Homeಅಂತರಾಷ್ಟ್ರೀಯಹನ್ನೆರಡು ಕೋಟಿ ಖಾಸಗಿ ಮಾಹಿತಿ ಹೊಂದಿರುವ FaceApp! ನಿಮ್ಮ ಮಾಹಿತಿ ಸೋರಿಕೆಗೆ ನಿಮ್ಮದೇ ಒಪ್ಪಿಗೆ!

ಹನ್ನೆರಡು ಕೋಟಿ ಖಾಸಗಿ ಮಾಹಿತಿ ಹೊಂದಿರುವ FaceApp! ನಿಮ್ಮ ಮಾಹಿತಿ ಸೋರಿಕೆಗೆ ನಿಮ್ಮದೇ ಒಪ್ಪಿಗೆ!

- Advertisement -
- Advertisement -

ಫೇಸ್‌ಬುಕ್, ಆ ಬುಕ್, ಈ ಬುಕ್ ಎಂದೆಲ್ಲಾ ನೋಡಿದವರು ನೀವು. ನಿಮ್ಮ ಫೇಸನ್ನೇ ಬದಲಿಸುವ FaceApp ಬಂದಿದೆ. ಹೌದು! ನಿಮ್ಮ ಮುಖವನ್ನೇ ಅದು ನಿಮಗೆ ಬೇಕೆಂದಂತೆ ಬದಲಿಸಿ ಕೊಡುತ್ತದೆ. ನಿಮ್ಮಮುಖವನ್ನು ಅದು ಗಂಡಸರಾದರೆ ಗಡ್ಡ ಇಟ್ಟೋ ಇಲ್ಲದೆಯೋ, ಹಿಂದೆ ಇದ್ದಂತೆಯೋ ಮುಂದೆ ಆಗುವಂತೆಯೋ ತೋರಿಸುತ್ತದೆ. ಗಡ್ಡವನ್ನು ಬೇಕೆಂದರೆ ಬಿಳಿಮಾಡಬಹುದು. ಹೆಂಗಸರಾದರೂ ಅಷ್ಟೇ! ಬೇಕೆಂದರೆ ನಿಮ್ಮ ಲಿಂಗ ಪರಿವರ್ತನೆಯನ್ನೂ ಮಾಡುತ್ತದೆ ಈ App! ‘ವಾಟ್ ಫನ್’ ಅಲ್ಲವೇ? ತಮಾಷೆಯಾಗಿದೆ. ನೆಟ್ಟಿಗರ ಭಾಷೆಯಲ್ಲಿ ಕೂಲ್! ಇದೀಗ ಇದು ವೈರಲ್ ಆಗಿ, ಸೋಷಿಯಲ್ ಟ್ರೆಂಡ್ ಕೂಡಾ ಆಗಿದೆ. ಇದರಲ್ಲಿ ಇರುವ ಅಪಾಯಗಳ ಬಗ್ಗೆ ಎಚ್ಚರಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇವೆ.

ಈ ಹೊಸ FaceApp ನೀವು ಕೂಡಾ ಈಗಾಗಲೇ ಬಳಸಿರಬಹುದು. ಫೇಸ್‌ಬುಕ್‌ನಲ್ಲಿ ನಿಮಗೆ ಪರಿಚಿತವಾದ ಬುದ್ದಿವಂತ ಮುಖಗಳು  ‘ನಲ್ವತ್ತು ವರ್ಷಗಳ ನಂತರ ನಾನು’ ಎಂದು ಹಾಕಿಕೊಂಡಿರುವುದನ್ನು ಈಗಾಗಲೇ ಕಂಡಿರಬಹುದು. ಆದರೆ, ಇದು ಕಣ್ಣಿಗೆ ಕಾಣುವಷ್ಟು ಮುಗ್ಧ App ಅಲ್ಲ. ಇದೊಂದು ರಷ್ಯಾ ಮೂಲದ ವಂಚಕ App ಆಗಿದ್ದು, ಇದನ್ನು ಡೌನ್‌ಲೋಡ್ ಮಾಡುವಾಗ ಎಲ್ಲಾ Appಗಳಲ್ಲಿ ಇರುವಂತೆ ನೀವೊಂದು ಬಳಕೆದಾರರ ಒಪ್ಪಂದಕ್ಕೆ ಇಲೆಕ್ಟ್ರಾನಿಕ್ ರೂಪದಲ್ಲಿ ಸಹಿ ಮಾಡಿರುತ್ತೀರಿ. ಸಾಮಾನ್ಯವಾಗಿ ಅಷ್ಟು ಉದ್ದದ, ಚಿಕ್ಕ ಅಕ್ಷರಗಳ, ಕಾನೂನಿನ ಭಾಷೆಯಲ್ಲಿರುವ ಇಂತಹಾ ಒಪ್ಪಂದಗಳನ್ನು ಯಾರೂ ಓದಲು ಹೋಗುವುದಿಲ್ಲ. ‘ಐ ಎಗ್ರೀ’ ಬಟನ್ ಒತ್ತಿ ಬಿಡುತ್ತೀರಿ. ಸಾಮಾನ್ಯವಾಗಿ, ಇದರಲ್ಲಿ Face ಎಂಬ ಪದ ಇರುವುದರಿಂದ ಇದು ಪೂರ್ತಿಯಾಗಿ ಅಲ್ಲವಾದರೂ, ಸಾಕಷ್ಟು ವಿಶ್ವಾಸಾರ್ಹವಾದ ಫೇಸ್‌ಬುಕ್‌ನದ್ದೇ ಒಂದು ಸಹ ಉತ್ಪನ್ನ ಇರಬಹುದೆಂದು ಜನರು ನಂಬುವ ಸಾಧ್ಯತೆ ಹೆಚ್ಚು. ಆದರೆ, ಇಲ್ಲಿ ಹಾಗೆ ಮಾಡುವುದರಿಂದ ನೀವು ನಿಮ್ಮ ಚಿತ್ರಗಳು, ಹೆಸರುಗಳು ಮತ್ತಿತರ ಮಾಹಿತಿಗಳನ್ನು ಈ ರಷ್ಯನ್ ಕಂಪೆನಿಗೆ ಅದು ಇಚ್ಛಿಸಿದ ರೀತಿಯಲ್ಲಿ ಬಳಸಿಕೊಳ್ಳುವ ಅಧಿಕಾರವನ್ನು ಧಾರೆಯೆರೆದು ಕೊಡುತ್ತೀರಿ. ನಿಮ್ಮ ಚಿತ್ರವನ್ನು ‘ಇಚ್ಛಿಸಿದ ರೀತಿ’ ಬಳಸಿಕೊಳ್ಳುವುದೆಂದರೆ ಏನೂ ಆಗಬಹುದು ಊಹಿಸಿ ನೋಡಿ. ಅದನ್ನು ನಗ್ನವಾಗಿ ಬಳಸಿ ದುರುಪಯೋಗಪಡಿಸಿಕೊಂಡರೂ ನೀವು ಮಾತಾಡುವಂತಿಲ್ಲ. ಮತ್ತೆ ನೀವು ಈ ಒಪ್ಪಂದದಿಂದ ಹಿಂದೆ ಸರಿಯುವಂತೆಯೂ ಇಲ್ಲ. ಫೇಸ್‌ಬುಕ್ ಮತ್ತು ಈ Appಗೆ ಸಂಬಂಧವೇ ಇಲ್ಲ.

ಇಲ್ಲಿರುವ ಕಾನೂನು ಭಾಷೆಯ ಬಳಕೆದಾರರ ಒಪ್ಪಂದವನ್ನು ಸ್ಥೂಲವಾಗಿ ಮತ್ತು ಸರಳವಾಗಿ ಹೀಗೆ ಅನುವಾದಿಸಲಾಗಿದೆ: ‘ನಿಮ್ಮ ಬಳಕೆದಾರ ಹೆಸರು, ಮಾಹಿತಿ, ಇತರ ಹೆಸರುಗಳನ್ನು ಪುನರುತ್ಪಾದಿಸಲು, ಬದಲಿಸಲು, ಬಳಸಲು, ಬಳಸಿಕೊಳ್ಳಲು, ಅನುವಾದಿಸಲು, ರೂಪಾಂತರಿಸಲು…ಈಗಿರುವ ಮತ್ತು ಮುಂದೆ ಅಭಿವೃದ್ಧಿಪಡಿಸಬಹುದಾದ ಎಲ್ಲಾ ರೀತಿಯ ವೇದಿಕೆಗಳಲ್ಲಿ, ಮಾಧ್ಯಮ ರೂಪಗಳಲ್ಲಿ…ವಿತರಿಸಲು, ಸಾರ್ವಜನಿಕವಾಗಿ ಪ್ರದರ್ಶಿಸಲು…ಯಾವುದೇ ಪರಿಹಾರ ಇಲ್ಲದೆ… ನಿರಂತರ, ಹಿಂತೆಗೆದುಕೊಳ್ಳಲಾಗದ, ಯಾವುದೇ ಪರಿಹಾರ ಇಲ್ಲದ, ಸಂಪೂರ್ಣ ಪಾವತಿ ಆಗಿರುವ, ವಿಶ್ವವ್ಯಾಪಿ, ವರ್ಗಾಯಿಸಬಹುದಾದ, ಉಪಗುತ್ತಿಗೆ ನೀಡಬಹುದಾದ ಪರವಾನಿಗೆಯನ್ನು ನೀವು FaceAppಗೆ ನೀಡಿರುತ್ತೀರಿ’.

ಇದರಿಂದ ನಿಮಗೆ ನೀವು ಯಾವ ರೀತಿಯ ಗುಲಾಮಿ ಒಪಂದಕ್ಕೆ ಸಹಿ ಹಾಕಿದ್ದೀರಿ ಅಥವಾ ಹಾಕಲಿದ್ದೀರಿ ಎಂಬುದು ಅರ್ಥವಾದೀತು. ಇಲ್ಲಿನ ಕಾನೂನು ಭಾಷೆಯ ಒಪ್ಪಂದವನ್ನು ಇಂಗ್ಲಿಷ್ ಭಾಷೆಯಲ್ಲಿ ಪ್ರಕಟಿಸಿದರೂ ಅದರ ವ್ಯಾಪಕತೆಯನ್ನು ಅರ್ಥ ಮಾಡಿಕೊಳ್ಳಲು ಸಾಮಾನ್ಯ ಜನರಿಗೆ ಸಾಧ್ಯವಿಲ್ಲ; ಅದಕ್ಕೆ ವಕೀಲರೇ ಬೇಕು.

ಇತ್ತೀಚೆಗೆ ಬಹಿರಂಗೊಂಡ ‘ಫೇಸ್‌ಬುಕ್-ಕ್ಯಾಂಬ್ರಿಜ್ ಅನಾಲಿಟಿಕಾ ಡಾಟಾ ಹಗರಣ’ವು ನಾವು ಇಂತಹಾ Appಗಳಿಗೆ ನೀಡುವ ಮಾಹಿತಿಗಳು ಸಂಪೂರ್ಣವಾಗಿ ಸುರಕ್ಷಿತವಲ್ಲ ಎಂಬುದನ್ನು ತಿಳಿಸಿಕೊಟ್ಟಿತು. ಅದಕ್ಕಾಗಿ ಫೇಸ್‌ಬುಕ್ ಬಹಿರಂಗ ಕ್ಷಮಾಪಣೆಯನ್ನೂ ಕೇಳಿತು.

ಹಿಂದೆಯೂ ಫೇಸ್‌ಬುಕ್‌ನಲ್ಲಿ ನಿಮ್ಮ ನೆಚ್ಚಿನ ಗೆಳೆಯರು ಯಾರು, ನೀವು ಯಾರನ್ನು ಹೋಲುತ್ತೀರಿ, ನೀವು ಹಾಗಿದ್ದರೆ ಹೇಗೆ, ಹೀಗಿದ್ದರೆ ಹೇಗೆ…  ಇತ್ಯಾದಿಯಾಗಿ ಹಲವಾರು Appಗಳು ಬಂದಿದ್ದವು. ಮಕ್ಕಳು, ಯುವಕರು ಬಿಡಿ, ಮಧ್ಯವಯಸ್ಕರೂ, ಮುದುಕರೂ ಮಕ್ಕಳನ್ನೂ ನಾಚಿಸುವ ಉತ್ಸಾಹದಲ್ಲಿ ಇದರಲ್ಲಿ ಪಾಲುಗೊಂಡಿದ್ದರು. ಸಾಮಾನ್ಯವಾಗಿ ಇಂತಹಾ Appಗಳು ನಿಮ್ಮ ಮಾಹಿತಿಯನ್ನು ಯಾವ ಉದ್ದೇಶಕ್ಕೆ ಬಳಸಲಾಗುತ್ತದೆ ಎಂದು ಹೇಳಿ, ಅದನ್ನು ಬಹಿರಂಗಪಡಿಸದಿರುವ ಒಪ್ಪಂದಕ್ಕೆ ಒಳಗಾಗುತ್ತವೆ. ಆದರೆ, ಇಲ್ಲಿ ಈ ಕಂಪೆನಿಯು ಅದೇ ರೀತಿ ಕಾಣುವ ಒಪ್ಪಂದದ ಮೂಲಕ ಜನರನ್ನು ವಂಚಿಸಿದೆ.

ನ್ಯೂಟ್ರಲ್ ನೆಟ್‌ವರ್ಕ್ ಟೆಕ್ನಾಲಜಿ ಎಂಬ ತಂತ್ರಜ್ಞಾನ ಬಳಸಿ ವಾಸ್ತವಕ್ಕೆ ಬಹಳಷ್ಟು ಹತ್ತಿರವಿರುವ ಚಿತ್ರಗಳನ್ನು ನೀಡುವ ಈ App, ರಷ್ಯಾದ ವೈರ್‌ಲೆಸ್ ಲ್ಯಾಬ್ ಎಂಬ ಸಂಸ್ಥೆ ಅಭಿವೃದ್ಧಿಪಡಿಸಿರುದಂತದ್ದು. ಈ ಸಂಸ್ಥೆ ಈಗಾಗಲೇ ಎರಡು ಬಾರಿ ಈ ಮಾಹಿತಿಗಳನ್ನು ಜನಾಂಗೀಯ ನಿಂದನೆಗೆ ಸಂಬಂಧಿಸಿ ಬಳಸುವುದರ ಮೂಲಕ ವಿವಾದಕ್ಕೆ ಒಳಗಾಗಿ ಕುಖ್ಯಾತಿ ಪಡೆದಿದೆ. ಇಂದು ಮಾಹಿತಿ ಮಾರುಕಟ್ಟೆಯು ಬಿಲಿಯನ್ ಡಾಲರ್ ಉದ್ದಿಮೆಯಾಗಿದ್ದು, ಬಂಡವಾಳಶಾಹಿಯು ಅದನ್ನು ಉತ್ಪನ್ನಗಳ ಮಾರಾಟಕ್ಕೆ, ಚುನಾವಣೆಗೆ, ತಂತ್ರಗಾರಿಕೆ ರೂಪಿಸಲು, ಜನರ ಅಭಿಪ್ರಾಯಗಳನ್ನು ಸೂಕ್ಷ್ಮವಾಗಿ ತನಗೆ ಬೇಕಾದಂತೆ ತಿದ್ದಲು ಬಳಸಿಕೊಳ್ಳುತ್ತದೆ.

ಇಂಟರ್ನೆಟ್ ಜಗತ್ತಿನಲ್ಲಿ ಯಾವುದಕ್ಕೂ ಮಿತಿ ಇಲ್ಲ. ಅಶ್ಲೀಲ ಚಿತ್ರಗಳು, ಹಿಂಸೆಯ ಕ್ರೂರ ಚಿತ್ರಗಳು, ಮಾನಸಿಕ ವಿಕೃತಿಯ ಚಿತ್ರಗಳು ಅತ್ಯುತ್ತಮ ಮಾಹಿತಿಗಳ ಜೊತೆಜೊತೆಗೇ ಸಿಗುತ್ತವೆ. ಬ್ಲೂ ವೇಲ್‌ನಂತಹಾ ಆಟಗಳು ಪ್ರಪಂಚದಾದ್ಯಂತ ಹಲವಾರು ಮುಗ್ಧ ಮಕ್ಕಳ ಪ್ರಾಣಕ್ಕೆ ಎರವಾದುದನ್ನು ಕಂಡಿದ್ದೇವೆ. ಇವತ್ತು ಹಲವು ಮಕ್ಕಳು ಪಬ್‌ಜೀಯಂತಹಾ ಆಟಗಳಿಗೆ ಗುಲಾಮರಾಗಿ ಹಿಂಸಾಪ್ರವೃತ್ತಿ ಬೆಳೆಸಿಕೊಂಡು, ಓದನ್ನು ನಿರ್ಲಕ್ಷಿಸುತ್ತಿರುವುದನ್ನು ಕಾಣಬಹುದು. ಈ ಆಟದ ಆನ್ಲೈನ್ ಸ್ಪರ್ಧೆಗಳೂ ನಡೆಯುತ್ತಿವೆ. ಓದುವಂತೆ ಹೇಳಿದರೆ, “ನನಗೊಂದು ಲ್ಯಾಪ್‌ಟಾಪ್, ಒಳ್ಳೆಯ ಇಂಟರ್ನೆಟ್ ಕನೆಕ್ಷನ್ ತೆಗೆದುಕೊಡಿ ಪಬ್ಜಿ ಯಲ್ಲಿ ಲಕ್ಷಾಂತರ ಸಂಪಾದಿಸಿಕೊಡುತ್ತೇನೆ” ಎಂದು ಹದಿಹರೆಯದ ಮಕ್ಕಳು ಹೆತ್ತವರಿಗೆ ಹೇಳುವಷ್ಟು ಮುಗ್ಧ ಹುಚ್ಚಾಟದ ತನಕ ಇದು ಮುಟ್ಟಿದೆ. ಮಕ್ಕಳು ಮಕ್ಕಳೇ! ಆದರೆ ಬೆಳೆದವರು, ಬುದ್ಧಿವಂತರೆಸಿಕೊಂಡವರೂ FaceAppನಂತಹ ವಂಚನೆಗೆ ಗುರಿಯಾಗುತ್ತಿರುವುದು ಆತಂಕದ ವಿಷಯ. ಇಡೀ ಇಂಟರ್ನೆಟ್ ವಿಷಯದಲ್ಲಿ ಒಂದು ಅಂತರರಾಷ್ಟ್ರೀಯ ಒಪ್ಪಂದ ಆಗಬೇಕಾದುದು ಅತ್ಯಗತ್ಯ. ಕ್ಯೂಬಾ ಈಗಾಗಲೇ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ.

ಅದಿರಲಿ, ಬಹಳಷ್ಟು ಭಾರತೀಯರು ಆಧಾರ್‌ ಕಾರ್ಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿರೋಧಕ್ಕೆ ಕಾರಣವೆಂದರೆ ಮಾಹಿತಿ ಸೋರಿಹೋಬಹುದು ಎಂಬುದು ಒಂದಾದರೆ, ಸರ್ವಾಧಿಕಾರಿ ಸರಕಾರವೊಂದು ಖಾಸಗಿತನದ ಹಕ್ಕುಗಳನ್ನು ಉಲ್ಲಂಘಿಸಿ ತನ್ನ ವಿರೋಧಿಗಳನ್ನು ಬಗ್ಗುಬಡಿಯಲು ಈ ಮಾಹಿತಿಗಳನ್ನು ಬಳಸಬಹುದು ಎಂಬುದು ಇನ್ನೊಂದು.
ಇತ್ತೀಚೆಗೆ ಡ್ರೈವಿಂಗ್ ಲೈಸನ್ಸ್‌ಗಾಗಿ ನೀಡಿದ ಮಾಹಿತಿಯನ್ನು ಸರಕಾರವೇ 20 ಕೋಟಿ ರೂ.ಗಳಂತೆ ಹಲವು ಕಂಪೆನಿಗಳಿಗೆ ಮಾರಿರುವ ಸುದ್ದಿ ಬಂದಿದೆ. ಬೇರೆ ದೇಶಗಳಲ್ಲಾಗಿದ್ದರೆ ದೊಡ್ಡ ಹಗರಣವಾಗಿ ಗದ್ದಲವಾಗುತ್ತಿತ್ತು.

ಹೀಗಿರುವಾಗ ನಾವಾಗಿಯೇ ಮೂರ್ಖತನದಿಂದಲೋ, ಅಜ್ಞಾನದಿಂದಲೋ ವಿದೇಶಿ ಸಂಸ್ಥೆಯೊಂದಕ್ಕೆ ನಮ್ಮ ಮಾಹಿತಿ ದುರುಪಯೋಗಕ್ಕೆ ಮುಕ್ತ ಅನುಮತಿ ನೀಡುವ ಗುಲಾಮಿ ಒಪ್ಪಂದಕ್ಕೆ ಸಹಿಹಾಕುತ್ತಿರುವುದು ನಾಚಿಕೆಗೇಡು. ಇನ್ನಾದರೂ ಯಾವುದೇ App ಡೌನ್ಲೋಡ್ ಮಾಡಿಕೊಳ್ಳುವ ಮೊದಲು ಕನಿಷ್ಟ ಮೇಲುಮೇಲಾದರೂ ಗ್ರಾಹಕ ಒಪ್ಪಂದವನ್ನು ಓದಿಕೊಳ್ಳೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...