Homeಮುಖಪುಟ`ಎಫ್.ಐ.ಆರ್. ದಾಖಲಾಗಿದೆ, ಮನವಿ ಈಡೇರಿದೆ’: ಕುಸ್ತಿಪಟುಗಳ ಅರ್ಜಿ ತೆರವುಗೊಳಿಸಿದ ಸುಪ್ರೀಂಕೋರ್ಟ್

`ಎಫ್.ಐ.ಆರ್. ದಾಖಲಾಗಿದೆ, ಮನವಿ ಈಡೇರಿದೆ’: ಕುಸ್ತಿಪಟುಗಳ ಅರ್ಜಿ ತೆರವುಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತೆರವುಗೊಳಿಸಿರುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ನೋಂದಣಿ ಮಾಡಬೇಕೆಂಬುದು ಕುಸ್ತಿಪಟುಗಳ ಮನವಿಯ ಮುಖ್ಯ ಉದ್ದೇಶವಾಗಿತ್ತು.

“ಈ ಪ್ರಕ್ರಿಯೆಗಳ ವ್ಯಾಪ್ತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಈ ಹಂತದಲ್ಲಿ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸುತ್ತೇವೆ. ಅರ್ಜಿದಾರರು ಬೇರೇನಾದರೂ ಬಯಸಿದರೆ, ಅವರು ಮ್ಯಾಜಿಸ್ಟ್ರೇಟ್ ಅಥವಾ ಅದರ ಅಧಿಕಾರ ವ್ಯಾಪ್ತಿಯಲ್ಲಿರುವ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು” ಎಂದು ಸಿಜೆಐ ಡಿವೈ ಚಂದ್ರಚೂಡ್ ಸೂಚಿಸಿದ್ದಾರೆ.

ಅಪ್ರಾಪ್ತ ಸಂತ್ರಸ್ತೆ ಸೇರಿದಂತೆ ಏಳು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಮುಖ ಕುಸ್ತಿಪಟುಗಳು ಹಲವು ದಿನಗಳಿಂದ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋರ್ಟ್ ನಿರ್ದೇಶನದಂತೆ ದೂರುದಾರರಿಗೆ ಭದ್ರತೆ ಒದಗಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

“ಅಪ್ರಾಪ್ತ ದೂರುದಾರರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ. ಇತರ ದೂರುದಾರರಿಗೆ ಬಂದಿರುವ ಬೆದರಿಕೆಯ ಮೌಲ್ಯಮಾಪನ ನಡೆಸಲಾಗಿದೆ. ಮೌಲ್ಯಮಾಪನದ ಪ್ರಕಾರ ಯಾವುದೇ ಬೆದರಿಕೆ ಇಲ್ಲ. ಆದರೆ ಅವರಿಗೆ ಭದ್ರತೆ ಒದಗಿಸುವುದು ಸಮಂಜಸವೆಂದು ಕಂಡುಬಂದಿದೆ. ಎಲ್ಲಾ ದೂರುದಾರರಿಗೆ ಭದ್ರತೆ ಒದಗಿಸಲಾಗಿದೆ’’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿದೆ ಮತ್ತು ದೂರುದಾರರನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ದೂರುದಾರರ ಪರ ವಕೀಲರಾದ ಹಿರಿಯ ವಕೀಲ ನರೇಂದ್ರ ಹೂಡಾ ಅವರು ಪ್ರತಿಕ್ರಿಯಿಸಿ, “ಎಫ್‌ಐಆರ್ ದಾಖಲಿಸುವಲ್ಲಿ ಮತ್ತು ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ’’ ಎಂದು ಆರೋಪಿಸಿದ್ದಾರೆ.

‘’ಟಿ.ವಿ. ಚಾನೆಲ್ಗಳಲ್ಲಿ ಆರೋಪಿಯು ದೂರುದಾರರ ಹೆಸರು ಬಹಿರಂಗಪಡಿಸಿದ್ದಾನೆ. ಇದು ಕಾನೂನಿಗೆ ವಿರುದ್ಧವಾಗಿದೆ’’ ಎಂದು ಅವರು ವಾದಿಸಿದ್ದಾರೆ.

ದೆಹಲಿ ಪೊಲೀಸರ ನಡವಳಿಕೆಯಿಂದ ಬೇಸತ್ತಿರುವ ದೂರುದಾರರು, ಸುಪ್ರೀಂ ಪೀಠವೇ ತನಿಖೆಯನ್ನು ಮೇಲ್ವಿಚಾರಣೆ ಮಾಡುವಂತೆ ಕೋರಿದರು. ಆದರೆ ಪೀಠವು ಅವರ ಮನವಿಯನ್ನು ತಿರಸ್ಕರಿಸಿತು, ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಹೋಗಬಹುದು ಎಂದು ಸ್ಪಷ್ಟಪಡಿಸಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ತೆರಳಿದ ನಂತರ, ದೆಹಲಿ ಪೊಲೀಸರು ಏಪ್ರಿಲ್ 28 ರಂದು ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ನಂತರ ಪೊಲೀಸರು ಆತನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದರು ಮತ್ತು ಎಫ್‌ಐಆರ್‌ಗಳ ಒಂದು ಪ್ರತಿಯನ್ನು ಕುಸ್ತಿಪಟುಗಳಿಗೆ ಹಸ್ತಾಂತರಿಸಲಾಯಿತು.

ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪೊಲೀಸ್ ಉಪ ಆಯುಕ್ತ (ನವದೆಹಲಿ) ಪ್ರಣವ್ ತಯಾಲ್, “ಮೊದಲನೆಯದು ಅಪ್ರಾಪ್ತ ಸಂತ್ರಸ್ತೆಯ ಆರೋಪಗಳಿಗೆ ಸಂಬಂಧಿಸಿದೆ, ಇದನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ಮತ್ತು ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಜೊತೆಯಲ್ಲಿ ದಾಖಲಿಸಲಾಗಿದೆ’’ ಎಂದಿದ್ದಾರೆ.

ಮುಂದುವರಿದು, “ಎರಡನೇ ಎಫ್‌ಐಆರ್ ಅನ್ನು ಇತರ, ವಯಸ್ಕ ದೂರುದಾರರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲಿಸಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ  ಕ್ರಮ ಜರುಗಿಸಲಾಗಿದೆ’’ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...