Homeಮುಖಪುಟ100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌...

100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನಾ ಮೂಲದವರು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

- Advertisement -
- Advertisement -

ಚೀನಾದ ಕೆಲವು ಪ್ರಜೆಗಳು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

ಈ ದಂಧೆಯಲ್ಲಿ 100ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳನ್ನು ಬಳಸಲಾಗಿದ್ದು, ಬಳಕೆದಾರರಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಇವುಗಳ ಮೂಲಕ ಸಂಗ್ರಹಿಸಲಾಗುತ್ತಿತ್ತು. ಬಳಿಕ ಅದನ್ನು ಚೀನಾ ಮತ್ತು ಹಾಂಗ್ ಕಾಂಗ್ ಮೂಲದ ಸರ್ವರ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ತಿಂಗಳ ಕಾಲ ನಡೆದ ಗ್ಯಾಂಗ್ ಕಾರ್ಯಾಚರಣೆಯ ಬಳಿಕ ದೆಹಲಿ ಪೊಲೀಸರು ಕದೀಮರನ್ನು ಬಂಧಿಸಿದ್ದಾರೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಈ ಜಾಲ ಹರಡಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಲಕ್ನೋದ ಕಾಲ್ ಸೆಂಟರ್ ಮೂಲದ ಗ್ಯಾಂಗ್ ಸಣ್ಣ ಪ್ರಮಾಣದ ಸಾಲವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತಿತ್ತು. ಬಳಕೆದಾರರು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ ನಂತರ ಮತ್ತು ಅಪ್ಲಿಕೇಶನ್‌ಗೆ ತಮ್ಮ ಅನುಮತಿಗಳನ್ನು ನೀಡಿದ ನಂತರ, ಈ ಗ್ಯಾಗ್‌ ಕೆಲವೇ ನಿಮಿಷಗಳಲ್ಲಿ ಬಳಕೆದಾರರ ಖಾತೆಗೆ ಸಾಲದ ಹಣವನ್ನು ನೀಡುತ್ತಿತ್ತು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಕಲಿ ಗುರುತಿನ ಚೀಟಿಯಲ್ಲಿ ಪಡೆದ ವಿವಿಧ ಸಂಖ್ಯೆಗಳಿಂದ ಈ ಗ್ಯಾಂಗ್ ಬಳಕೆದಾರರಿಗೆ ಕರೆ ಮಾಡಿ, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಫ್ ಮಾಡಿದ ನಗ್ನ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿತ್ತು ಎಂದು ಉಪ ಪೊಲೀಸ್ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಸ್ಥಾನಮಾನದ ಭಯ ಮತ್ತು ಕಳಂಕ್ಕೆ ಹೆದರಿ ಬಳಕೆದಾರರು ಹಣವನ್ನು ಪಾವತಿಸುತ್ತಿದ್ದರು. ಈ ಹಣವನ್ನು ಹವಾಲಾ ಮೂಲಕ ಅಥವಾ ಕ್ರಿಪ್ಟೋಕರೆನ್ಸಿಗಳನ್ನು ಖರೀದಿಸಿದ ನಂತರ ಚೀನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗ್ಯಾಂಗ್ ಅನೇಕ ಖಾತೆಗಳನ್ನು ಬಳಸಿದೆ ಎಂದು ವರದಿಯಾಗಿದೆ. ಪ್ರತಿ ಖಾತೆಯೂ ದಿನಕ್ಕೆ ₹ 1 ಕೋಟಿಗೂ ಹೆಚ್ಚು ಹಣವನ್ನು ರಿಸೀವ್ ಮಾಡಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಬಳಸಲಾದ ಅಪ್ಲಿಕೇಶನ್‌ಗಳನ್ನು ಕ್ಯಾಶ್ ಪೋರ್ಟ್, ರುಪೇ ವೇ, ಲೋನ್ ಕ್ಯೂಬ್, ವಾವ್ ರೂಪಾಯಿ, ಸ್ಮಾರ್ಟ್ ವಾಲೆಟ್, ಜೈಂಟ್ ವಾಲೆಟ್, ಹೈ ರೂಪಾಯಿ, ಸ್ವಿಫ್ಟ್ ರೂಪಾಯಿ, ವಾಲೆಟ್‌ವಿನ್, ಫಿಶ್‌ಕ್ಲಬ್, ಯೆಹ್‌ಕ್ಯಾಶ್, ಇಮ್ ಲೋನ್, ಗ್ರೋಟ್ರೀ, ಮ್ಯಾಜಿಕ್ ಬ್ಯಾಲೆನ್ಸ್, ಯೋಕಾಶ್, ಫಾರ್ಚೂನ್ ಟ್ರೀ, ಸೂಪರ್‌ಕಾಯಿನ್, ರೆಡ್ ಮ್ಯಾಜಿಕ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿರಿ: ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಪೊಲೀಸರು ಕನಿಷ್ಠ 51 ಮೊಬೈಲ್ ಫೋನ್‌ಗಳು, 25 ಹಾರ್ಡ್ ಡಿಸ್ಕ್‌ಗಳು, ಒಂಬತ್ತು ಲ್ಯಾಪ್‌ಟಾಪ್‌ಗಳು, 19 ಡೆಬಿಟ್ ಕಾರ್ಡ್‌ಗಳು/ಕ್ರೆಡಿಟ್ ಕಾರ್ಡ್‌ಗಳು, ಮೂರು ಕಾರುಗಳು ಮತ್ತು ₹ 4 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಚೀನಾದ ಪ್ರಜೆಗಳ ಸೂಚನೆ ಮೇರೆಗೆ ಈ ದಂಧೆ ನಡೆಸಲಾಗಿದೆ ಎಂದು ಬಂಧಿತರು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಕೆಲವು ಚೀನೀ ಪ್ರಜೆಗಳನ್ನು ಗುರುತಿಸಿದ್ದಾರೆ. ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಪೊಲೀಸರು ತಮ್ಮ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಈ ದಂಧೆಕೋರರು ತಮ್ಮ ರಿಕವರಿ ಕಾಲ್ ಸೆಂಟರ್‌ಗಳನ್ನು ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಇಲ್ಲಿಯವರೆಗೆ ₹ 500 ಕೋಟಿಗೂ ಹೆಚ್ಚು ಹಣವನ್ನು ಚೀನಾ ಪ್ರಜೆಗಳು ಕಬಳಿಸಿದ್ದಾರೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...