Homeಮುಖಪುಟ100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌...

100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಚೀನಾ ಮೂಲದವರು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

- Advertisement -
- Advertisement -

ಚೀನಾದ ಕೆಲವು ಪ್ರಜೆಗಳು ನಡೆಸುತ್ತಿದ್ದ ₹ 500 ಕೋಟಿ ತ್ವರಿತ ಸಾಲ ಮತ್ತು ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೇಶಾದ್ಯಂತ 22 ಜನರನ್ನು ಬಂಧಿಸಲಾಗಿದೆ.

ಈ ದಂಧೆಯಲ್ಲಿ 100ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳನ್ನು ಬಳಸಲಾಗಿದ್ದು, ಬಳಕೆದಾರರಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಇವುಗಳ ಮೂಲಕ ಸಂಗ್ರಹಿಸಲಾಗುತ್ತಿತ್ತು. ಬಳಿಕ ಅದನ್ನು ಚೀನಾ ಮತ್ತು ಹಾಂಗ್ ಕಾಂಗ್ ಮೂಲದ ಸರ್ವರ್‌ಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ತಿಂಗಳ ಕಾಲ ನಡೆದ ಗ್ಯಾಂಗ್ ಕಾರ್ಯಾಚರಣೆಯ ಬಳಿಕ ದೆಹಲಿ ಪೊಲೀಸರು ಕದೀಮರನ್ನು ಬಂಧಿಸಿದ್ದಾರೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಈ ಜಾಲ ಹರಡಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಲಕ್ನೋದ ಕಾಲ್ ಸೆಂಟರ್ ಮೂಲದ ಗ್ಯಾಂಗ್ ಸಣ್ಣ ಪ್ರಮಾಣದ ಸಾಲವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತಿತ್ತು. ಬಳಕೆದಾರರು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ ನಂತರ ಮತ್ತು ಅಪ್ಲಿಕೇಶನ್‌ಗೆ ತಮ್ಮ ಅನುಮತಿಗಳನ್ನು ನೀಡಿದ ನಂತರ, ಈ ಗ್ಯಾಗ್‌ ಕೆಲವೇ ನಿಮಿಷಗಳಲ್ಲಿ ಬಳಕೆದಾರರ ಖಾತೆಗೆ ಸಾಲದ ಹಣವನ್ನು ನೀಡುತ್ತಿತ್ತು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಕಲಿ ಗುರುತಿನ ಚೀಟಿಯಲ್ಲಿ ಪಡೆದ ವಿವಿಧ ಸಂಖ್ಯೆಗಳಿಂದ ಈ ಗ್ಯಾಂಗ್ ಬಳಕೆದಾರರಿಗೆ ಕರೆ ಮಾಡಿ, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಫ್ ಮಾಡಿದ ನಗ್ನ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿತ್ತು ಎಂದು ಉಪ ಪೊಲೀಸ್ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಸ್ಥಾನಮಾನದ ಭಯ ಮತ್ತು ಕಳಂಕ್ಕೆ ಹೆದರಿ ಬಳಕೆದಾರರು ಹಣವನ್ನು ಪಾವತಿಸುತ್ತಿದ್ದರು. ಈ ಹಣವನ್ನು ಹವಾಲಾ ಮೂಲಕ ಅಥವಾ ಕ್ರಿಪ್ಟೋಕರೆನ್ಸಿಗಳನ್ನು ಖರೀದಿಸಿದ ನಂತರ ಚೀನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗ್ಯಾಂಗ್ ಅನೇಕ ಖಾತೆಗಳನ್ನು ಬಳಸಿದೆ ಎಂದು ವರದಿಯಾಗಿದೆ. ಪ್ರತಿ ಖಾತೆಯೂ ದಿನಕ್ಕೆ ₹ 1 ಕೋಟಿಗೂ ಹೆಚ್ಚು ಹಣವನ್ನು ರಿಸೀವ್ ಮಾಡಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಬಳಸಲಾದ ಅಪ್ಲಿಕೇಶನ್‌ಗಳನ್ನು ಕ್ಯಾಶ್ ಪೋರ್ಟ್, ರುಪೇ ವೇ, ಲೋನ್ ಕ್ಯೂಬ್, ವಾವ್ ರೂಪಾಯಿ, ಸ್ಮಾರ್ಟ್ ವಾಲೆಟ್, ಜೈಂಟ್ ವಾಲೆಟ್, ಹೈ ರೂಪಾಯಿ, ಸ್ವಿಫ್ಟ್ ರೂಪಾಯಿ, ವಾಲೆಟ್‌ವಿನ್, ಫಿಶ್‌ಕ್ಲಬ್, ಯೆಹ್‌ಕ್ಯಾಶ್, ಇಮ್ ಲೋನ್, ಗ್ರೋಟ್ರೀ, ಮ್ಯಾಜಿಕ್ ಬ್ಯಾಲೆನ್ಸ್, ಯೋಕಾಶ್, ಫಾರ್ಚೂನ್ ಟ್ರೀ, ಸೂಪರ್‌ಕಾಯಿನ್, ರೆಡ್ ಮ್ಯಾಜಿಕ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿರಿ: ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಪೊಲೀಸರು ಕನಿಷ್ಠ 51 ಮೊಬೈಲ್ ಫೋನ್‌ಗಳು, 25 ಹಾರ್ಡ್ ಡಿಸ್ಕ್‌ಗಳು, ಒಂಬತ್ತು ಲ್ಯಾಪ್‌ಟಾಪ್‌ಗಳು, 19 ಡೆಬಿಟ್ ಕಾರ್ಡ್‌ಗಳು/ಕ್ರೆಡಿಟ್ ಕಾರ್ಡ್‌ಗಳು, ಮೂರು ಕಾರುಗಳು ಮತ್ತು ₹ 4 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಚೀನಾದ ಪ್ರಜೆಗಳ ಸೂಚನೆ ಮೇರೆಗೆ ಈ ದಂಧೆ ನಡೆಸಲಾಗಿದೆ ಎಂದು ಬಂಧಿತರು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಕೆಲವು ಚೀನೀ ಪ್ರಜೆಗಳನ್ನು ಗುರುತಿಸಿದ್ದಾರೆ. ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಪೊಲೀಸರು ತಮ್ಮ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಈ ದಂಧೆಕೋರರು ತಮ್ಮ ರಿಕವರಿ ಕಾಲ್ ಸೆಂಟರ್‌ಗಳನ್ನು ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಇಲ್ಲಿಯವರೆಗೆ ₹ 500 ಕೋಟಿಗೂ ಹೆಚ್ಚು ಹಣವನ್ನು ಚೀನಾ ಪ್ರಜೆಗಳು ಕಬಳಿಸಿದ್ದಾರೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...