Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...