Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಬಾಬ್ರಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಮುಗಿದ ಕೂಡಲೇ ಈ ಸಂದೇಶ ಹರಿದಾಡಿದ್ದು, ಹೊಸದಾಗಿ ನಿರ್ಮಿಸಲಾಗುವ ಆಸ್ಪತ್ರೆಗೆ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗುವುದು ಎಂದೂ ಸಹ ಹೇಳಲಾಗಿದೆ.

“ಬಾಬರೀ ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟ್ ನೀಡಿದ 5 ಎಕರೆ ಭೂಮಿಯಲ್ಲಿ ಬಾಬರಿ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ. AIIMS ನ ಮಾದರಿಯಲ್ಲಿ ನಿರ್ಮಾಣವಾಗುವ ಈ ಬಾಬರೀ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ನಿರ್ಧಾರ ಮಾಡಿದ ಬಾಬರೀ ಮಸೀದಿ ಟ್ರಸ್ಟಿಗಳ ನಿರ್ಧಾರ ನಿಜಕ್ಕೂ ಶ್ಲಾಘನೀಯವಾಗಿದೆ…” ಎಂದು ನೂರಾರು ಜನರು ಪೋಸ್ಟ್ ಮಾಡಿದ್ದಾರೆ.

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್:

ವಾಸ್ತವದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ನೀಡಲಾದ 5 ಎಕರೆ ಜಾಗದಲ್ಲಿ ಏನನ್ನು ನಿರ್ಮಿಸಬೇಕೆಂದು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ ಮಾಡಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಅಲ್ಲದೇ ಹಲವಾರು ಮಾಧ್ಯಮಗಳು ಅಲ್ಲಿ ಮಸೀದಿ, ಆಸ್ಪತ್ರೆ, ಗ್ರಂಥಾಲಯ ಮತ್ತು ಇಸ್ಲಾಂ ಬಗೆಗಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ವರದಿ ಮಾಡಿವೆ.

ಅಯೋಧ್ಯೆಯ ಆ 5 ಎಕರೆ ಜಾಗದಲ್ಲಿ ನಾವು ಆಸ್ಪತ್ರೆ ನಿರ್ಮಿಸಿ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸುತ್ತೇವೆ ಎಂಬುದು ಸುಳ್ಳು ಸುದ್ದಿ ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಯ್ಯದ್ ಮಹಮ್ಮದ್ ಶೋಯಬ್ ಇಂಡಿಯಾ ಟುಡೆಗೆ ತಿಳಿಸಿದ್ದಾರೆ.

ನಾವು ಅಲ್ಲಿ ಏನನ್ನು ನಿರ್ಮಿಸಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆಸ್ಪತ್ರೆ, ಮಸೀದಿ, ಗ್ರಂಥಾಲಯ, ಸಂಶೋಧನ ಕೇಂದ್ರ ನಿರ್ಮಿಸಬೇಕು ಎಂದು ಹಲವು ಸಲಹೆಗಳು ಬಂದಿವೆ. ಆದರೆ ನಾವಿನ್ನು ಅಂತಿಮ ನಿರ್ಧಾರ ಮಾಡಿಲ್ಲ ಎಂದು ಶೋಯಬ್ ತಿಳಿಸಿದ್ದಾರೆ.

ಸುನ್ನಿ ವಕ್ಫ್ ಬೋರ್ಡ್ ವತಿಯಿಂದ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಎಂಬ 15 ಜನರ ಸಮಿತಿ ಇತ್ತೀಚೆಗೆ ರಚನೆಯಾಗಿದೆ. ಅದು ಶೀಘ್ರದಲ್ಲೇ ಸಭೆ ಸೇರಿ ಆ ಜಾಗದಲ್ಲಿ ಏನನ್ನು ನಿರ್ಮಿಸಬೇಕು ಎಂದು ನಿರ್ಧರಿಸಲಿದೆ ಎನ್ನಲಾಗಿದೆ.

ಇನ್ನು ವೈರಲ್ ಆದ ಪೋಸ್ಟ್‌ನಲ್ಲಿನ ಚಿತ್ರಗಳಿಗೆ ಬಂದರೆ ಆಸ್ಪತ್ರೆಯ ಮಾದರಿ ಚಿತ್ರವು ಲಿಂಕ್ಡ್‌ಇನ್‌ ನಿಂದ ತೆಗೆದುಕೊಂಡ ಚಿತ್ರವಾಗಿದ್ದು ಅದಕ್ಕೆ ಬಾಬ್ರಿ ಹಾಸ್ಪಿಟಲ್ ಎಂದು ಫೋಟೊಶಾಪ್‌ ಮಾಡಿ ಬರೆಯಲಾಗಿದೆ.

ಒಟ್ಟಿನಲ್ಲಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಅಧಿಕೃತವಲ್ಲ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...