Homeಮುಖಪುಟತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

ತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

- Advertisement -
- Advertisement -

ಚನ್ನೈನ ನೆರಮನೆಯ ಮಹಿಳೆಗೆ ತೊಂದರೆ ಕೊಡುವ ದೃಷ್ಟಿಯಿಂದ ಮನೆ ಮುಂದೆ ಕಸ ಬಿಡಾಡುವ, ಮೂತ್ರ ಮಾಡುವ ಮೂಲಕ ಅಸಹ್ಯಕರವಾಗಿ ಕಿರುಕುಳ ನೀಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ವಿರುದ್ಧ ಚನ್ನೈ ಪೊಲೀಸರು ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತ ಮಹಿಳೆಯು ದೂರು ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಸಾಕಷ್ಟು ಜನರು ಒತ್ತಡ ತಂದಿದ್ದಾರೆಂಬ ಆರೋಪ ಕೇಳಿಬಂದಿದೆ.

ಶನಿವಾರ ಸಂಜೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ತನ್ನ ಕೃತ್ಯಕ್ಕಾಗಿ ಕ್ಷಮೆ ಕೇಳಿದ್ದಾರೆ. ಹಾಗಾಗಿ ಕೇಸ್ ವಾಪಸ್ ಪಡೆಯಬೇಕು, ಈ ವಿಚಾರದಲ್ಲಿ ಮುಂದುವರೆಯಬಾರದು ಎಂದು ಅಪಾರ್ಟ್‌ಮೆಂಟ್‌ನ ಹಲವು ಜನರು ಒತ್ತಡ ತಂದಿದ್ದಾರೆ ಎಂದು ಆ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.

ಪ್ರಕರಣ ವಾಪಸ್ ಪಡೆದಿರುವ ಬಗ್ಗೆ ಚನ್ನೈ ಪೊಲೀಸರು ಸ್ಪಷ್ಟಪಡಿಸಿದ್ದು, ಪ್ರಕರಣ ದಾಖಲಾಗಿದ್ದರಿಂದ ತನಿಖೆ ನಡೆಸುತ್ತಿದ್ದೆವು ಎಂದು ತಿಳಿಸಿದ್ದಾರೆ. ತನ್ನ ಮನೆಯ ಮುಂದೆ ಕಸ ಬಿಸಾಡುವ, ಮೂತ್ರ ಮಾಡುವ ಮೂಲಕ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಸಿಸಿಟಿವಿ ದೃಶ್ಯಾವಳಿಗಳ ಸಾಕ್ಷಿ ಸಮೇತ ಜುಲೈ 11 ರಂದು 62 ವರ್ಷದ ಮಹಿಳೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಜುಲೈ 25ರಂದು ಪ್ರಕರಣ ದಾಖಲಿಸಿದ್ದರು. ತದನಂತರ ಕೆಲವೇ ಗಂಟೆಗಳಲ್ಲಿ ದೂರು ವಾಪಸ್ ಪಡೆಯಲಾಗಿದೆ.

ಅಪಾರ್ಟ್‌ಮೆಂಟ್‌ನ ಹಲವರು ದೂರು ಹಿಂಪಡೆಯಲು ಒತ್ತಾಯಿಸಿದ್ದರು. ಆತನ ಕುಕೃತ್ಯಗಳ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಹಾಯ ಮಾಡಿದ್ದ ಒಬ್ಬರು ಮಾತ್ರ ಕೇಸಿನಲ್ಲಿ ಮುಂದುವರೆಯಿರಿ ಎಂದು ಹೇಳಿದ್ದರು. ಉಳಿದವರು ಸಾಕಷ್ಟು ಒತ್ತಡ ತಂದ ನಂತರ ಮತ್ತು ಆರೋಪಿಯೇ ಕ್ಷಮೆ ಕೇಳಿದ ನಂತರ ಅನಿವಾರ್ಯವಾಗಿ ದೂರನ್ನು ಹಿಂಪಡೆಯಬೇಕಾಯಿತು ಎಂದು ದೂರು ನೀಡುವಲ್ಲಿ ನೆರವಾದ ಮಹಿಳೆಯ ಸೋದರಳಿಯ ಬಾಲಾಜಿ ತಿಳಿಸಿದ್ದಾರೆ.

ಚೆನ್ನೈನ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಕ ಮತ್ತು ಶಸ್ತ್ರಚಿಕಿತ್ಸಾ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿರುವ ಸುಬ್ಬಯ್ಯ ವಿರುದ್ಧ ಆಡಂಬಕ್ಕಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸೆಕ್ಷನ್ 271 (ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪ), ಸೆಕ್ಷನ್ 427 (ಐವತ್ತು ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿಗೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಹಿಳೆಗೆ ಸೇರಿದ್ದ ಕಾರು ಪಾರ್ಕಿಂಗ್ ಜಾಗದಲ್ಲಿ ಸುಬ್ಬಯ್ಯ ತನ್ನ ಕಾರನ್ನು ಪಾರ್ಕ್ ಮಾಡುತ್ತಿದ್ದರು. ಸ್ವಲ್ಪ ತಿಂಗಳುಗಳ ನಂತರ ಆ ಜಾಗಕ್ಕೆ ಮಾಸಿಕ 1500 ರೂ ಬಾಡಿಗೆ ವಿಧಿಸಲು ಆ ಮಹಿಳೆ ಮುಂದಾಗಿದ್ದರು. ಇದರಿಂದ ಕೋಪಗೊಂಡಿದ್ದ ಸುಬ್ಬಯ್ಯ ಆ ಜಾಗ ತನ್ನದು ಎಂದು ವಾದ ಮಾಡಿದ್ದರು ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ ನಂತರ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ, ಕಸ ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿತ್ತು. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಆತನನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಕುರಿತು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ShameOnABVP ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿತ್ತು.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿತ್ತು.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...