Homeಮುಖಪುಟವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

- Advertisement -
- Advertisement -

ಜಗತ್ತಿನಲ್ಲಿ ವಿಸ್ತರಣಾವಾದಿಗಳ ಕಾಲ ಮುಗಿದಿದೆ. ಹೀಗಾಗಿ ವಿಸ್ತರಣಾವಾದಿಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೇ ಸರ್ವನಾಶವಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಜೊತೆಗೆ ಗಡಿ ಹಂಚಿಕೊಂಡಿರುವ ಲಡಾಖಿನ ಎತ್ತರದ ಬೆಟ್ಟ ಪ್ರದೇಶದಲ್ಲಿ ಹೇಳಿದ್ದಾರೆ.

ಇತ್ತಿಚೆಗೆ ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿಯಲ್ಲಿ ಯುದ್ಧದ ಭೀತಿ ಉಂಟಾಗಿದ್ದು, ಇಂದು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಗೆ ಭೇಟಿ ನೀಡಿದ್ದಾರೆ.

ಈ ವೇಳೆ ಸೈನಿಕರನ್ನು ಉದ್ದೇಶಿಸಿ 26 ನಿಮಿಷಗಳ ಭಾಷಣ ಮಾಡಿರುವ ನರೇಂದ್ರ ಮೋದಿ, “ವಿಸ್ತರಣೆಯ ಯುಗ ಮುಗಿದಿದೆ. ಇದು ಪ್ರಗತಿಯ ಯುಗ. ಪ್ರಗತಿ ಸಾಧಿಸಿದರೆ ಮಾತ್ರ ಎಲ್ಲಾ ದೇಗಳಿಗೂ ಭವಿಷ್ಯ. ವಿಸ್ತರಣೆಯ ಯುಗದಲ್ಲಿ ಮಾನವೀಯತೆ ಸಾಕಷ್ಟು ಸಂಷಕ್ಟಗಳನ್ನು ಅನುಭವಿಸಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಏಕೆಂದರೆ ವಿಸ್ತರಣಾವಾದಿಗಳು ನಾಶವಾಗಿರುವುದಕ್ಕೆ ಇತಿಹಾಸದಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ತಿಳಿಸಿದ್ದಾರೆ.

ಭಾರತೀಯ ಸೈನಿಕರ ಧೈರ್ಯವನ್ನು ಸಾಟಿಯಿಲ್ಲದವರು ಎಂದು ಬಣ್ಣಿಸಿದ ಪ್ರಧಾನಿ ಮೋದಿ, “ಈ ಕಷ್ಟದ ಸಂದರ್ಭಗಳಲ್ಲಿ, ಸೈನಿಕರು ತಾಯ್ನಾಡಿನ ಗುರಾಣಿ. ನಿಮ್ಮ ಧೈರ್ಯ ಎಂಬುದು ನೀವೆಲ್ಲರೂ ನಿಂತಿರುವ ಎತ್ತರಕ್ಕಿಂತ ಹೆಚ್ಚಾಗಿದೆ. ನಿಮ್ಮ ತೋಳುಗಳು ನಿಮ್ಮನ್ನು ಸುತ್ತುವರೆದಿರುವ ಪರ್ವತಗಳಷ್ಟೇ ಪ್ರಬಲವಾಗಿವೆ. ನಿಮ್ಮ ಆತ್ಮವಿಶ್ವಾಸ, ನಿರ್ಣಯ ಮತ್ತು ನಂಬಿಕೆ ಇಲ್ಲಿನ ಶಿಖರಗಳಂತೆ ಸ್ಥಿರವಾಗಿದೆ” ಎಂದು ಬಣ್ಣಿಸಿದ್ದಾರೆ.

“ಭಾರತೀಯ ಸಶಸ್ತ್ರ ಪಡೆ ವಿಶ್ವದ ಎಲ್ಲರಿಗಿಂತಲೂ ಪ್ರಬಲವಾಗಿದೆ ಮತ್ತು ಉತ್ತಮವಾಗಿದೆ ಎಂದು ನೀವು ಮತ್ತೆ ಮತ್ತೆ ಸಾಬೀತುಪಡಿಸಿದ್ದೀರಿ. ಲೇಹ್ ನಿಂದ ಲಡಾಖ್ ವರೆಗೆ, ಕಾರ್ಗಿಲ್ ನಿಂದ ಸಿಯಾಚಿನ್ ವರೆಗೆ, ಎಲ್ಲಾ ಪ್ರದೇಶಗಳು ನಮ್ಮ ಸೈನ್ಯದ ಧೈರ್ಯಕ್ಕೆ ಸಾಕ್ಷಿಯಾಗಿವೆ. ನಿಮ್ಮ ಧೈರ್ಯದ ಕಥೆಗಳು ದೇಶದ ಪ್ರತಿ ಮನೆ ಮನೆಯಲ್ಲಿ ಪ್ರತಿಧ್ವನಿಸುತ್ತವೆ” ಎಂದು ಹೇಳಿದ್ದಾರೆ.

ಪ್ರಧಾನಿಯೊಂದಿಗೆ ದೇಶದ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಕೂಡಾ ಉಪಸ್ಥಿತರಿದ್ದರು.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಸ್ತರಣಾ ವಾದಿಗಳ ಕಾಲ ಮುಗಿದಿದೆ ಏರು ಇದ್ದರೂ ಇನ್ನೂ ಪ್ರಗತಿಯ ಈಗ ಅಂತ ಭಾಷಣ ಮಾಡಿದ್ದೀರಾ ಮೋದಿಯವರೇ ಹಾಗಾದರೆ ನಿಮ್ಮ ಆರೆಸ್ಸೆಸ್ಸಿನ ಕನಸಾದ ಅಖಂಡ ಭಾರತದ ಕಲ್ಪನೆಯೂ ಏನಾಗಬಹುದು ಅದರಲ್ಲಿ ನೇಪಾಳ ಭೂತಾನ್ ಬರ್ಮಾ ಪಾಕಿಸ್ತಾನ ಬಾಂಗ್ಲಾದೇಶ ಟಿಬೆಟ್ ಶ್ರೀಲಂಕಾ ಎಲ್ಲವೂ ಒಳಗೊಂಡಿದೆ ಅಲ್ಲ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...