Homeಮುಖಪುಟತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

ತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

- Advertisement -
- Advertisement -

ಚನ್ನೈನ ನೆರಮನೆಯ ಮಹಿಳೆಗೆ ತೊಂದರೆ ಕೊಡುವ ದೃಷ್ಟಿಯಿಂದ ಮನೆ ಮುಂದೆ ಕಸ ಬಿಡಾಡುವ, ಮೂತ್ರ ಮಾಡುವ ಮೂಲಕ ಅಸಹ್ಯಕರವಾಗಿ ಕಿರುಕುಳ ನೀಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ವಿರುದ್ಧ ಚನ್ನೈ ಪೊಲೀಸರು ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತ ಮಹಿಳೆಯು ದೂರು ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಸಾಕಷ್ಟು ಜನರು ಒತ್ತಡ ತಂದಿದ್ದಾರೆಂಬ ಆರೋಪ ಕೇಳಿಬಂದಿದೆ.

ಶನಿವಾರ ಸಂಜೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ತನ್ನ ಕೃತ್ಯಕ್ಕಾಗಿ ಕ್ಷಮೆ ಕೇಳಿದ್ದಾರೆ. ಹಾಗಾಗಿ ಕೇಸ್ ವಾಪಸ್ ಪಡೆಯಬೇಕು, ಈ ವಿಚಾರದಲ್ಲಿ ಮುಂದುವರೆಯಬಾರದು ಎಂದು ಅಪಾರ್ಟ್‌ಮೆಂಟ್‌ನ ಹಲವು ಜನರು ಒತ್ತಡ ತಂದಿದ್ದಾರೆ ಎಂದು ಆ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.

ಪ್ರಕರಣ ವಾಪಸ್ ಪಡೆದಿರುವ ಬಗ್ಗೆ ಚನ್ನೈ ಪೊಲೀಸರು ಸ್ಪಷ್ಟಪಡಿಸಿದ್ದು, ಪ್ರಕರಣ ದಾಖಲಾಗಿದ್ದರಿಂದ ತನಿಖೆ ನಡೆಸುತ್ತಿದ್ದೆವು ಎಂದು ತಿಳಿಸಿದ್ದಾರೆ. ತನ್ನ ಮನೆಯ ಮುಂದೆ ಕಸ ಬಿಸಾಡುವ, ಮೂತ್ರ ಮಾಡುವ ಮೂಲಕ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಸಿಸಿಟಿವಿ ದೃಶ್ಯಾವಳಿಗಳ ಸಾಕ್ಷಿ ಸಮೇತ ಜುಲೈ 11 ರಂದು 62 ವರ್ಷದ ಮಹಿಳೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಜುಲೈ 25ರಂದು ಪ್ರಕರಣ ದಾಖಲಿಸಿದ್ದರು. ತದನಂತರ ಕೆಲವೇ ಗಂಟೆಗಳಲ್ಲಿ ದೂರು ವಾಪಸ್ ಪಡೆಯಲಾಗಿದೆ.

ಅಪಾರ್ಟ್‌ಮೆಂಟ್‌ನ ಹಲವರು ದೂರು ಹಿಂಪಡೆಯಲು ಒತ್ತಾಯಿಸಿದ್ದರು. ಆತನ ಕುಕೃತ್ಯಗಳ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಹಾಯ ಮಾಡಿದ್ದ ಒಬ್ಬರು ಮಾತ್ರ ಕೇಸಿನಲ್ಲಿ ಮುಂದುವರೆಯಿರಿ ಎಂದು ಹೇಳಿದ್ದರು. ಉಳಿದವರು ಸಾಕಷ್ಟು ಒತ್ತಡ ತಂದ ನಂತರ ಮತ್ತು ಆರೋಪಿಯೇ ಕ್ಷಮೆ ಕೇಳಿದ ನಂತರ ಅನಿವಾರ್ಯವಾಗಿ ದೂರನ್ನು ಹಿಂಪಡೆಯಬೇಕಾಯಿತು ಎಂದು ದೂರು ನೀಡುವಲ್ಲಿ ನೆರವಾದ ಮಹಿಳೆಯ ಸೋದರಳಿಯ ಬಾಲಾಜಿ ತಿಳಿಸಿದ್ದಾರೆ.

ಚೆನ್ನೈನ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಕ ಮತ್ತು ಶಸ್ತ್ರಚಿಕಿತ್ಸಾ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿರುವ ಸುಬ್ಬಯ್ಯ ವಿರುದ್ಧ ಆಡಂಬಕ್ಕಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸೆಕ್ಷನ್ 271 (ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪ), ಸೆಕ್ಷನ್ 427 (ಐವತ್ತು ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿಗೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಹಿಳೆಗೆ ಸೇರಿದ್ದ ಕಾರು ಪಾರ್ಕಿಂಗ್ ಜಾಗದಲ್ಲಿ ಸುಬ್ಬಯ್ಯ ತನ್ನ ಕಾರನ್ನು ಪಾರ್ಕ್ ಮಾಡುತ್ತಿದ್ದರು. ಸ್ವಲ್ಪ ತಿಂಗಳುಗಳ ನಂತರ ಆ ಜಾಗಕ್ಕೆ ಮಾಸಿಕ 1500 ರೂ ಬಾಡಿಗೆ ವಿಧಿಸಲು ಆ ಮಹಿಳೆ ಮುಂದಾಗಿದ್ದರು. ಇದರಿಂದ ಕೋಪಗೊಂಡಿದ್ದ ಸುಬ್ಬಯ್ಯ ಆ ಜಾಗ ತನ್ನದು ಎಂದು ವಾದ ಮಾಡಿದ್ದರು ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ ನಂತರ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ, ಕಸ ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿತ್ತು. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಆತನನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಕುರಿತು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ShameOnABVP ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿತ್ತು.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿತ್ತು.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...