Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಬಾಬ್ರಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಮುಗಿದ ಕೂಡಲೇ ಈ ಸಂದೇಶ ಹರಿದಾಡಿದ್ದು, ಹೊಸದಾಗಿ ನಿರ್ಮಿಸಲಾಗುವ ಆಸ್ಪತ್ರೆಗೆ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗುವುದು ಎಂದೂ ಸಹ ಹೇಳಲಾಗಿದೆ.

“ಬಾಬರೀ ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟ್ ನೀಡಿದ 5 ಎಕರೆ ಭೂಮಿಯಲ್ಲಿ ಬಾಬರಿ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ. AIIMS ನ ಮಾದರಿಯಲ್ಲಿ ನಿರ್ಮಾಣವಾಗುವ ಈ ಬಾಬರೀ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ನಿರ್ಧಾರ ಮಾಡಿದ ಬಾಬರೀ ಮಸೀದಿ ಟ್ರಸ್ಟಿಗಳ ನಿರ್ಧಾರ ನಿಜಕ್ಕೂ ಶ್ಲಾಘನೀಯವಾಗಿದೆ…” ಎಂದು ನೂರಾರು ಜನರು ಪೋಸ್ಟ್ ಮಾಡಿದ್ದಾರೆ.

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್:

ವಾಸ್ತವದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ನೀಡಲಾದ 5 ಎಕರೆ ಜಾಗದಲ್ಲಿ ಏನನ್ನು ನಿರ್ಮಿಸಬೇಕೆಂದು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ ಮಾಡಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಅಲ್ಲದೇ ಹಲವಾರು ಮಾಧ್ಯಮಗಳು ಅಲ್ಲಿ ಮಸೀದಿ, ಆಸ್ಪತ್ರೆ, ಗ್ರಂಥಾಲಯ ಮತ್ತು ಇಸ್ಲಾಂ ಬಗೆಗಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ವರದಿ ಮಾಡಿವೆ.

ಅಯೋಧ್ಯೆಯ ಆ 5 ಎಕರೆ ಜಾಗದಲ್ಲಿ ನಾವು ಆಸ್ಪತ್ರೆ ನಿರ್ಮಿಸಿ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸುತ್ತೇವೆ ಎಂಬುದು ಸುಳ್ಳು ಸುದ್ದಿ ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಯ್ಯದ್ ಮಹಮ್ಮದ್ ಶೋಯಬ್ ಇಂಡಿಯಾ ಟುಡೆಗೆ ತಿಳಿಸಿದ್ದಾರೆ.

ನಾವು ಅಲ್ಲಿ ಏನನ್ನು ನಿರ್ಮಿಸಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆಸ್ಪತ್ರೆ, ಮಸೀದಿ, ಗ್ರಂಥಾಲಯ, ಸಂಶೋಧನ ಕೇಂದ್ರ ನಿರ್ಮಿಸಬೇಕು ಎಂದು ಹಲವು ಸಲಹೆಗಳು ಬಂದಿವೆ. ಆದರೆ ನಾವಿನ್ನು ಅಂತಿಮ ನಿರ್ಧಾರ ಮಾಡಿಲ್ಲ ಎಂದು ಶೋಯಬ್ ತಿಳಿಸಿದ್ದಾರೆ.

ಸುನ್ನಿ ವಕ್ಫ್ ಬೋರ್ಡ್ ವತಿಯಿಂದ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಎಂಬ 15 ಜನರ ಸಮಿತಿ ಇತ್ತೀಚೆಗೆ ರಚನೆಯಾಗಿದೆ. ಅದು ಶೀಘ್ರದಲ್ಲೇ ಸಭೆ ಸೇರಿ ಆ ಜಾಗದಲ್ಲಿ ಏನನ್ನು ನಿರ್ಮಿಸಬೇಕು ಎಂದು ನಿರ್ಧರಿಸಲಿದೆ ಎನ್ನಲಾಗಿದೆ.

ಇನ್ನು ವೈರಲ್ ಆದ ಪೋಸ್ಟ್‌ನಲ್ಲಿನ ಚಿತ್ರಗಳಿಗೆ ಬಂದರೆ ಆಸ್ಪತ್ರೆಯ ಮಾದರಿ ಚಿತ್ರವು ಲಿಂಕ್ಡ್‌ಇನ್‌ ನಿಂದ ತೆಗೆದುಕೊಂಡ ಚಿತ್ರವಾಗಿದ್ದು ಅದಕ್ಕೆ ಬಾಬ್ರಿ ಹಾಸ್ಪಿಟಲ್ ಎಂದು ಫೋಟೊಶಾಪ್‌ ಮಾಡಿ ಬರೆಯಲಾಗಿದೆ.

ಒಟ್ಟಿನಲ್ಲಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಅಧಿಕೃತವಲ್ಲ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....