Homeಕರ್ನಾಟಕ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯು ರೈತ ಹೋರಾಟ ಬೆಂಬಲಿಸಿ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಶುಕ್ರವಾರ ರೈತ ಹೋರಾಟದೊಂದಿಗೆ ಕರ್ನಾಟಕ (#KarnatakaWithFarmersProtest) ಎಂಬ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿತ್ತು. ಈ ಅಭಿಯಾನವು ಇಂದು ಪ್ರಾರಂಭವಾಗಿದೆ. ಟ್ವಿಟ್ಟರ್‌‌ನಲ್ಲಿರುವ ಸಾವಿರಾರು ಕನ್ನಡಿಗರು ಅಭಿಯಾನದಲ್ಲಿ ಭಾಗವಹಿಸಿ ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಅಭಿಯಾನದ ಬಗ್ಗೆ ಶುಕ್ರವಾರದಂದು ಟ್ವೀಟ್ ಮಾಡಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ. ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದು ವಿನಂತಿಸಿದ್ದರು.

ನಾರಾಯಾಣ ಗೌಡ ಅವರ ವಿನಂತಿಯಂತೆ ಇಂದು ಹಲವಾರು ಕನ್ನಡಿಗರು ಟ್ವಿಟ್ಟರ್‌‌ನಲ್ಲಿ ರೈತ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ಮಹೇಶಾ ಕಾಶಿ ಅವರು, “ಕೃಷಿ ಬಿಲ್ಲನ್ನು ಎಲ್ಲಾ ಭಾಷೆಗಳಿಗೆ ಅನುವಾದ ಮಾಡದ್ದನ್ನು ನೋಡಿದರೆ,ಇಲ್ಲಿ ಏನನ್ನೋ ಮುಚ್ಚಿಟ್ಟು ಮಾಡುವ ಯತ್ನ ಅನಿಸುತ್ತಲ್ಲವೇ?? ರೈತರಿಗೆ ದ್ರೋಹ ಎಸೆಯುವ ಕಾರ್ಯ ಆಗುತ್ತಿದಿಯಾ??” ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಮಂತ್ರಿ ಅಮಿತ್‌ಶಾ ಹಾಗೂ ಪ್ರಧಾನಿಯೊಂದಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಬಸವರಾಜು ಮಹಾದೇವಪುರ ಅವರು, “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ’ ಎಂಬ ನಾಣ್ನುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ ರೈತನಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು” ಎಂದು ಹೇಳಿದ್ದಾರೆ.

ಫೈಸಲ್ ಪೇರಾಜೆ ಅವರು, “ಯಾರು ಏನು ಹೇಳುತ್ತಿದ್ದಾರೆ ಎಂಬುವುದು ಮುಖ್ಯವಲ್ಲ, ಆದರೆ ಈಗ ಇಡೀ ಕರ್ನಾಟಕ ರೈತ ಪರವಾಗಿ ನಿಂತಿದೆ. ನಮ್ಮ ಜಯ ಖಂಡಿತಾ” ಎಂದು ಟ್ವೀಟ್‌ನಲ್ಲಿ ಬರೆದಿರುವ ಅವರು, “ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ. ನಡೆವ ದಾರಿಗೆ ಮೊಳೆ ನೆಟ್ಟ ನಿಮ್ಮೆದೆಯೊಳಗೆ ಭಯ ಬಿತ್ತುತ್ತೇವೆ” ಎಂಬ ಬರಹವಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನೂತನ ಅವರು, “ಅನ್ನವನ್ನು ತಿನ್ನಿ, ಸೆಗಣಿಯನ್ನಲ್ಲ. ನೀವು ಏನನ್ನು ತಿನ್ನುತ್ತೀರಿ ಎಂದು ನೀವೆ ತೀರ್ಮಾನಿಸಿ. ನಿಮಗೆ ಬಿರಿಯಾನಿ ಅಥವಾ ಪುಲಿಯೊಗರೆ ಬೇಕಾದರೂ ಅದಕ್ಕೆ ರೈತನೆ ಬೇಕು” ಎಂದು ಹೇಳಿದ್ದಾರೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಭಿಯಾನದ ಪರವಾಗಿ ರೈತರಿಗೆ ಬೆಂಬಲಿಸಿ ನೀಡಿರುವ ಹೇಳಿಕೆಯನ್ನು ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ತಮ್ಮ ಟ್ವಿಟ್ಟರ್ ‌‌ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರವಿ ಕುಮಾರ್‌ ಅವರು, “ಒಕ್ಕೂಟ ವ್ಯವಸ್ಥೆ ನೆಟ್ಟಗಿರಬೇಕಂದ್ರೆ ಅಧಿಕಾರ ವಿಕೇಂದ್ರಿಕರಣ ಮುಂದುವರೆಸಿ. ಕೇಂದ್ರವು ದೇಶದ ರಕ್ಷಣೆ ಹಾಗು ವಿದೇಶಾಂಗ ನೀತಿ ಮಾತ್ರ ನೋಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಬಸವರಾಜ ಬೆಂಡಿಗೇರಿಮಠ ಅವರು, “ಬಂಡವಾಳಶಾಹಿಗಳಿಗೆ ಬಕೆಟ್ ಹಿಡಿಯುತ್ತಿರುವ ನೀಚ ಸರ್ಕಾರಗಳ ವಿರುದ್ಧ ಈ ಪ್ರತಿಭಟನೆ ನ್ಯಾಯಕ್ಕಾಗಿ” ಎಂದು ಹೇಳಿದ್ದಾರೆ.

ಪ್ರಖ್ಯಾತ್ ಪುತ್ತೂರು ಅವರು “ರೈತರು ದೇಶದ ಆತ್ಮ ಇದ್ದಂತೆ, ಅವರನ್ನು ಗೌರವಿಸಿ,ಅವರ ನೋವುಗಳಿಗೆ ಸ್ಪಂದಿಸಿ ಧಿಕ್ಕರಿಸಬೇಡಿ” ಎಂದು ಹೇಳಿದ್ದಾರೆ.

ವಿನಯ್ ಕುಮಾರ್‌ ಆಲೂರು ಅವರು, “ರೈತ ಬೆಳೆಯುವ ಅನ್ನ ತಿನ್ನುವ ನಾನು, ರೈತರ ಹೋರಾಟವನ್ನು ಬೆಂಬಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...