Homeಮುಖಪುಟತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

ತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

- Advertisement -
- Advertisement -

ಚನ್ನೈನ ನೆರಮನೆಯ ಮಹಿಳೆಗೆ ತೊಂದರೆ ಕೊಡುವ ದೃಷ್ಟಿಯಿಂದ ಮನೆ ಮುಂದೆ ಕಸ ಬಿಡಾಡುವ, ಮೂತ್ರ ಮಾಡುವ ಮೂಲಕ ಅಸಹ್ಯಕರವಾಗಿ ಕಿರುಕುಳ ನೀಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ವಿರುದ್ಧ ಚನ್ನೈ ಪೊಲೀಸರು ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತ ಮಹಿಳೆಯು ದೂರು ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಸಾಕಷ್ಟು ಜನರು ಒತ್ತಡ ತಂದಿದ್ದಾರೆಂಬ ಆರೋಪ ಕೇಳಿಬಂದಿದೆ.

ಶನಿವಾರ ಸಂಜೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ತನ್ನ ಕೃತ್ಯಕ್ಕಾಗಿ ಕ್ಷಮೆ ಕೇಳಿದ್ದಾರೆ. ಹಾಗಾಗಿ ಕೇಸ್ ವಾಪಸ್ ಪಡೆಯಬೇಕು, ಈ ವಿಚಾರದಲ್ಲಿ ಮುಂದುವರೆಯಬಾರದು ಎಂದು ಅಪಾರ್ಟ್‌ಮೆಂಟ್‌ನ ಹಲವು ಜನರು ಒತ್ತಡ ತಂದಿದ್ದಾರೆ ಎಂದು ಆ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.

ಪ್ರಕರಣ ವಾಪಸ್ ಪಡೆದಿರುವ ಬಗ್ಗೆ ಚನ್ನೈ ಪೊಲೀಸರು ಸ್ಪಷ್ಟಪಡಿಸಿದ್ದು, ಪ್ರಕರಣ ದಾಖಲಾಗಿದ್ದರಿಂದ ತನಿಖೆ ನಡೆಸುತ್ತಿದ್ದೆವು ಎಂದು ತಿಳಿಸಿದ್ದಾರೆ. ತನ್ನ ಮನೆಯ ಮುಂದೆ ಕಸ ಬಿಸಾಡುವ, ಮೂತ್ರ ಮಾಡುವ ಮೂಲಕ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಸಿಸಿಟಿವಿ ದೃಶ್ಯಾವಳಿಗಳ ಸಾಕ್ಷಿ ಸಮೇತ ಜುಲೈ 11 ರಂದು 62 ವರ್ಷದ ಮಹಿಳೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಜುಲೈ 25ರಂದು ಪ್ರಕರಣ ದಾಖಲಿಸಿದ್ದರು. ತದನಂತರ ಕೆಲವೇ ಗಂಟೆಗಳಲ್ಲಿ ದೂರು ವಾಪಸ್ ಪಡೆಯಲಾಗಿದೆ.

ಅಪಾರ್ಟ್‌ಮೆಂಟ್‌ನ ಹಲವರು ದೂರು ಹಿಂಪಡೆಯಲು ಒತ್ತಾಯಿಸಿದ್ದರು. ಆತನ ಕುಕೃತ್ಯಗಳ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಹಾಯ ಮಾಡಿದ್ದ ಒಬ್ಬರು ಮಾತ್ರ ಕೇಸಿನಲ್ಲಿ ಮುಂದುವರೆಯಿರಿ ಎಂದು ಹೇಳಿದ್ದರು. ಉಳಿದವರು ಸಾಕಷ್ಟು ಒತ್ತಡ ತಂದ ನಂತರ ಮತ್ತು ಆರೋಪಿಯೇ ಕ್ಷಮೆ ಕೇಳಿದ ನಂತರ ಅನಿವಾರ್ಯವಾಗಿ ದೂರನ್ನು ಹಿಂಪಡೆಯಬೇಕಾಯಿತು ಎಂದು ದೂರು ನೀಡುವಲ್ಲಿ ನೆರವಾದ ಮಹಿಳೆಯ ಸೋದರಳಿಯ ಬಾಲಾಜಿ ತಿಳಿಸಿದ್ದಾರೆ.

ಚೆನ್ನೈನ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಕ ಮತ್ತು ಶಸ್ತ್ರಚಿಕಿತ್ಸಾ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿರುವ ಸುಬ್ಬಯ್ಯ ವಿರುದ್ಧ ಆಡಂಬಕ್ಕಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸೆಕ್ಷನ್ 271 (ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪ), ಸೆಕ್ಷನ್ 427 (ಐವತ್ತು ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿಗೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಹಿಳೆಗೆ ಸೇರಿದ್ದ ಕಾರು ಪಾರ್ಕಿಂಗ್ ಜಾಗದಲ್ಲಿ ಸುಬ್ಬಯ್ಯ ತನ್ನ ಕಾರನ್ನು ಪಾರ್ಕ್ ಮಾಡುತ್ತಿದ್ದರು. ಸ್ವಲ್ಪ ತಿಂಗಳುಗಳ ನಂತರ ಆ ಜಾಗಕ್ಕೆ ಮಾಸಿಕ 1500 ರೂ ಬಾಡಿಗೆ ವಿಧಿಸಲು ಆ ಮಹಿಳೆ ಮುಂದಾಗಿದ್ದರು. ಇದರಿಂದ ಕೋಪಗೊಂಡಿದ್ದ ಸುಬ್ಬಯ್ಯ ಆ ಜಾಗ ತನ್ನದು ಎಂದು ವಾದ ಮಾಡಿದ್ದರು ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ ನಂತರ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ, ಕಸ ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿತ್ತು. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಆತನನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಕುರಿತು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ShameOnABVP ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿತ್ತು.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿತ್ತು.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...