Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...