Homeಕರ್ನಾಟಕ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯು ರೈತ ಹೋರಾಟ ಬೆಂಬಲಿಸಿ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಶುಕ್ರವಾರ ರೈತ ಹೋರಾಟದೊಂದಿಗೆ ಕರ್ನಾಟಕ (#KarnatakaWithFarmersProtest) ಎಂಬ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿತ್ತು. ಈ ಅಭಿಯಾನವು ಇಂದು ಪ್ರಾರಂಭವಾಗಿದೆ. ಟ್ವಿಟ್ಟರ್‌‌ನಲ್ಲಿರುವ ಸಾವಿರಾರು ಕನ್ನಡಿಗರು ಅಭಿಯಾನದಲ್ಲಿ ಭಾಗವಹಿಸಿ ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಅಭಿಯಾನದ ಬಗ್ಗೆ ಶುಕ್ರವಾರದಂದು ಟ್ವೀಟ್ ಮಾಡಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ. ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದು ವಿನಂತಿಸಿದ್ದರು.

ನಾರಾಯಾಣ ಗೌಡ ಅವರ ವಿನಂತಿಯಂತೆ ಇಂದು ಹಲವಾರು ಕನ್ನಡಿಗರು ಟ್ವಿಟ್ಟರ್‌‌ನಲ್ಲಿ ರೈತ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ಮಹೇಶಾ ಕಾಶಿ ಅವರು, “ಕೃಷಿ ಬಿಲ್ಲನ್ನು ಎಲ್ಲಾ ಭಾಷೆಗಳಿಗೆ ಅನುವಾದ ಮಾಡದ್ದನ್ನು ನೋಡಿದರೆ,ಇಲ್ಲಿ ಏನನ್ನೋ ಮುಚ್ಚಿಟ್ಟು ಮಾಡುವ ಯತ್ನ ಅನಿಸುತ್ತಲ್ಲವೇ?? ರೈತರಿಗೆ ದ್ರೋಹ ಎಸೆಯುವ ಕಾರ್ಯ ಆಗುತ್ತಿದಿಯಾ??” ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಮಂತ್ರಿ ಅಮಿತ್‌ಶಾ ಹಾಗೂ ಪ್ರಧಾನಿಯೊಂದಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಬಸವರಾಜು ಮಹಾದೇವಪುರ ಅವರು, “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ’ ಎಂಬ ನಾಣ್ನುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ ರೈತನಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು” ಎಂದು ಹೇಳಿದ್ದಾರೆ.

ಫೈಸಲ್ ಪೇರಾಜೆ ಅವರು, “ಯಾರು ಏನು ಹೇಳುತ್ತಿದ್ದಾರೆ ಎಂಬುವುದು ಮುಖ್ಯವಲ್ಲ, ಆದರೆ ಈಗ ಇಡೀ ಕರ್ನಾಟಕ ರೈತ ಪರವಾಗಿ ನಿಂತಿದೆ. ನಮ್ಮ ಜಯ ಖಂಡಿತಾ” ಎಂದು ಟ್ವೀಟ್‌ನಲ್ಲಿ ಬರೆದಿರುವ ಅವರು, “ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ. ನಡೆವ ದಾರಿಗೆ ಮೊಳೆ ನೆಟ್ಟ ನಿಮ್ಮೆದೆಯೊಳಗೆ ಭಯ ಬಿತ್ತುತ್ತೇವೆ” ಎಂಬ ಬರಹವಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನೂತನ ಅವರು, “ಅನ್ನವನ್ನು ತಿನ್ನಿ, ಸೆಗಣಿಯನ್ನಲ್ಲ. ನೀವು ಏನನ್ನು ತಿನ್ನುತ್ತೀರಿ ಎಂದು ನೀವೆ ತೀರ್ಮಾನಿಸಿ. ನಿಮಗೆ ಬಿರಿಯಾನಿ ಅಥವಾ ಪುಲಿಯೊಗರೆ ಬೇಕಾದರೂ ಅದಕ್ಕೆ ರೈತನೆ ಬೇಕು” ಎಂದು ಹೇಳಿದ್ದಾರೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಭಿಯಾನದ ಪರವಾಗಿ ರೈತರಿಗೆ ಬೆಂಬಲಿಸಿ ನೀಡಿರುವ ಹೇಳಿಕೆಯನ್ನು ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ತಮ್ಮ ಟ್ವಿಟ್ಟರ್ ‌‌ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರವಿ ಕುಮಾರ್‌ ಅವರು, “ಒಕ್ಕೂಟ ವ್ಯವಸ್ಥೆ ನೆಟ್ಟಗಿರಬೇಕಂದ್ರೆ ಅಧಿಕಾರ ವಿಕೇಂದ್ರಿಕರಣ ಮುಂದುವರೆಸಿ. ಕೇಂದ್ರವು ದೇಶದ ರಕ್ಷಣೆ ಹಾಗು ವಿದೇಶಾಂಗ ನೀತಿ ಮಾತ್ರ ನೋಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಬಸವರಾಜ ಬೆಂಡಿಗೇರಿಮಠ ಅವರು, “ಬಂಡವಾಳಶಾಹಿಗಳಿಗೆ ಬಕೆಟ್ ಹಿಡಿಯುತ್ತಿರುವ ನೀಚ ಸರ್ಕಾರಗಳ ವಿರುದ್ಧ ಈ ಪ್ರತಿಭಟನೆ ನ್ಯಾಯಕ್ಕಾಗಿ” ಎಂದು ಹೇಳಿದ್ದಾರೆ.

ಪ್ರಖ್ಯಾತ್ ಪುತ್ತೂರು ಅವರು “ರೈತರು ದೇಶದ ಆತ್ಮ ಇದ್ದಂತೆ, ಅವರನ್ನು ಗೌರವಿಸಿ,ಅವರ ನೋವುಗಳಿಗೆ ಸ್ಪಂದಿಸಿ ಧಿಕ್ಕರಿಸಬೇಡಿ” ಎಂದು ಹೇಳಿದ್ದಾರೆ.

ವಿನಯ್ ಕುಮಾರ್‌ ಆಲೂರು ಅವರು, “ರೈತ ಬೆಳೆಯುವ ಅನ್ನ ತಿನ್ನುವ ನಾನು, ರೈತರ ಹೋರಾಟವನ್ನು ಬೆಂಬಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...