Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಬಾಬ್ರಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಮುಗಿದ ಕೂಡಲೇ ಈ ಸಂದೇಶ ಹರಿದಾಡಿದ್ದು, ಹೊಸದಾಗಿ ನಿರ್ಮಿಸಲಾಗುವ ಆಸ್ಪತ್ರೆಗೆ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗುವುದು ಎಂದೂ ಸಹ ಹೇಳಲಾಗಿದೆ.

“ಬಾಬರೀ ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟ್ ನೀಡಿದ 5 ಎಕರೆ ಭೂಮಿಯಲ್ಲಿ ಬಾಬರಿ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ. AIIMS ನ ಮಾದರಿಯಲ್ಲಿ ನಿರ್ಮಾಣವಾಗುವ ಈ ಬಾಬರೀ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ನಿರ್ಧಾರ ಮಾಡಿದ ಬಾಬರೀ ಮಸೀದಿ ಟ್ರಸ್ಟಿಗಳ ನಿರ್ಧಾರ ನಿಜಕ್ಕೂ ಶ್ಲಾಘನೀಯವಾಗಿದೆ…” ಎಂದು ನೂರಾರು ಜನರು ಪೋಸ್ಟ್ ಮಾಡಿದ್ದಾರೆ.

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್:

ವಾಸ್ತವದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ನೀಡಲಾದ 5 ಎಕರೆ ಜಾಗದಲ್ಲಿ ಏನನ್ನು ನಿರ್ಮಿಸಬೇಕೆಂದು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ ಮಾಡಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಅಲ್ಲದೇ ಹಲವಾರು ಮಾಧ್ಯಮಗಳು ಅಲ್ಲಿ ಮಸೀದಿ, ಆಸ್ಪತ್ರೆ, ಗ್ರಂಥಾಲಯ ಮತ್ತು ಇಸ್ಲಾಂ ಬಗೆಗಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ವರದಿ ಮಾಡಿವೆ.

ಅಯೋಧ್ಯೆಯ ಆ 5 ಎಕರೆ ಜಾಗದಲ್ಲಿ ನಾವು ಆಸ್ಪತ್ರೆ ನಿರ್ಮಿಸಿ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸುತ್ತೇವೆ ಎಂಬುದು ಸುಳ್ಳು ಸುದ್ದಿ ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಯ್ಯದ್ ಮಹಮ್ಮದ್ ಶೋಯಬ್ ಇಂಡಿಯಾ ಟುಡೆಗೆ ತಿಳಿಸಿದ್ದಾರೆ.

ನಾವು ಅಲ್ಲಿ ಏನನ್ನು ನಿರ್ಮಿಸಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆಸ್ಪತ್ರೆ, ಮಸೀದಿ, ಗ್ರಂಥಾಲಯ, ಸಂಶೋಧನ ಕೇಂದ್ರ ನಿರ್ಮಿಸಬೇಕು ಎಂದು ಹಲವು ಸಲಹೆಗಳು ಬಂದಿವೆ. ಆದರೆ ನಾವಿನ್ನು ಅಂತಿಮ ನಿರ್ಧಾರ ಮಾಡಿಲ್ಲ ಎಂದು ಶೋಯಬ್ ತಿಳಿಸಿದ್ದಾರೆ.

ಸುನ್ನಿ ವಕ್ಫ್ ಬೋರ್ಡ್ ವತಿಯಿಂದ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಎಂಬ 15 ಜನರ ಸಮಿತಿ ಇತ್ತೀಚೆಗೆ ರಚನೆಯಾಗಿದೆ. ಅದು ಶೀಘ್ರದಲ್ಲೇ ಸಭೆ ಸೇರಿ ಆ ಜಾಗದಲ್ಲಿ ಏನನ್ನು ನಿರ್ಮಿಸಬೇಕು ಎಂದು ನಿರ್ಧರಿಸಲಿದೆ ಎನ್ನಲಾಗಿದೆ.

ಇನ್ನು ವೈರಲ್ ಆದ ಪೋಸ್ಟ್‌ನಲ್ಲಿನ ಚಿತ್ರಗಳಿಗೆ ಬಂದರೆ ಆಸ್ಪತ್ರೆಯ ಮಾದರಿ ಚಿತ್ರವು ಲಿಂಕ್ಡ್‌ಇನ್‌ ನಿಂದ ತೆಗೆದುಕೊಂಡ ಚಿತ್ರವಾಗಿದ್ದು ಅದಕ್ಕೆ ಬಾಬ್ರಿ ಹಾಸ್ಪಿಟಲ್ ಎಂದು ಫೋಟೊಶಾಪ್‌ ಮಾಡಿ ಬರೆಯಲಾಗಿದೆ.

ಒಟ್ಟಿನಲ್ಲಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಅಧಿಕೃತವಲ್ಲ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...