Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...