Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...