Homeಕರ್ನಾಟಕ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯು ರೈತ ಹೋರಾಟ ಬೆಂಬಲಿಸಿ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಶುಕ್ರವಾರ ರೈತ ಹೋರಾಟದೊಂದಿಗೆ ಕರ್ನಾಟಕ (#KarnatakaWithFarmersProtest) ಎಂಬ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿತ್ತು. ಈ ಅಭಿಯಾನವು ಇಂದು ಪ್ರಾರಂಭವಾಗಿದೆ. ಟ್ವಿಟ್ಟರ್‌‌ನಲ್ಲಿರುವ ಸಾವಿರಾರು ಕನ್ನಡಿಗರು ಅಭಿಯಾನದಲ್ಲಿ ಭಾಗವಹಿಸಿ ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಅಭಿಯಾನದ ಬಗ್ಗೆ ಶುಕ್ರವಾರದಂದು ಟ್ವೀಟ್ ಮಾಡಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ. ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದು ವಿನಂತಿಸಿದ್ದರು.

ನಾರಾಯಾಣ ಗೌಡ ಅವರ ವಿನಂತಿಯಂತೆ ಇಂದು ಹಲವಾರು ಕನ್ನಡಿಗರು ಟ್ವಿಟ್ಟರ್‌‌ನಲ್ಲಿ ರೈತ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ಮಹೇಶಾ ಕಾಶಿ ಅವರು, “ಕೃಷಿ ಬಿಲ್ಲನ್ನು ಎಲ್ಲಾ ಭಾಷೆಗಳಿಗೆ ಅನುವಾದ ಮಾಡದ್ದನ್ನು ನೋಡಿದರೆ,ಇಲ್ಲಿ ಏನನ್ನೋ ಮುಚ್ಚಿಟ್ಟು ಮಾಡುವ ಯತ್ನ ಅನಿಸುತ್ತಲ್ಲವೇ?? ರೈತರಿಗೆ ದ್ರೋಹ ಎಸೆಯುವ ಕಾರ್ಯ ಆಗುತ್ತಿದಿಯಾ??” ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಮಂತ್ರಿ ಅಮಿತ್‌ಶಾ ಹಾಗೂ ಪ್ರಧಾನಿಯೊಂದಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಬಸವರಾಜು ಮಹಾದೇವಪುರ ಅವರು, “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ’ ಎಂಬ ನಾಣ್ನುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ ರೈತನಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು” ಎಂದು ಹೇಳಿದ್ದಾರೆ.

ಫೈಸಲ್ ಪೇರಾಜೆ ಅವರು, “ಯಾರು ಏನು ಹೇಳುತ್ತಿದ್ದಾರೆ ಎಂಬುವುದು ಮುಖ್ಯವಲ್ಲ, ಆದರೆ ಈಗ ಇಡೀ ಕರ್ನಾಟಕ ರೈತ ಪರವಾಗಿ ನಿಂತಿದೆ. ನಮ್ಮ ಜಯ ಖಂಡಿತಾ” ಎಂದು ಟ್ವೀಟ್‌ನಲ್ಲಿ ಬರೆದಿರುವ ಅವರು, “ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ. ನಡೆವ ದಾರಿಗೆ ಮೊಳೆ ನೆಟ್ಟ ನಿಮ್ಮೆದೆಯೊಳಗೆ ಭಯ ಬಿತ್ತುತ್ತೇವೆ” ಎಂಬ ಬರಹವಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನೂತನ ಅವರು, “ಅನ್ನವನ್ನು ತಿನ್ನಿ, ಸೆಗಣಿಯನ್ನಲ್ಲ. ನೀವು ಏನನ್ನು ತಿನ್ನುತ್ತೀರಿ ಎಂದು ನೀವೆ ತೀರ್ಮಾನಿಸಿ. ನಿಮಗೆ ಬಿರಿಯಾನಿ ಅಥವಾ ಪುಲಿಯೊಗರೆ ಬೇಕಾದರೂ ಅದಕ್ಕೆ ರೈತನೆ ಬೇಕು” ಎಂದು ಹೇಳಿದ್ದಾರೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಭಿಯಾನದ ಪರವಾಗಿ ರೈತರಿಗೆ ಬೆಂಬಲಿಸಿ ನೀಡಿರುವ ಹೇಳಿಕೆಯನ್ನು ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ತಮ್ಮ ಟ್ವಿಟ್ಟರ್ ‌‌ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರವಿ ಕುಮಾರ್‌ ಅವರು, “ಒಕ್ಕೂಟ ವ್ಯವಸ್ಥೆ ನೆಟ್ಟಗಿರಬೇಕಂದ್ರೆ ಅಧಿಕಾರ ವಿಕೇಂದ್ರಿಕರಣ ಮುಂದುವರೆಸಿ. ಕೇಂದ್ರವು ದೇಶದ ರಕ್ಷಣೆ ಹಾಗು ವಿದೇಶಾಂಗ ನೀತಿ ಮಾತ್ರ ನೋಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಬಸವರಾಜ ಬೆಂಡಿಗೇರಿಮಠ ಅವರು, “ಬಂಡವಾಳಶಾಹಿಗಳಿಗೆ ಬಕೆಟ್ ಹಿಡಿಯುತ್ತಿರುವ ನೀಚ ಸರ್ಕಾರಗಳ ವಿರುದ್ಧ ಈ ಪ್ರತಿಭಟನೆ ನ್ಯಾಯಕ್ಕಾಗಿ” ಎಂದು ಹೇಳಿದ್ದಾರೆ.

ಪ್ರಖ್ಯಾತ್ ಪುತ್ತೂರು ಅವರು “ರೈತರು ದೇಶದ ಆತ್ಮ ಇದ್ದಂತೆ, ಅವರನ್ನು ಗೌರವಿಸಿ,ಅವರ ನೋವುಗಳಿಗೆ ಸ್ಪಂದಿಸಿ ಧಿಕ್ಕರಿಸಬೇಡಿ” ಎಂದು ಹೇಳಿದ್ದಾರೆ.

ವಿನಯ್ ಕುಮಾರ್‌ ಆಲೂರು ಅವರು, “ರೈತ ಬೆಳೆಯುವ ಅನ್ನ ತಿನ್ನುವ ನಾನು, ರೈತರ ಹೋರಾಟವನ್ನು ಬೆಂಬಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...