಪಡಿಸಿದ್ದೀರಿ. ಲೇಹ್ ನಿಂದ ಲಡಾಖ್ ವರೆಗೆ, ಕಾರ್ಗಿಲ್ ನಿಂದ ಸಿಯಾಚಿನ್ ವರೆಗೆ, ಎಲ್ಲಾ ಪ್ರದೇಶಗಳು ನಮ್ಮ ಸೈನ್ಯದ ಧೈರ್ಯಕ್ಕೆ ಸಾಕ್ಷಿಯಾಗಿವೆ. ನಿಮ್ಮ ಧೈರ್ಯದ ಕಥೆಗಳು ದೇಶದ ಪ್ರತಿ ಮನೆ ಮನೆಯಲ್ಲಿ ಪ್ರತಿಧ್ವನಿಸುತ್ತವೆ” ಎಂದು ಹೇಳಿದ್ದಾರೆ.

ಪ್ರಧಾನಿಯೊಂದಿಗೆ ದೇಶದ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಕೂಡಾ ಉಪಸ್ಥಿತರಿದ್ದರು.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಸ್ತರಣಾ ವಾದಿಗಳ ಕಾಲ ಮುಗಿದಿದೆ ಏರು ಇದ್ದರೂ ಇನ್ನೂ ಪ್ರಗತಿಯ ಈಗ ಅಂತ ಭಾಷಣ ಮಾಡಿದ್ದೀರಾ ಮೋದಿಯವರೇ ಹಾಗಾದರೆ ನಿಮ್ಮ ಆರೆಸ್ಸೆಸ್ಸಿನ ಕನಸಾದ ಅಖಂಡ ಭಾರತದ ಕಲ್ಪನೆಯೂ ಏನಾಗಬಹುದು ಅದರಲ್ಲಿ ನೇಪಾಳ ಭೂತಾನ್ ಬರ್ಮಾ ಪಾಕಿಸ್ತಾನ ಬಾಂಗ್ಲಾದೇಶ ಟಿಬೆಟ್ ಶ್ರೀಲಂಕಾ ಎಲ್ಲವೂ ಒಳಗೊಂಡಿದೆ ಅಲ್ಲ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...