Homeಕರ್ನಾಟಕ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯು ರೈತ ಹೋರಾಟ ಬೆಂಬಲಿಸಿ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಶುಕ್ರವಾರ ರೈತ ಹೋರಾಟದೊಂದಿಗೆ ಕರ್ನಾಟಕ (#KarnatakaWithFarmersProtest) ಎಂಬ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿತ್ತು. ಈ ಅಭಿಯಾನವು ಇಂದು ಪ್ರಾರಂಭವಾಗಿದೆ. ಟ್ವಿಟ್ಟರ್‌‌ನಲ್ಲಿರುವ ಸಾವಿರಾರು ಕನ್ನಡಿಗರು ಅಭಿಯಾನದಲ್ಲಿ ಭಾಗವಹಿಸಿ ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಅಭಿಯಾನದ ಬಗ್ಗೆ ಶುಕ್ರವಾರದಂದು ಟ್ವೀಟ್ ಮಾಡಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, “ರೈತಪರ ಹೋರಾಟದಲ್ಲಿ ಕರ್ನಾಟಕ ಹಿಂದುಳಿದಿಲ್ಲ. ಶನಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ #ರೈತಹೋರಾಟದೊಂದಿಗೆಕರ್ನಾಟಕ #KarnatakaWithFarmersProtest ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದು ವಿನಂತಿಸಿದ್ದರು.

ನಾರಾಯಾಣ ಗೌಡ ಅವರ ವಿನಂತಿಯಂತೆ ಇಂದು ಹಲವಾರು ಕನ್ನಡಿಗರು ಟ್ವಿಟ್ಟರ್‌‌ನಲ್ಲಿ ರೈತ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ಮಹೇಶಾ ಕಾಶಿ ಅವರು, “ಕೃಷಿ ಬಿಲ್ಲನ್ನು ಎಲ್ಲಾ ಭಾಷೆಗಳಿಗೆ ಅನುವಾದ ಮಾಡದ್ದನ್ನು ನೋಡಿದರೆ,ಇಲ್ಲಿ ಏನನ್ನೋ ಮುಚ್ಚಿಟ್ಟು ಮಾಡುವ ಯತ್ನ ಅನಿಸುತ್ತಲ್ಲವೇ?? ರೈತರಿಗೆ ದ್ರೋಹ ಎಸೆಯುವ ಕಾರ್ಯ ಆಗುತ್ತಿದಿಯಾ??” ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಮಂತ್ರಿ ಅಮಿತ್‌ಶಾ ಹಾಗೂ ಪ್ರಧಾನಿಯೊಂದಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ಬಸವರಾಜು ಮಹಾದೇವಪುರ ಅವರು, “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ’ ಎಂಬ ನಾಣ್ನುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ ರೈತನಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು” ಎಂದು ಹೇಳಿದ್ದಾರೆ.

ಫೈಸಲ್ ಪೇರಾಜೆ ಅವರು, “ಯಾರು ಏನು ಹೇಳುತ್ತಿದ್ದಾರೆ ಎಂಬುವುದು ಮುಖ್ಯವಲ್ಲ, ಆದರೆ ಈಗ ಇಡೀ ಕರ್ನಾಟಕ ರೈತ ಪರವಾಗಿ ನಿಂತಿದೆ. ನಮ್ಮ ಜಯ ಖಂಡಿತಾ” ಎಂದು ಟ್ವೀಟ್‌ನಲ್ಲಿ ಬರೆದಿರುವ ಅವರು, “ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ. ನಡೆವ ದಾರಿಗೆ ಮೊಳೆ ನೆಟ್ಟ ನಿಮ್ಮೆದೆಯೊಳಗೆ ಭಯ ಬಿತ್ತುತ್ತೇವೆ” ಎಂಬ ಬರಹವಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನೂತನ ಅವರು, “ಅನ್ನವನ್ನು ತಿನ್ನಿ, ಸೆಗಣಿಯನ್ನಲ್ಲ. ನೀವು ಏನನ್ನು ತಿನ್ನುತ್ತೀರಿ ಎಂದು ನೀವೆ ತೀರ್ಮಾನಿಸಿ. ನಿಮಗೆ ಬಿರಿಯಾನಿ ಅಥವಾ ಪುಲಿಯೊಗರೆ ಬೇಕಾದರೂ ಅದಕ್ಕೆ ರೈತನೆ ಬೇಕು” ಎಂದು ಹೇಳಿದ್ದಾರೆ.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಭಿಯಾನದ ಪರವಾಗಿ ರೈತರಿಗೆ ಬೆಂಬಲಿಸಿ ನೀಡಿರುವ ಹೇಳಿಕೆಯನ್ನು ಕನ್ನಡ ಪರ ಹೋರಾಟಗಾರ ದಿನೇಶ್‌ ಕುಮಾರ್‌ ತಮ್ಮ ಟ್ವಿಟ್ಟರ್ ‌‌ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರವಿ ಕುಮಾರ್‌ ಅವರು, “ಒಕ್ಕೂಟ ವ್ಯವಸ್ಥೆ ನೆಟ್ಟಗಿರಬೇಕಂದ್ರೆ ಅಧಿಕಾರ ವಿಕೇಂದ್ರಿಕರಣ ಮುಂದುವರೆಸಿ. ಕೇಂದ್ರವು ದೇಶದ ರಕ್ಷಣೆ ಹಾಗು ವಿದೇಶಾಂಗ ನೀತಿ ಮಾತ್ರ ನೋಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಬಸವರಾಜ ಬೆಂಡಿಗೇರಿಮಠ ಅವರು, “ಬಂಡವಾಳಶಾಹಿಗಳಿಗೆ ಬಕೆಟ್ ಹಿಡಿಯುತ್ತಿರುವ ನೀಚ ಸರ್ಕಾರಗಳ ವಿರುದ್ಧ ಈ ಪ್ರತಿಭಟನೆ ನ್ಯಾಯಕ್ಕಾಗಿ” ಎಂದು ಹೇಳಿದ್ದಾರೆ.

ಪ್ರಖ್ಯಾತ್ ಪುತ್ತೂರು ಅವರು “ರೈತರು ದೇಶದ ಆತ್ಮ ಇದ್ದಂತೆ, ಅವರನ್ನು ಗೌರವಿಸಿ,ಅವರ ನೋವುಗಳಿಗೆ ಸ್ಪಂದಿಸಿ ಧಿಕ್ಕರಿಸಬೇಡಿ” ಎಂದು ಹೇಳಿದ್ದಾರೆ.

ವಿನಯ್ ಕುಮಾರ್‌ ಆಲೂರು ಅವರು, “ರೈತ ಬೆಳೆಯುವ ಅನ್ನ ತಿನ್ನುವ ನಾನು, ರೈತರ ಹೋರಾಟವನ್ನು ಬೆಂಬಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...